ಖಾಸ್ಗತೇಶ್ವರಮಠದ ಜಾತ್ರಾ ವೈಭವ

•ನಿತ್ಯ ನಡೆಯುವ ಸಪ್ತ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ 160ಕ್ಕೂ ಹೆಚ್ಚು ಗ್ರಾಮಗಳ ಭಕ್ತರು

Team Udayavani, Jul 9, 2019, 11:34 AM IST

vp-tdy-1..

ತಾಳಿಕೋಟೆ: ಜಾತ್ರೋತ್ಸವ ನಿಮಿತ್ತ ವಿದ್ಯುದ್ದೀಪಗಳಿಂದ ಅಲಂಕೃತಗೊಂಡ ಖಾಸ್ಗತೇಶ್ವರ ಮಠ.

ತಾಳಿಕೋಟೆ: ರಾಜ್ಯದ ಪ್ರತಿಷ್ಠಿತ ಮಠಗಳಲ್ಲಿ ಒಂದಾಗಿರುವ, ವಿರಕ್ತ ಸಂಪ್ರದಾಯದ ಖಾಸ್ಗತೇಶ್ವರ ಮಠ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಜು.16ರವರೆಗೆ ನಡೆಯಲಿವೆ.

ಶ್ರೀಮಠವು ವಿದ್ಯುದ್ದೀಪಗಳಿಂದ ಅಲಂಕೃತಗೊಂಡಿದ್ದು, ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ.

ಈಗಾಗಲೇ ಆರಂಭಗೊಂಡ ಸಪ್ತ ಭಜನೆಯಲ್ಲಿ 160ಕ್ಕೂ ಹೆಚ್ಚು ಗ್ರಾಮಗಳ ಭಕ್ತಾದಿಗಳು ದಿನನಿತ್ಯ ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಟ್ರ್ಯಾಕ್ಟರ್‌ ಸೇರಿದಂತೆ ಇನ್ನಿತರೆ ವಾಹನಗಳಲ್ಲಿ ಕೆಲ ಭಕ್ತರು ಆಗಮಿಸುತ್ತಿದ್ದರೆ, ಇನ್ನು ಕೆಲ ಭಕ್ತರು ಪಾದಯಾತ್ರೆ ಮಾಡುತ್ತ ‘ಓಂ ನಮಃ ಶಿವಾಯ’ ಪಂಚಾಕ್ಷರ ಮಂತ್ರ ಪಠಿಸುತ್ತ, ಭಜನೆ ಮಾಡುತ್ತ ಬರುತ್ತಿದ್ದಾರೆ.

9 ದಿನಗಳವರೆಗೆ ಜರುಗಲಿರುವ ಸಪ್ತ ಭಜನಾ ಕಾರ್ಯಕ್ರಮದಲ್ಲಿ 1ಗಂಟೆಗೆ ಒಂದು ಗ್ರಾಮದ ಭಕ್ತ ಸಮೂಹ ಮಾತ್ರ ಪಾಲ್ಗೊಳ್ಳುವ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ. ಹಗಲು-ರಾತ್ರಿ ನಡೆಯುವ ಶಿವ ಭಜನೆಯಲ್ಲಿ ಸರ್ವ ಜಾತಿ-ಜನಾಂಗದವರು ಪಾಲ್ಗೊಳ್ಳುತ್ತಿದ್ದಾರೆ.

ಮುಂಬೈ, ಪುಣೆ, ಗೋವಾ, ಬೆಂಗಳೂರು, ಹೈದರಾಬಾದ್‌, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಆಗಮಿಸಿದ ಭಕ್ತಾದಿಗಳಿಗೆ ತಂಗಲು ಮತ್ತು ದಾಸೋಹದ ವ್ಯವಸ್ಥೆಯನ್ನು ಶ್ರೀಮಠದಲ್ಲಿ ಮಾಡಲಾಗಿದೆ.

ಮುದ್ದೇಬಿಹಾಳ, ಅಮಲ್ಯಾಳ, ಕಲ್ಲದೇವನಹಳ್ಳಿ, ಬ್ಯಾಕೋಡ ಹೀಗೆ ವಿವಿಧೆಡೆಗಳಲ್ಲಿ ಶ್ರೀಮಠವು ಶಾಖಾ ಮಠಗಳನ್ನು ಹೊಂದಿದೆ.

ಮಠಕ್ಕೆ ಭಕ್ತರೊಬ್ಬರು ನೂತನವಾಗಿ ಗೋಪುರ ನಿರ್ಮಿಸಿದ್ದು, ಶ್ರೀಮಠಕ್ಕೆ ಕೂಡಿಸಲಾದ ಬೃಹದಾಕಾರದ ದ್ವಾರ ಬಾಗಿಲು ಭಕ್ತರ ಕಣ್ಮನ ಸೆಳೆಯುತ್ತಿದೆ. ಶ್ರೀಮಠದಲ್ಲಿ ಭಕ್ತರ ಬೇಡಿಕೆಯಂತೆ ಲಿಂ| ವಿರಕ್ತ ಮಹಾಸ್ವಾಮಿಗಳವರ ಅಮೃತಶಿಲಾ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಗೋಪಾಲ ಕಾವಲಿ ವಿಶೇಷ:ಪ್ರತಿ ವರ್ಷ ಜರುಗಲಿರುವ ಖಾಸ್ಗತೇಶ್ವರ ಜಾತ್ರಾ ಮಹೋತ್ಸವದಲ್ಲಿ ಗೋಪಾಲ ಕಾವಲಿ (ಮೊಸರು ಗಡಿಗೆ) ಒಡೆಯುವ ಕಾರ್ಯಕ್ರಮ ನಡೆಯುತ್ತಿದ್ದು, ಅಸಂಖ್ಯಾತ ಭಕ್ತಸಮೂಹ ಪಾಲ್ಗೊಳ್ಳುತ್ತದೆ. ಪಂಢ‌ರಪುರದ ವಿಠuಲನ ಜಾತ್ರೋತ್ಸವದಂದು ಜರುಗುವ ಗೋಪಾಲ ಕಾವಲಿಗೂ ಇಲ್ಲಿ ಜರುಗುವ ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮಕ್ಕೂ ಸಂಬಂಧವಿದೆ ಎಂಬ ಮಾತು ಹಿರಿಯರದ್ದಾಗಿದೆ. ಈ ಮೊಸರು ಗಡಿಗೆ ಒಡೆದಾಗ ಕೆಳಗೆ ನಿಂತ ಭಕ್ತರ ಮೈಮೇಲೆ ಮೊಸರು ಬಿದ್ದರೆ ಖಾಸ್ಗತನಿಗೆ ತಮ್ಮ ಬೇಡಿಕೆ ಮುಟ್ಟುತ್ತದೆ ಎಂಬುದು ಹಾಗೂ ಆ ಭಕ್ತನ ಮನೆಯಲ್ಲಿ ಹಾಲು ಮೊಸರಿನ ಹೈನುಗಾರಿಕೆಯಂತೆ ಸಂಪದ್ಭರಿತವಾಗುತ್ತದೆ ಎಂಬುದು ಭಕ್ತರ ವಾಡಿಕೆ ಇದೆ.

 

•ಜಿ.ಟಿ. ಘೋರ್ಪಡೆ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.