ಬೇಡಿಕೆ ಈಡೇರಿಕೆಗೆ ಗ್ರಾಮ ಲೆಕ್ಕಾಧಿಕಾರಿಗಳ ಮನವಿ


Team Udayavani, Jan 22, 2022, 5:40 PM IST

22villageaccountant

ಮುದ್ದೇಬಿಹಾಳ: ಕಂದಾಯ ಇಲಾಖೆಯ ಆಡಳಿತ ಸುಧಾರಣೆಗೆ ಹಾರ್ನಳ್ಳಿ ರಾಮಸ್ವಾಮಿ ಅಧ್ಯಕ್ಷತೆಯ ಮೊದಲ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ವರದಿಗಳ ಶಿಫಾರಸನ್ನು ಅನುಷ್ಠಾನಗೊಳಿಸುವುದು ಮತ್ತು ತಮ್ಮ ಬೇಡಿಕೆ ಈಡೇರಿಕೆ ಕುರಿತು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಮುದ್ದೇಬಿಹಾಳ ತಾಲೂಕು ಘಟಕದ ಸದಸ್ಯರು ತಹಶೀಲ್ದಾರ್‌ ಬಿ.ಎಸ್‌. ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು.

ಶಿಫಾರಸು ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ವರದಿ ನೀಡುವಂತೆ ಸೂಚಿಸಿದ್ದಾರೆ. ಈಗಾಗಲೇ ಪ್ರಾದೇಶಿಕ ಆಯುಕ್ತರು ಸಲ್ಲಿಸಿರುವ ವರದಿಯಲ್ಲಿನ ಎಲ್ಲ ಅಂಶಗಳಿಗೂ ಸಂಘವು ಆಕ್ಷೇಪಣೆ ಸಲ್ಲಿಸುತ್ತದೆ ಎಂದು ತಿಳಿಸಿ ಪ್ರತಿಯೊಂದು ಶಿಫಾರಸಿಗೂ ಸಕಾರಣ ಸಹಿತ ಆಕ್ಷೇಪಣೆಯ ವಿವರಗಳನ್ನು ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಸಂಖ್ಯೆಯನ್ನು ಸೀಮಿತಗೊಳಿಸುವುದು, ಗ್ರಾಮ ಲೆಕ್ಕಾಧಿಕಾರಿಗಳ 3101 ಹುದ್ದೆಗಳನ್ನು ಹೆಚ್ಚುವರಿ ಎಂದು ಪರಿಗಣಿಸಿ ಹಾಗೆ ಹೆಚ್ಚುವರಿಯಾದವರನ್ನು ಗ್ರಾಪಂಗಳಲ್ಲಿ ಖಾಲಿ ಇರುವ ಕಾರ್ಯದರ್ಶಿ ಹುದ್ದೆಗೆ ಮರು ನೇಮಿಸುವುದು, ಗ್ರಾಮ ಲೆಕ್ಕಾಧಿಕಾರಿಗಳನ್ನೂ ಸಹ ಭೂಮಾಪನ ವಿಧಾನಗಳಲ್ಲಿ ತರಬೇತಿಗೊಳಿಸಿ ಅವರು ದ್ವಿತೀಯ ದರ್ಜೆ ಮಾಪಕರಾಗಿ ಕಾರ್ಯನಿರ್ವಹಿಸುವುದು ಹಾಗೂ ಗ್ರಾಮ ಸಹಾಯಕರ ಹುದ್ದೆಗಳನ್ನು ರದ್ದುಪಡಿಸುವುದರ ಬಗ್ಗೆ ಆಡಳಿತ ಸುಧಾರಣಾ ಆಯೋಗ ವರದಿ ಸಲ್ಲಿಸಿದ್ದು ಇದಕ್ಕೆ ಆಕ್ಷೇಪಣೆಯ ವರದಿ ನೀಡುವುದು ಹೀಗೆ ಒಟ್ಟು 4 ಪ್ರಮುಖ ಶಿಫಾರಸುಗಳಿಗೆ ಸಂಘದ ತಕರಾರುಗಳನ್ನು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಕಂದಾಯ ಇಲಾಖೆಯು ಎಲ್ಲ ಇಲಾಖೆಗಳ ಮಾತೃ ಇಲಾಖೆಯಾಗಿದೆ. ಆಯೋಗವು ಕಂದಾಯ ಇಲಾಖೆಯ ಆಡಳಿತ ಯಂತ್ರಕ್ಕೆ ಸಂಬಂಧಿಸಿದಂತೆ ಕೆಲವು ವ್ಯತಿರಿಕ್ತ ವರದಿಗಳನ್ನು ನೀಡಿದ್ದು ಅವುಗಳನ್ನು ಜಾರಿಗೊಳಿಸಬಾರದು ಮತ್ತು ಈ ಬಗ್ಗೆ ಶಿಫಾರಸು ಮಾಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಂಘದ ಅಧ್ಯಕ್ಷ ಗಂಗಾಧರ ಜೂಲಗುಡ್ಡ, ಪ್ರಧಾನ ಕಾರ್ಯದರ್ಶಿ ಸಂಜು ಜಾಧವ, ಸದಸ್ಯರಾದ ಎಸ್‌.ಬಿ.ಗೌಡರ, ಕೆ.ಎಂ. ಆಲಗೂರ, ಆರ್‌.ಎಸ್‌.ನಾಯ್ದೊಡಿ, ಎ.ಬಿ.ಬಳವಾಟ, ಎ.ಎನ್‌.ಪೂಜಾರ, ವಿ.ಸಿ.ವಾಲಿಕಾರ, ಬಿ.ಎಸ್‌.ಕೊಪ್ಪದ, ಕೆ.ಗಂಗಮ್ಮ, ಸಿ.ಬಿ.ಚವ್ಹಾಣ, ಆರ್‌.ಎನ್‌. ಮುಲ್ಲಾ, ಆರ್‌.ಎಸ್‌.ಹೊಸೂರ, ವೈ. ಎಂ.ವಾಘೇ, ಎ.ಎಸ್‌.ಬಾಬಾನಗರ, ಡಿ.ಎಸ್‌.ಮಠಪತಿ ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.