ಸಚಿವರ ತವರಲ್ಲಿ ನಿಂತಿಲ್ಲ ಬೀದಿ ಶೌಚ


Team Udayavani, Oct 10, 2018, 12:40 PM IST

vij-2.jpg

ವಿಜಯಪುರ: ಸ್ವತ್ಛ ಭಾರತದ ಭಾಗವಾದ ಬಯಲು ಶೌಚ ಮುಕ್ತ ಭಾರತ ಕಟ್ಟುವುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಕನಸು. ಈ ಯೋಜನೆ ಅನುಷ್ಠಾನಕ್ಕೆ ಪ್ರತ್ಯೇಕವಾಗಿ ನೈರ್ಮಲ್ಯ ಖಾತೆ ಸೃಷ್ಟಿಸಿ ಸಚಿವರನ್ನು ನೇಮಿಸಿದ್ದಾರೆ. ಆದರೆ ಪ್ರಸಕ್ತ ವರ್ಷವೇ 40 ಕೋಟಿ ರೂ. ಖರ್ಚು ಮಾಡಿದರೂ ಕೇಂದ್ರದ ನೈರ್ಮಲ್ಯ ಖಾತೆ ಸಚಿವರ
ತವರಿನಲ್ಲೇ ಘೋಷಿತ ಗ್ರಾಮಗಳಲ್ಲೇ ಇನ್ನೂ ಬೀದಿ ಶೌಚ ನಿಂತಿಲ್ಲ.

ಕೇಂದ್ರ ಸರ್ಕಾರದ ನೈರ್ಮಲ್ಯ ಖಾತೆ ಸಚಿವ ರಮೇಶ ಜಿಗಜಿಣಗಿ ಕರ್ನಾಟಕ ರಾಜ್ಯದವರೇ ಆಗಿದ್ದು ವಿಜಯಪುರ ಲೋಕಸಭೆ ಕ್ಷೇತ್ರ ಪ್ರತಿನಿಧಿಸುತ್ತಿರುವ ಹಿರಿಯ ಸಚಿವ. ನೈರ್ಮಲ್ಯ ಸಚಿವರ ತವರು ರಾಜ್ಯ ಕರ್ನಾಟಕ ಈಗಾಗಲೇ
20 ಜಿಲ್ಲೆಗಳು ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಿದ್ದು, 7 ಜಿಲ್ಲೆಗಳು ಘೋಷಣೆಗೆ ಕಾಯುತ್ತಿವೆ.

ಉತ್ತರ ಕರ್ನಾಟಕ ಭಾಗದ ವಿಜಯಪುರ, ಬೀದರ ರಾಯಚೂರು ಜಿಲ್ಲೆಗಳಿಗೆ ಶೌಚಾಲಯ ನಿರ್ಮಾಣಕ್ಕೆ ನವೆಂಬರ್‌ ಅಂತ್ಯದವರೆಗೆ ಗಡುವು ನೀಡಲಾಗಿದೆ. ಈ ಅವಧಿಯಲ್ಲಿ ಸಂಪೂರ್ಣವಾಗಿ ಪ್ರತಿ ಕುಟುಂಬಗಳು ಶೌಚಾಲಯ ಹೊಂದಿ ಕರ್ನಾಟಕ ಸಂಪೂರ್ಣ ಬಯಲು ಶೌಚ ಮುಕ್ತ ರಾಜ್ಯ ಎಂಬ ಗುರಿ ಸಾಧಿಸುವಂತೆ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ. ಇದಕ್ಕಾಗಿ ಸರ್ಕಾರ ನೂರಾರು ಕೋಟಿ ರೂ. ಅನುದಾನ ನೀಡುತ್ತಿದ್ದು, ಹಣ ಬಳೆಯತ್ತ ಅಧಿಕಾರಿಗಳು ಚಿತ್ತ ನೆಟ್ಟಿದ್ದಾರೆ.

ಆದರೆ ಬಯಲು ಶೌಚಾಲಯ ಮುಕ್ತ ಗ್ರಾಮ ಎಂದು ಘೋಷಿಸಿಕೊಂಡ ಹಳ್ಳಿಗಳಲ್ಲೇ ಬಯಲು ಶೌಚ ಮುಕ್ತವಾಗಿಯೇ ನಡೆದಿದೆ. ಅಧಿಕಾರಿಗಳು ಹಣ ಬಳಕೆ ಹಾಗೂ ಶೌಚಾಲಯ ಕಟ್ಟಡ ನಿರ್ಮಾಣದ ಗುರಿ ಸಾಧನೆಗೆ ಆದ್ಯತೆ ನೀಡುತ್ತಿದ್ದಾರೆಯೇ ಹೊರತು, ಬಯಲು ಶೌಚ ಮುಕ್ತಗೊಳಿಸುವ ಆಶಯ ಈಡೇರಿಸುವಲ್ಲಿ ಆಸಕ್ತಿ ತೋರಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಬಯಲು ಶೌಚ ಮುಕ್ತ ಗ್ರಾಮ ಯೋಜನೆಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಬಸವನಬಾಗೇವಾಡಿ ಶೇ. 100 ಸಾಧನೆ ಮಾಡಿದ್ದರೆ, ಇಂಡಿ, ವಿಜಯಪುರ, ಮುದ್ದೇಬಿಹಾಳ ಶೇ. 90 ಗಡಿ ದಾಡಿದೆ. ಸಿಂದಗಿ ಇನ್ನೂ ಶೇ. 80 ಗಡಿಯಲ್ಲಿ ನಿಂತಿದೆ. ಇದಕ್ಕಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲೇ ಸರ್ಕಾರ 52 ಕೋಟಿ ರೂ. ನೀಡಿದ್ದು, ಸುಮಾರು 40 ಕೋಟಿ ರೂ. ಖರ್ಚು ಮಾಡಿದ್ದರೂ ಇನ್ನೂ ಬಯಲು ಶೌಚಾಲಯಕ್ಕೆ ಮುಕ್ತಿ ದೊರಕಿಲ್ಲ.

ವಿಜಯಪುರ ಜಿಲ್ಲೆಯಲ್ಲೇ ಶೇ. 93.54 ಗುರಿ ಸಾಧನೆ ಮಾಡಿದ್ದು, 16,777 ಕುಟುಂಬಗಳು ಮಾತ್ರ ವೈಯಕ್ತಿ ಶೌಚಾಲಯ ನಿರ್ಮಾಣ ಬಾಕಿ ಇದೆ ಎಂದು ಸರ್ಕಾರಿ ದಾಖಲೆಗಳು ಹೇಳುತ್ತವೆ. ಸರ್ಕಾರ ಗುರಿ ಸಾಧನೆಗೆ ತಾಕೀತು ಮಾಡುತ್ತಿರುವ ಕಾರಣ ಸಾಧನೆಯ ದಾಖಲೆ ಮಾಡುವ ಧಾವಂತದಲ್ಲಿ ಅಧಿಕಾರಿಗಳು ಸರ್ಕಾರ ನೀಡಿದ ಅನುದಾನ ಬಳಕೆ ಮಾಡುವ ಆರ್ಥಿಕ ಗುರಿ ಸಾಧನೆಗೆ ಸರ್ಕಾರಿ ದಾಖಲೆಯಲ್ಲಿ ಬಯಲು ಶೌಚಾಲಯ ಮುಕ್ತ ಗ್ರಾಮಗಳು ಎಂದು ಘೋಷಣೆ ಮಾಡಲು ಆರಂಭಿಸಿದ್ದಾರೆ. ವಾಸ್ತವಿಕವಾಗಿ ಜಿಲ್ಲೆಯಲ್ಲಿ ಬಯಲು ಶೌಚಮುಕ್ತ ಘೋಷಿತ ಗ್ರಾಮಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಯಲು ಶೌಚ ನಿಂತಿಲ್ಲ.

ಜಿಲ್ಲಾ ಕೇಂದ್ರಕ್ಕೆ ಕೂಗಳತೆ ದೂರದಲ್ಲಿರುವ ತೊರವಿ ಗ್ರಾಮ ಬಯಲು ಶೌಚ ಮುಕ್ತ ಎಂದು ಸರ್ಕಾರಿ ದಾಖಲೆಯಲ್ಲಿ ಸೇರ್ಪಡೆ ಆಗಿದೆ. ಆದರೆ ವಾಸ್ತವಿಕವಾಗಿ ಘೋಷಿತ ಬಹುತೇಕ ಹಳ್ಳಿಗಳಲ್ಲಿ ಇನ್ನೂ ರಸ್ತೆ ಬದಿಗಳು, ಮುಳ್ಳಿನ ಪೊದೆಗಳು ಇನ್ನೂ ಬಯಲು ಶೌಚಾಲಯ ಜೀವಂತಕ್ಕೆ ಸಾಕ್ಷಿ ನೀಡುತ್ತವೆ. ಸರ್ಕಾರದ ಸಾಧನೆ ಹಣ ಖರ್ಚು ಮಾಡಲು, ಕಾಗದದಲ್ಲಿ ಸಾಧನೆ ಮೆರೆಯಲು ಎಂದು ಅಣಕವಾಡುತ್ತಿದೆ. ಇನ್ನಾದರೂ ಸರ್ಕಾರ ಮತ್ತು ಅಧಿಕಾರಿಗಳು ಧಾವಂತದ ಸಾಧನೆ-ದಾಖಲೆ ಮಾಡುವುದಕ್ಕಿಂತ ವಾಸ್ತವಿಕ ನೆಲೆಗಟ್ಟಿನಲ್ಲಿ ಸಾಧನೆ ಮಾಡಬೇಕಿದೆ.

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.