ಅನಗತ್ಯವಾಗಿ ಬೀದಿಗೆ ಬಂದವರಿಗೆ ಪೊಲೀಸರಿಂದ ಲಾಠಿ ಏಟು


Team Udayavani, May 1, 2021, 3:07 PM IST

ಜಹಗ್ದೆಡದವ್ದೆ

ವಿಜಯಪುರ: ಕೋವಿಡ್‌ ಎರಡನೇ ಅಲೆಯ ಕೊಂಡಿ ಕಳಚುವ ಉದ್ದೇಶಿಂದ ರಾಜ್ಯ ಸರ್ಕಾರ ಕರ್ಫ್ಯೂ ಹೇರಿದ್ದು ಜಿಲ್ಲೆಯಲ್ಲಿ ಪೊಲೀಸ್‌ ಕಟ್ಟುನಿಟ್ಟಿನ ಕ್ರಮ ಬಿಗಿಯಾಗಿದೆ. ಅನಗತ್ಯ ಬೀದಿಗೆ ಬಂದವರು ಲಾಠಿ ಏಟು, ದಂಡಕ್ಕೆ ಸುಸ್ತು ಹೊಡೆದಿದ್ದಾರೆ.

ಮತ್ತೂಂದೆಡೆ ಮಹಾರಾಷ್ಟ್ರ ರಾಜ್ಯದಿಂದ ಕೋವಿಡ್‌ ಸೊಂಕು ರಹಿತ ವೈದ್ಯಕೀಯ ಪ್ರಮಾಣಪತ್ರವಿಲ್ಲದೇ ಜಿಲ್ಲೆಗೆ ಪ್ರವೇಶಿಸುವವರ ವಿರುದ್ಧ ಹದ್ದಿನ ಕಣ್ಣಿಟ್ಟಿರುವ ಪೊಲೀಸರು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಿದ್ದಾರೆ. ಕರ್ಫ್ಯೂ ಜಾರಿಗೆ ತಂದಿದ್ದರೂ ಮುಖ್ಯ ದ್ವಾರಗಳ ಹೊರತಾಗಿ ಬಡಾವಣೆ, ಗಲ್ಲಿಗಳಲ್ಲಿ ಓಡಾಟ ಕಂಡು ಬರುತ್ತಿದೆ. ಇದರಿಂದಾಗಿ ಪೊಲೀಸರು ಇದೀಗ ನಗರದ ಪ್ರಮುಖ ರಸ್ತೆಗಳಿಗೆ ಆಯಕಟ್ಟು ಪ್ರದೇಶದಲ್ಲಿ ಬ್ಯಾರಿಕೇಡ್‌ ಅಳವಡಿಸಿದ್ದರೆ, ಮತ್ತೂಂದೆ ಮುಖ್ಯ ರಸ್ತೆ ಸಂಪರ್ಕಿಸುವ ಬಡಾವಣೆ, ಗಲ್ಲಿ ರಸ್ತೆಗಳಿಗೂ ಬ್ಯಾರಿಕೇಡ್‌, ಮುಳ್ಳು ಕಂಟಿಗಳನ್ನು ಹಾಕಿ ಜನರ ಓಡಾಡವನ್ನು ಸಂಪೂರ್ಣ ನಿರ್ಬಂಧಿಸಿದ್ದಾರೆ.

ಇನ್ನು ಜಿಲ್ಲೆಯ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ತಿಕೋಟಾ ತಾಲೂಕು ಕೇಂದ್ರದಲ್ಲಿ ಪಪಂ ಮುಖ್ಯಾಧಿಕಾರಿ ರುದ್ರಗೌಡ ಸೋಲಾಪುರ, ಪಿಎಸೈ ಬಸವರಾಜ ಬಿಸನಕೊಪ್ಪ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿತ್ತು. ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಾದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತ, ಹಾಜಿಮಸ್ತಾನ್‌ ಪ್ರವೇಶ ದ್ವಾರ, ಬಸವೇಶ್ವರ ವೃತ್ತ ಹಾಗೂ ಜತ್‌ ರಸ್ತೆಗಳಲ್ಲಿ ಬ್ಯಾರಿಕೇಡ್‌ ಅಳವಡಿಸಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ಸಂಪೂರ್ಣ ನಿಷೇಧಿಸಲಾಯಿತು.

ಇದಲ್ಲದೇ ಜನರಲ್ಲಿ ಕರ್ಫ್ಯೂ ಜಾರಿಯ ಕುರಿತು ತಿಳಿವಳಿಕೆ ನೀಡಲು ಪಟ್ಟಣದ ಪ್ರಮುಖ ರಸ್ತೆಗಳು, ವಾರ್ಡ್‌ಗಳಲ್ಲಿ ಟಂಟಂಗೆ ಧ್ವನಿವರ್ಧಕದ ಜಾಗೃತಿ ಮೂಡಿಸಲಾಯಿತು. ಕೋವಿಡ್‌ ವಿರುದ್ಧ ಹೋರಾಟದಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು. ಮನೆಗಳಿಂದ ಅನಗತ್ಯ ಹೊರಗೆ ಬರಬಾರದು. ಮನೆಗಳಲ್ಲಿದ್ದರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಿ, ನಿಯಮಿತವಾಗಿ ಸ್ಯಾನಿಟೈಸ್‌ ಬಳಸಿ ಕೈಗಳನ್ನು ತೊಳೆಯಿರಿ. ಸರ್ಕಾರ ರೂಪಿಸಿರುವ ಕೋವಿಡ್‌ ನಿಯಗಳನ್ನು ಜಾರಿಗೆ ತನ್ನಿ ಎಂದು ಮನವಿ ಮಾಡಿಕೊಳ್ಳಲಾಗುತ್ತಿತ್ತು.

ಇದರ ಹೊರತಾಗಿಯೂ ಮನೆಗಳಿಂದ ಹೊರಗೆ ಬಂದವರಿಗೆ, ಬೈಕ್‌ ಮೇಲೆ ಸುತ್ತಾಡುವವರಿಗೆ, ಕೆಲಸ ನಿಮಿತ್ತ ಹೊರಗೆ ಬಂದರೂ ಮಾಸ್ಕ್ ಇಲ್ಲದವರಿಗೆ, ಅದರಲ್ಲೂ ಕರ್ಫ್ಯೂ ಸಡಿಲಿಕೆ ಸಂದರ್ಭದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ವ್ಯಾಪಾರಿಗಳಿಗೆ, ಅನಗತ್ಯವಾಗಿ ಬೈಕ್‌ಗಳ ಮೇಲೆ ಬೀದಿ ಸುತ್ತುವವರಿಗೆ ಪಪಂ ಸಿಬ್ಬಂದಿ ದಂಡ ವಿಧಿಸಿದರು. ಈ ಮಧ್ಯೆ ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ ರಾಜ್ಯದಿಂದ ಅಕ್ರಮವಾಗಿ ಜಿಲ್ಲೆಗೆ ಪಡೆಯುವುದನ್ನು ತಡೆಗಟ್ಟಲು ತೆರೆದಿರುವ ಚೆಕ್‌ಪೋಸ್ಟ್‌ ಅಧಿಕಾರಿಗಳು ನಿಗಾ ಇರಿಸಿದ್ದರು. ಕೋವಿಡ್‌ ನಿಯಂತ್ರಣ ಸೆಕ್ಟರ್‌ ಅಧಿ ಕಾರಿ ರುದ್ರಗೌಡ ಸೋಲಾಪುರ ಕನಮಡಿ, ತೆಲಸಂಗ್‌ ಕ್ರಾಸ್‌, ಅಳಗಿನಾಳ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಕರ್ತವ್ಯ ನಿರತ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.