ಸದ್ದಿಲ್ಲದೆ ಶುರುವಾಗಿದೆ ವೃಕ್ಷ ಅಭಿಯಾನ


Team Udayavani, Jun 26, 2021, 8:54 PM IST

ertyuytrerty

ಮುದ್ದೇಬಿಹಾಳ: ಪ್ರಕೃತಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ, ಧಾರ್ಮಿಕ ಗ್ರಂಥಗಳಲ್ಲಿ ದೇವತೆಗಳ ಆವಾಸ ಸ್ಥಾನ ಎನಿಸಲ್ಪಟ್ಟಿರುವ, ದಿನದ 24 ಗಂಟೆಯೂ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೊಂದಿರುವ ವೃಕ್ಷರಾಜ ಅರಳಿ ಮರ (ಅಶ್ವತ್ಥ ವೃಕ್ಷ) ಬೆಳೆಸುವ ಅಭಿಯಾನ ಮುದ್ದೇಬಿಹಾಳ ಪಟ್ಟಣದಲ್ಲಿ ಉತ್ಸಾಹಿ ಪರಿಸರ ಪ್ರೇಮಿ ಯುವಕ ಸಿದ್ದನಗೌಡ ಪಾಟೀಲ ನೇತೃತ್ವದಲ್ಲಿ ಸದ್ದಿಲ್ಲದೆ ನಡೆದಿದೆ. ಜನತೆಗೆ ಅರಳಿ ಮರದ ಮಹತ್ವ ತಿಳಿಸಿಕೊಡುವಲ್ಲಿ ಕಾರ್ಯನಿರತರಾಗಿರುವ ಸಿದ್ದನಗೌಡರು ತಮ್ಮ ಸ್ವಂತ ಹಣದಲ್ಲಿ ಅರಳಿ ಮರದ ಸಸಿ, ಗಿಡಗಳನ್ನು ಖರೀದಿಸಿ ಸಾರ್ವಜನಿಕರು, ಸಂಘ ಸಂಸ್ಥೆಯವರು, ಪರಿಸರ ಪ್ರೇಮಿಗಳಿಗೆ ಉಚಿತವಾಗಿ ವಿತರಿಸಿ ಬೆಳೆಸುವಂತೆ ಪ್ರೋತ್ಸಾಹ ನೀಡುತ್ತಿದ್ದಾರೆ. ಎಲ್ಲೆಲ್ಲಿ ಇವುಗಳನ್ನು ನೆಡಲಾಗಿದೆಯೋ ಅಲ್ಲಿಗೆಲ್ಲ ಖುದ್ದು ತಾವೇ ಭೇಟಿ ನೀಡಿ ನೀರು ಹಾಕಿದ್ದಾರೋ, ಇಲ್ವೋ ಅನ್ನೋದನ್ನು ಪರಿಶೀಲಿಸುತ್ತಾರೆ.

ನೀರು ಹಾಕಿರದಿದ್ದರೆ ತಾವೇ ನೀರು ಹಾಕಿ, ನೆಟ್ಟವರಿಗೆ ನಿತ್ಯವೂ ನೀರು ಹಾಕಿ ಬೆಳೆಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಕಳೆದ 2 ತಿಂಗಳಿನಿಂದ ಅಭಿಯಾನವನ್ನು ಸದ್ದಿಲ್ಲದೆ ನಡೆಸುತ್ತಿರುವ ಸಿದ್ದನಗೌಡರು ಜನ್ಮದಿನ, ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರನ್ನು ಭೇಟಿಯಾಗಿ ಅರಳಿ ಮರದ ಮಹತ್ವ ಬಣ್ಣಿಸಿ, ಅಂಥವರ ಮನವೊಲಿಸಿ, ಜನ್ಮದಿನ, ವಾಷಿಕೋತ್ಸವ ಸ್ಮರಣಾರ್ಥ ನೆಡುವಂತೆ ಮಾಡುವಲ್ಲಿ ಯಶಸ್ಸು ಪಡೆಯುತ್ತಿದ್ದಾರೆ. ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿಯವರ ಪತ್ನಿ ಮಹಾದೇವಿ ಪಾಟೀಲ, ಮಾಜಿ ಸಚಿವ ಸಿ.ಎಸ್‌. ನಾಡಗೌಡ, ವಿಜಯಪುರ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಶಿವಕುಮಾರ ಶಾರದಳ್ಳಿ, ಹಸಿರು ತೋರಣ ಗೆಳೆಯರ ಬಳಗದವರು, ಬಾಲ್ಯ ಸ್ನೇಹಿತರ ಗೆಳೆಯರ ಬಳಗದವರು ಸೇರಿದಂತೆ ಹಲವರು ಅರಳಿಮರದ ಸಸಿ ನೆಟ್ಟು ಇತರರಿಗೆ ಪ್ರೇರಣೆ ನೀಡಿದ್ದಾರೆ.

ಇದುವರೆಗೂ ವಿವಿಧೆಡೆ 50ಕ್ಕೂ ಹೆಚ್ಚು ಅರಳಿಮರದ ಸಸಿಗಳನ್ನು ನೆಡಲಾಗಿದ್ದು ಮಳೆಗಾಲದಲ್ಲಿ ಎಷ್ಟು ಸಾಧ್ಯವೋ ಅಷ್ಟು ಹೆಚ್ಚು ಸಸಿ ನೆಡುವ ಸಂಕಲ್ಪ ತೊಟ್ಟಿರುವ ಸಿದ್ದನಗೌಡರು ಯಾರಾದರೂ ತಮ್ಮನ್ನು ಸಂಪರ್ಕಿಸಿದರೆ (ಮೋ. 9620460299) ಉಚಿತವಾಗಿ ಸಸಿ ನೀಡುವುದಾಗಿ ಹೇಳಿದ್ದಾರೆ. ಏನಿದರ ವಿಶೇಷತೆ?: ಬಹುಪಯೋಗಿ ಅರಳಿ ಮರ ಉಳಿದ ಜಾತಿಯ ಮರಗಳಿಗಿಂತ ಹೆಚ್ಚು ಆಮ್ಲಜನಕ ಉತ್ಪಾದಿಸುವ ಸಾಮರ್ಥಯ ಹೊಂದಿದೆ. ಬೇರೆ ಮರಗಳು ಕೇವಲ ಸೂರ್ಯನ ಬೆಳಕಿನಲ್ಲಿ ಮಾತ್ರ ದ್ಯುತಿ ಸಂಶ್ಲೇಷಣಾ ಕ್ರಿಯೆ ನಡೆಸಿದರೆ, ಅರಳಿ ಮರ ಚಂದ್ರನ ಬೆಳಕಿನಲ್ಲೂ ಈ ಕ್ರಿಯೆ ನಡೆಸುವ ಸಾಮರ್ಥಯ ಹೊಂದಿದೆ. ನಗರದ ವಾಯು ಮಾಲಿನ್ಯ ನಿಯಂತ್ರಣದಲ್ಲಿ ಈ ಮರಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಸಸ್ಯ ತಜ್ಞ ವಿಜಯ್‌ ನಿಶಾಂತ್‌ ಹೇಳುತ್ತಾರೆ. ಹಾಗಾಗಿಯೇ ಇದನ್ನು ದಿನದ 24 ಗಂಟೆ ನಿರಂತರ ಆಮ್ಲಜನಕ ಉತ್ಪಾದಿಸುವ ಮರ ಎನ್ನಲಾಗುತ್ತದೆ.

ಬಹುಪಯೋಗಿ ಮರ: ದೇವಸ್ಥಾನವಿರುವಲ್ಲಿ ಈ ಮರ ಇದ್ದೇ ಇರುತ್ತದೆ. ಭಕ್ತರು ಇದಕ್ಕೆ ಪೂಜಿಸುವುದನ್ನೂ ಕಾಣುತ್ತೇವೆ. ಇದರ ಎಲೆಗಳಲ್ಲಿ ಪ್ರೋಟಿನ್‌ ಅಂಶ ಹೆಚ್ಚಾಗಿದ್ದು ದನಕರುಗಳಿಗೆ, ಆನೆಗಳಿಗೆ ಇದು ಉತ್ತಮ ಮೇವು. ತೊಗಟೆಯನ್ನು ರಾಸಾಯನಿಕ ದ್ರವ ಟ್ಯಾನಿನ್‌ ತೆಗೆಯಲು, ಕಷಾಯ ಮಾಡಿ ಕಜ್ಜಿ, ಹುಣ್ಣುಗಳಿಗೆ ಔಷಧವಾಗಿ ಬಳಸಲು ಉಪಯೋಗಿಸುತ್ತಾರೆ. ನಾರನ್ನು ಕಾಗದ, ಜಿಗುಟಾದ ಹಾಲನ್ನು ರಬ್ಬರ್‌, ಲೆಟೆಕ್ಸ್‌ ತಯಾರಿಸಲು ಬಳಸುತ್ತಾರೆ. ಇದರ ಅರಗನ್ನು ಮರದ ರಂಧ್ರ ಮುಚ್ಚಲು, ಚಿನ್ನ, ಬೆಳ್ಳಿ ಆಭರಣ ಮಾಡಲು ಬಳಸುತ್ತಾರೆ. ಇದರ ಹಲಗೆಯನ್ನು ಪೆಟ್ಟಿಗೆ, ಬೆಂಕಿಪೊಟ್ಟಣ ತಯಾರಿಕೆಗೆ ಬಳಸುತ್ತಾರೆ. ಎಲೆಯ ಬೂದಿಯನ್ನು ಸುಟ್ಟಗಾಯಕ್ಕೆ ಎಣ್ಣೆಯೊಂದಿಗೆ ಲೇಪನ ಮಾಡುತ್ತಾರೆ. ಇದರ ಕಟ್ಟಿಗೆಯನ್ನು ಹೋಮ ಹವನಾದಿ ಧಾರ್ಮಿಕ ವ್ರತಾಚರಣೆಗಳಲ್ಲಿ, ಒಲೆಗೆ ಸೌದೆಯಾಗಿ ಉಪಯೋಗಿಸುತ್ತಾರೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.