ಆರೋಪಿ ಕುಟುಂಬ ವಿರುದ್ಧ ಜೀವ ಬೆದರಿಕೆ-ಜಾತಿ ನಿಂದನೆ ದೂರು


Team Udayavani, Mar 30, 2019, 3:22 PM IST

vij-4

ಮುದ್ದೇಬಿಹಾಳ: ಹಳ್ಳೂರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗೀಡಾದ ಯಮನಪ್ಪ ಭಜಂತ್ರಿ ಕುಟುಂಬದವರ ಮೇಲೆ ಕೊಲೆ ಮಾಡಿದ ಆರೋಪಿ ಸಾಬಣ್ಣ ಉಕ್ಕಲಿ ಕುಟುಂಬದವರು ಜೀವ ಬೆದರಿಕೆ ಹಾಕಿದ್ದೂ ಅಲ್ಲದೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆಪಾದಿಸಿ ಯಮನಪ್ಪನ ಪತ್ನಿ ನೀಲವ್ವ ಶುಕ್ರವಾರ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಹಾಲುಮತ ಸಮಾಜದ ಅಮೋಘಿ
ಉಕ್ಕಲಿ, ಬಸವರಾಜ ಉಕ್ಕಲಿ, ಮುತ್ತಪ್ಪ ಉಕ್ಕಲಿ, ಚಂದಪ್ಪ ಉಕ್ಕಲಿ, ಬಸವ್ವ ಉಕ್ಕಲಿ, ಲಕ್ಷ್ಮೀಬಾಯಿ ಉಕ್ಕಲಿ, ಇಂದ್ರವ್ವ ಉಕ್ಕಲಿ ವಿರುದ್ಧ ದೂರು ದಾಖಲಿಸಿದ್ದಾರೆ.

ಜಾತಿ ನಿಂದನೆ ಪ್ರಕರಣದ ತನಿಖೆ ನೇರವಾಗಿ ಡಿವೈಎಸ್ಪಿ ಅಡಿ ನಡೆಯುವುದರಿಂದ ಬಸವನಬಾಗೇವಾಡಿ ಡಿವೈಎಸ್ಪಿ ಮಹೇಶ್ವರಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದೂರಿನಲ್ಲಿರುವ ಆರೋಪಿಗಳ ಬಂಧನಕ್ಕೆ ಸೂಚಿಸಿದ್ದರಿಂದ ಸ್ಥಳೀಯ ಪೊಲೀಸರು ಆರೋಪಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.

ಈ ಮಧ್ಯೆ ಕೊಲೆ ಘಟನೆ ಬಗ್ಗೆ ಯಮನಪ್ಪ ಭಜಂತ್ರಿಯ ಮಗ ಬಸವರಾಜ ಭಜಂತ್ರಿ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಆರೋಪಿ ಸಾಬಣ್ಣ ಉಕ್ಕಲಿ ವಿರುದ್ಧ ದೂರು ದಾಖಲಿಸಿದ್ದು 2016ರ ಜನೆವರಿ ತಿಂಗಳಲ್ಲಿ ಕೊಲೆಯಾದ ಯಮನಪ್ಪನ 7 ವರ್ಷದ ಮೊಮ್ಮಗಳನ್ನು ಆರೋಪಿ ಸಾಬಣ್ಣನ ಅಣ್ಣನ ಮಗ ಬಸಪ್ಪ ಉಕ್ಕಲಿ (20) ರೇಪ್‌ ಮಾಡಿದ್ದ ಘಟನೆ ನಡೆದಿದ್ದು ಈ ಬಗ್ಗೆ ಆರೋಪಿಗೆ ಜೈಲು ಶಿಕ್ಷೆಯಾಗಿದ್ದು ಅದೇ ದ್ವೇಷದಿಂದ ಈ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದಾನೆ.

ಸರ್ಕಾರಿ ಆಸ್ಪತ್ರೆಯಲ್ಲಿ ರಂಪಾಟ: ಯಮನಪ್ಪನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಗುರುವಾರ ರಾತ್ರಿಯೇ ತಂದಿರಿಸಲಾಗಿತ್ತು. ಶುಕ್ರವಾರ ಬೆಳಗ್ಗೆ 11 ಗಂಟೆ ದಾಟಿದರೂ ಮರಣೋತ್ತರ ಪರೀಕ್ಷೆ ಕೈಗೊಂಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ಭಜಂತ್ರಿ ಸಮಾಜದ ಧುರೀಣರು, ಮೃತನ ಕುಟುಂಬದ ಸದಸ್ಯರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸತೊಡಗಿದರು. ಈ ಸಂದರ್ಭ ಆಸ್ಪತ್ರೆಯಲ್ಲಿ ಕರ್ತವ್ಯದ ಮೇಲಿದ್ದ ವೈದ್ಯೆ ಡಾ| ಮಾನಸಾ ಅವರು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದು ಭಜಂತ್ರಿ ಸಮಾಜದವ ಆಕ್ರೋಶಕ್ಕೆ ಕಾರಣವಾಯಿತು.

ಇದಲ್ಲದೆ ಡಾ| ಮಾನಸಾ ಅವರು ಅತಿರೇಕದಿಂದ ನಡೆದುಕೊಂಡದ್ದು ವಾಗ್ವಾದಕ್ಕೆ ಕಾರಣವಾಯಿತು. ಈ ಹಂತದಲ್ಲಿ ಪೊಲೀಸರು ಮಧ್ಯೆಪ್ರವೇಶಿಸಿ ವಾಗ್ವಾದ ತಣ್ಣಗಾಗಿಸಿದರು. ಆ ವೈದ್ಯೆ ತನಗೆ ಮರಣೋತ್ತರ ಪರೀಕ್ಷೆ ಅನುಭವದ ಕೊರತೆ ಇರುವುದರಿಂದ ಪರೀಕ್ಷೆ ನಡೆಸೊಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ತಿಳಿಸಿದ ಮೇಲೆ ಜಿಲ್ಲಾ ಆರೋಗ್ಯಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಶವ ಪರೀಕ್ಷೆಗೆ ಅವಕಾಶ ಮಾಡಿಕೊಟ್ಟರು. ಈ ಸಂದರ್ಭ ಬಸವನಬಾಗೇವಾಡಿ ಡಿವೈಎಸ್ಪಿ ಮಹೇಶ್ವರಗೌಡ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ವಿಡಿಯೋ ವೈರಲ್‌: ಹಳ್ಳೂರ ಗ್ರಾಮದಲ್ಲಿ ಕೊಲೆ ಘಟನೆ ನಡೆದ ಮೇಲೆ ಕೊಲೆ ಮಾಡಿದ ಸಾಬಣ್ಣ ಉಕ್ಕಲಿ ಶವದ ಹತ್ತಿರವೇ ನಿಂತುಕೊಂಡು ಕೊಲೆ ಬಗ್ಗೆ ಆಡಿರುವ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನಾನು ಜೈಲಿಗೆ ಹೋಗಲು ತಯಾರಿದ್ದೇನೆ.

ಫೌಜಾರ್‌ (ಪಿಎಸೈ) ಬಂದ್‌ ನನಗೇನು ಮಾಡ್ತಾನ. ನಾನು ಇನ್ನೂ ಇಬ್ಬರನ್ನು ತೆಗೀಬೇಕಾಗಿದೆ. ಇಂವಾ (ಕೊಲೆಯಾದವ) ನನ್ನ ಮನೆಯನ್ನೇ ಹಾಳ ಮಾಡ್ಯಾನ. ಅದಕ್ಕೆ ಅವನನ್ನ ಕಡದೀನಿ. ಯಾರ ಬರತಾರ ಬರ್ಲಿ. ನಾನು ಎಲ್ಲಕ್ಕೂ ತಯಾರಿದ್ದೇನೆ ಮುಂತಾದ ಮಾತುಗಳನ್ನು ಆಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.