ಯೋಜನೆ ಸಾಕಾರದಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದು
Team Udayavani, Jan 12, 2022, 9:46 PM IST
ವಿಜಯಪುರ: ಸ್ವಯಂ ಉದ್ಯೋಗ ಯೋಜನೆಯಲ್ಲಿ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಸಂಪೂರ್ಣ ಗುರಿ ಸಾ ಧಿಸಲು ಬ್ಯಾಂಕ್ ಅ ಧಿಕಾರಿಗಳ ಪಾತ್ರ ಪ್ರಮುಖವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅಭಿಪ್ರಾಯಪಟ್ಟರು.
ನಗರದಲ್ಲಿ ಡೇ-ನಲ್ಮ್ ಯೋಜನೆಯ ಸ್ವಯಂ ಉದ್ಯೋಗ ಕಾರ್ಯಕ್ರಮ ಉಪ ಘಟಕದಡಿ ಬ್ಯಾಂಕ್ ಅ ಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮತನಾಡಿದ ಅವರು, ನಗರದ ಬಡಜನರ ಜೀವನೋಪಾಯಕ್ಕಾಗಿ ಸಾಲ ಸೌಲಭ್ಯ ನೀಡಲಾದೆ. ಫಲಾನುಭವಿಗಳು ಪದೆ ಪದೆ ಬ್ಯಾಂಕಿಗೆ ಅಲೆದಾಡದಂತೆ ತ್ವರಿತವಾಗಿ ಸಾಲ ಮಂಜೂರು ಮಾಡಿ, ಅವರ ಜೀವನ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಬ್ಯಾಂಕ್ಗಳು ಸದರಿ ಸರ್ಕಾರದ ಯೋಜನೆಗಳ ಅನುಷ್ಠಾನಲ್ಲಿ ತ್ವರಿತವಾಗಿ ಸಾಲ ನೀಡಿದಲ್ಲಿ ನಿರುದ್ಯೋಗಿ ಯುವಸಮೂಹ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ. ಇದರಿಂದ ಆತನ ಕುಟುಂಬ ಸ್ವಾವಲಂಬಿ ಜೀವನ ನಡೆಸಲು ನೆರವಾಗುತ್ತದೆ ಎಂದರು.
ಹೀಗಾಗಿ ಬ್ಯಾಂಕ್ ಅ ಧಿಕಾರಿಗಳು ಸರ್ಕಾರದ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಆಯ್ಕೆಯಾದ ಎಲ್ಲ ಅರ್ಹ ಫಲಾನುಭವಿಗಳಿಗೆ ಸಾಲಮಂಜೂರು ಮಾಡಬೇಕು. ಇದರಿಂದ ಸರ್ಕಾರ ರೂಪಿಸುವ ಸಾಲ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು. ನಂತರ ರುಡ್ಸೆಟ್ ನಿರ್ದೇಶಕ ರಾಜೇಂದ್ರ ಜೈನಾಪುರ ಮಾತನಾಡಿ, ನಲ್ಮ್ ಯೋಜನೆ ಉದ್ಯೋಗ ಘಟಕ ಹಾಗೂ ರೂಡ್ಸೆಟ್ ಸಂಸ್ಥೆಯ ಧ್ಯೇಯೋದ್ದೇಶ ಸ್ವಾವಲಂಬನೆ, ಎಲ್ಲರೂ ಕೂಡಿಕೊಂಡು ಬಡಜನರ ಆರ್ಥಿಕ ಸ್ಥಿತಿ ಸುಧಾರಣೆಗೆ ಶ್ರಮಿಸೋಣ ಎಂದರು.
ಪ್ರತಿಯೊಬ್ಬರನ್ನು ಸ್ವಾವಲಂಬಿಯಾಗಿಸಿ ಜೀವನ ಬೆಳಗುವಂತೆ ಮಾಡುವುದೇ ರೂಡ್ಸೆಟ್ ಸಂಸ್ಥೆಯ ಗುರಿಯಾಗಿದೆ ಎಂದರು. ಜಿಲ್ಲಾ ಕೌಶಲ್ಯ ಮಿಷನ್ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿ ಕಾರಿ ಗುರುಪಾದಯ್ಯ ಹಿರೇಮಠ ಮಾತನಾಡಿದರು. ಸುನಂದಾ ಬಾಲಪ್ಪನವರ, ದೇವೇಂದ್ರ ಧನಪಾಲ್, ಡಾ| ಎಸ್. ಎಂ. ಮುಳ್ಳಾಳ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!