ಕನ್ನಡ ನಾಡು ನುಡಿ ರಕ್ಷಣೆಯಲ್ಲಿ ಕರವೇ ಪಾತ್ರ ಮುಖ


Team Udayavani, Nov 30, 2017, 3:43 PM IST

Vayupade-1.jpg

ತಾಳಿಕೋಟೆ: ಕನ್ನಡ ನಾಡು ನುಡಿ ಮೇಲೆ ನಡೆಯುತ್ತಿದ್ದ ದಬ್ಟಾಳೆಕೆಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ
ಕನ್ನಡವನ್ನು ರಕ್ಷಣೆ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತ ಬಂದಿದ್ದು ಹೆಮ್ಮೆ
ಪಡುವಂತಹದ್ದಾಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ , ಶಾಸಕ ಸಿ.ಎಸ್‌. ನಾಡಗೌಡ ಹೇಳಿದರು.

ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕಲಾವಿದರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಬೆಳಗಾವಿಯ ಮೇಲೆ ಮಹಾರಾಷ್ಟ್ರದ ಸಂಘಟನೆಗಳು, ಎಂಇಎಸ್‌ ಸಂಘಟನೆಗಳು ದಬ್ಟಾಳಿಕೆ ಮಾಡುವ ಸಮಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರು ಗಡಿ ರಕ್ಷಣೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ. ಕರ್ನಾಟಕ ಏಕೀಕರಣವಾದ ಮೇಲೆ ಹೈದ್ರಾಬಾದ್‌ ಕರ್ನಾಟಕ, ದಕ್ಷಿಣ ಕರ್ನಾಟಕ, ಮದ್ರಾಸ್‌ ಕರ್ನಾಟಕ ಎಂಬ ಭೇದ ಭಾವ ಹುಟ್ಟು ಹಾಕುತ್ತಿರುವುದು ತಮ್ಮ ಸ್ವ ಹಿತಾಶಕ್ತಿಗೋಸ್ಕರ.

ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆ
ಮಾಡಬೇಕು. ಕನ್ನಡವೇ ಧರ್ಮ, ಕನ್ನಡವೇ ಜಾತಿ, ಕನ್ನಡವೇ ದೇವರು ಎಂದು ಭಾವಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಗೌರವದೊಂದಿಗೆ ಮುನ್ನಡೆದಿದೆ ಎಂದರು.

ಬಹುಜನ ಸಮಾಜವಾದಿ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ದಸ್ತಗೀರ ಮುಲ್ಲಾ, ಕರವೇ ತಾಲೂಕು
ಗೌರವಾಧ್ಯಕ್ಷ ಎಚ್‌.ಎಸ್‌. ಢವಳಗಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಸೂಕ್ಷ್ಮತೆ ಅಡಗಿದೆ. ಕನ್ನಡ ಭಾಷೆಯಲ್ಲಿ
ಭುವನೇಶ್ವರಿ ದೇವಿಯನ್ನು ಪೂಜಿಸುವುದರೊಂದಿಗೆ ತಾಯಿಯ ಸ್ವರೂಪವನ್ನು ಕಾಣುತ್ತಿದ್ದೇವೆ.

ಇಂದಿನ ದಿನಮಾನದಲ್ಲಿ ಕೆಲವೆಡೆ ಪ್ರಜ್ಞಾವಂತ ಪಾಲಕರೇ ಕನ್ನಡ ಭಾಷೆಯನ್ನು ಪರಕೀಯರ ಭಾಷೆಯಂಬಂತೆ
ಕಾಣುತ್ತಿರುವದು ವಿಷಾದಕರ ಸಂಗತಿಯಾಗಿದೆ. ಮಕ್ಕಳಲ್ಲಿ ತುಂಬುತ್ತಿರುವ ಇಂಗ್ಲಿಷ್‌ ವ್ಯಾಮೋಹ ಅತಿ
ಕೆಟ್ಟ ಸಂಸ್ಕೃತಿಯನ್ನು ಕಲಿಸುತ್ತಿದೆ. ಅನ್ಯಭಾಷೆ ಕಡೆಗಣಿಸಿ ದ್ವೇಷಿಸುವ ಅಗತ್ಯ ನಮಗಿಲ್ಲ. ಕನ್ನಡ ಭಾಷೆ ಮಾತನಾಡಲು ಬರೆಯಲು ಅನುಕೂಲವಾದಂತಹ ಭಾಷೆಯಾಗಿದೆ. ಕನ್ನಡ ಭಾಷೆ ಉಳಿವಿಗಾಗಿ ಬೆಳವಣಿಗೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಗಲಿರುಳು ದುಡಿಯುತ್ತಾ ಸಾಗಿದ್ದು ಶ್ಲಾಘನೀಯ ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಕರವೇ ತಾಲೂಕು ಉಪಾಧ್ಯಕ್ಷ
ಜೈಭೀಮ ಮುತ್ತಗಿ ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ
ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಗೌರವಿಸಲಾಯಿತು.

ಖಾಸತೇಶ್ವರ ಮಠದ ವಿಶ್ವನಾಥ ವಿರಕ್ತಮಠ, ಮುಸ್ಲಿಂ ಧರ್ಮಗುರು ಸೈಯದ್‌ ಶಕೀಲಹ್ಮದ್‌ ಖಾಜಿ ಸಾನ್ನಿಧ್ಯ
ವಹಿಸಿದ್ದರು. ನಿಸಾರ ಬೇಪಾರಿ, ಅಕ್ಕಮಹಾದೇವಿ ಕಟ್ಟಿಮನಿ, ಪ್ರಭುಗೌಡ ಮದರಕಲ್ಲ, ಮಂಜೂರಲಿ ಬೇಪಾರಿ, ಪ್ರಶಾಂತ ಹಾವರಗಿ, ಜಿ.ಟಿ. ಘೋರ್ಪಡೆ, ಇಬ್ರಾಹಿಂ ಮನ್ಸೂರ, ಮಶಾಕ ಚೋರಗಸ್ತಿ, ಬಸವರಾಜ ಅಗ್ನಿ, ಶಬ್ಬೀರ್‌ ಲಾಹೋರಿ, ಇಬ್ರಾಹಿಂ ಡೋಣಿ, ಇಮಿ¤ಯಾಜ್‌ ಮೀರ್‌ ಜಮಾದಾರ, ಪ್ರಭುಗೌಡ ಪಾಟೀಲ, ಮಹಾದೇವ ರಾವಜಿ, ವಿನೋದ ದಳವಾಯಿ, ಸಾವಿತ್ರಿ ತಳವಾರ, ಜಾಕೀರ್‌ ಬಡಗಣ, ನಬಿ ಲಾಹೋರಿ, ಅಬು ಲಾಹೋರಿ, ಟಿಪ್ಪು ಕಾಳಗಿ, ಮಂಜು ಬಡಿಗೇರ, ಅಜೀಜ್‌ ಮನ್ಸೂರ, ಇಬ್ರಾಹಿಂ ಪಟ್ಟೆವಾಲೆ, ಅಜೀಜ್‌ ಮನ್ಸೂರ, ಈಶ್ವರ ಹೂಗಾರ, ಅಯೂಬ ವಠಾರ, ಶೌಕತ್‌ ಲಾಹೋರಿ, ಅನಿಲ ಗೊಟಗುಣಕಿ, ಜಗನ್ನಾಥ ಮಸರಕಲ್ಲ, ಲಾಳೇಮಶಾಕ ಜಮಾದಾರ, ಭೀಮರಾಯ ಅತ್ತೂರ, ಚಂದಪ್ಪಗೌಡ ಬಿರಾದಾರ, ಆಸೀಫ್‌ ಲಾಹೋರಿ, ಇಮಾಮ ಹುಸೇನ ಸೂಳೆಭಾವಿ, ಬಂದು ಬೇಪಾರಿ, ಮದರಶಾ ಮಕಾಂದಾರ ಇದ್ದರು. ಎಚ್‌.ವೈ. ಬಸರಿಕಟ್ಟಿ ನಿರೂಪಿಸಿದರು

ಟಾಪ್ ನ್ಯೂಸ್

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.