ಕೇಂದ್ರದ ಮಾರುಕಟ್ಟೆ ಪರಿಕಲ್ಪನೆ ರೈತರಿಗೆ ಅನುಕೂಲ


Team Udayavani, Nov 21, 2020, 7:53 PM IST

ಕೇಂದ್ರದ ಮಾರುಕಟ್ಟೆ ಪರಿಕಲ್ಪನೆ ರೈತರಿಗೆ ಅನುಕೂಲ

ವಿಜಯಪುರ: ಕೇಂದ್ರ ಸರ್ಕಾರ ಒಂದು ರಾಷ್ಟ್ರ,ಒಂದು ಮಾರುಕಟ್ಟೆ ಪರಿಕಲ್ಪನೆಯಲ್ಲಿ ಜಾರಿಗೆತಂದಿರುವ ಕೃಷಿ ವಿಷಯಕ್ಕೆ ಸಂಬಂಧಿಸಿದ ವಿವಿಧಕಾಯ್ದೆಗಳು ಐತಿಹಾಸಿಕ ಕಾಯ್ದೆಗಳಾಗಿವೆ. ಸದರಿಕಾಯ್ದೆಗಳಿಂದ ದೇಶದಲ್ಲಿ ಭವಿಷ್ಯದ ದಿನಗಳಲ್ಲಿ ದೇಶದ ಕೃಷಿ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ನೆರವಾಗಲಿದೆ ಎಂದು ಆತ್ಮ ಯೋಜನೆ ಉಪ ಯೋಜನಾ ನಿರ್ದೇಶಕ ಡಾ| ಎಂ.ಬಿ. ಪಟ್ಟಣಶೆಟ್ಟಿ ಅಭಿಪ್ರಾಯಪಟ್ಟರು.

ಕೃಷಿ ಇಲಾಖೆಯ ಆತ್ಮ ಯೋಜನೆ ರೈತರ ಸಲಹಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದ ಕುರಿತ ಅಗತ್ಯ ವಸ್ತುಗಳಕಾಯ್ದೆ-1955ರ ಕಾಯ್ದೆಯನ್ವಯ ರೈತರ ಉತ್ಪನ್ನ ಮಾರಾಟ ಮತ್ತು ಉತ್ತೇಜನ-ಸೌಲಭ್ಯದ ವಾಣಿಜ್ಯ ಕಾಯ್ದೆ, 2020 ಮತ್ತು ಬೆಲೆ ಖಾತರಿಮತ್ತು ಕೃಷಿ ಸೇವೆಗಳು (ರೈತರ ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಕಾಯ್ದೆ-2020 ಜಾರಿಗೆ ತರಲಾಗಿದೆ. ಸದರಿ ಕಾಯ್ದೆಗಳು ಭವಿಷ್ಯದ ದಿನಗಳಲ್ಲಿ ರೈತರ ಬದುಕನ್ನು ಹಸನು ಮಾಡಲಿವೆಎಂದು ಹೇಳಿದರು.

ಸದರಿ ಕಾಯ್ದೆಗಳು ಒಂದು ರಾಷ್ಟ್ರ ಒಂದು ಮಾರುಕಟ್ಟೆ ಎಂಬ ತತ್ವದ ಮೇಲೆ ಆಧಾರಿತವಾಗಿದ್ದು, ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ಎಪಿಎಂಸಿ, ಇತರೆ ಕೃಷಿ ಸಂಬಂಧಿತ ಕಾಯ್ದೆ ಕಾನೂನುಗಳಿಗೆ ವ್ಯತಿರಿಕ್ತವಾಗಿಲ್ಲ, ಬದಲಾಗಿ ಪರಸ್ಪರ ಪೂರಕಾಗಿವೆ. ಎಪಿಎಂಸಿ ಕಾಯ್ದೆಗಳನ್ನು ಸೂಕ್ತ ತಿದ್ದುಪಡಿ ಸಹಿತ ಮುಂದುವರಿಸಲಾಗಿದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಇನ್ನು ಮುಂದೆ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾತ್ರವಲ್ಲ, ಎಪಿಎಂಸಿ ಹೊರಗಡೆ ದೇಶದ ಯಾವುದೇ ಮೂಲೆಯಲ್ಲಿ ಕೃಷಿ ಉತ್ಪನ್ನ ಮಾರಾಟಕ್ಕೆ ರೈತರಿಗೆ ಅವಕಾಶ ಕಲ್ಪಿಸಿದೆ ಎಂದು ವಿವರಿಸಿದರು.

ಪ್ಯಾನ್‌ ಕಾರ್ಡ್‌ ಹೊಂದಿದ ಯಾವುದೇ ವ್ಯಕ್ತಿ, ಖಾಸಗಿ ಕಂಪನಿ, ಸಂಘ ಸಂಸ್ಥೆಗಳು, ಸಹಕಾರಸಂಘಗಳು, ರೈತ ಉತ್ಪಾದಕ ಕಂಪನಿಗಳುಹಾಗೂ ಸ್ವಸಹಾಯ ಸಂಘಗಳು ಕೃಷಿ ಉತ್ಪನ್ನಗಳ ವ್ಯವಹಾರದಲ್ಲಿ ತೊಡಗಬಹುದು. ಇದಲ್ಲದೇ, ಮಹತ್ವಾಕಾಂಕ್ಷೆಯ ಆತ್ಮ ನಿರ್ಭರ ಭಾರತಅಭಿಯಾನದಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನಯೋಜನೆಯಲ್ಲಿ, ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತುನೀಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗಾಗಿ ಸುಮಾರು 1 ಲಕ್ಷ ಕೋಟಿ ರೂ. ವಿನಿಯೋಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ರೈತರು ಎಲ್ಲಕ್ಕೂ ಸರ್ಕಾರದ ಮೇಲೆ ಅವಲಂಬಿತರಾಗದೇ, ತಮ್ಮದೇ ಆದ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಿಕೊಂಡು ತಮ್ಮಉತ್ಪನ್ನಗಳ ಉತ್ಪಾದನೆ, ಸಂಸ್ಕರಣೆ, ಮೌಲ್ಯವರ್ಧನೆಹಾಗೂ ಮಾರುಕಟ್ಟೆಯಲ್ಲಿ ತೊಡಗಿಕೊಳ್ಳುವುದರ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯೋಗ ಮಾಡುವಲ್ಲಿ ನೆರವಾಗಲಿದೆ ಎಂದರು. ಕೃಷಿಕ ಸಮಾಜದ ತಾಲೂಕ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕೃಷಿ ಅಧಿಕಾರಿಗಳಾದ ಎಚ್‌.ವೈ. ಸಿಂಗೆಗೋಳ, ಹುಣಶ್ಯಾಳ, ಪ್ರಗತಿಪರ ರೈತರಾದ ಬಾಗಪ್ಪಗೌಡ ಪಾಟೀಲ, ಶರಣು ಸಾಂಬಾ, ದೇವೇಂದ್ರರಾವ್‌ ಮಳ್ಳಿ, ಮಹಾಂತೇಶ ಪೂಜಾರಿ, ಅನುಸೂಯಾ ಪಾರಗೊಂಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.