ಜಿಟಿ-ಜಿಟಿ ಮಳೆಯಿಂದ ಗೋಡೆ ಕುಸಿದು ನಾಲ್ವರ ಸಾವು


Team Udayavani, Sep 9, 2017, 1:42 PM IST

VIJ-2.jpg

ಇಂಡಿ: ಮಳೆಯಿಂದ ಗೋಡೆ ಕುಸಿದು ಎರಡು ಜೋಡಿ ದಂಪತಿ ಮೃತಪಟ್ಟ ಘಟನೆ ತಾಲೂಕಿನ ಹಳಗುಣಕಿ ಹಾಗೂ ಜೇವೂರ ಗ್ರಾಮಗಳಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ.

ತಾಲೂಕಿನ ಹಳಗುಣಕಿ ಗ್ರಾಮದ ದಂಪತಿ ರಾಚಪ್ಪ ಬಡಿಗೇರ (65), ಪತ್ನಿ ಸಿದ್ದವ್ವ ಬಡಿಗೇರ (60) ಮೃತಪಟ್ಟಿದ್ದರೆ, ತಾಲೂಕಿನ ಜೇವೂರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ದಂಪತಿ ಕರಿಬಸಪ್ಪ ಆಕಳವಾಡಿ (68), ಪತ್ನಿ ಇಂದಿರಾಬಾಯಿ ಆಕಳವಾಡಿ (63) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂದು ನಾಯಿ ಮತ್ತು ಒಂದು ಕುರಿಯೂ ಮೃತಪಟ್ಟಿದೆ.

ಘಟನೆ ವಿವರ: ಹಳಗುಣಕಿ ಗ್ರಾಮದಲ್ಲಿ ಸತತ ಎರಡು ದಿನದಿಂದ ರಾತ್ರಿಯಿಡಿ ಮಳೆ ಸುರಿಯುತ್ತಿತ್ತು. ಮಳೆಯಿಂದ ಮನೆ ಕುಸಿಯಬಹುದೆಂಬ ಸಂಶಯದಿಂದ ಬಡಿಗೇರ ದಂಪತಿ ಮನೆ ಬಿಟ್ಟು ಮನೆ ಪಕ್ಕದ ಪತ್ರಾಸ್‌ ಸೆಡ್ಡಿನಲ್ಲಿ ಮೊಮ್ಮಕ್ಕಳೊಂದಿಗೆ ಮಲಗಿದ್ದರು. ಮಳೆ ರಾತ್ರಿ ರಭಸದಿಂದ ಸುರಿಯುತ್ತಿರುವುದನ್ನು ಕಂಡು ಮೊಮ್ಮಕ್ಕಳನ್ನು ಅಲ್ಲೇ ಪಕ್ಕದ ತಮ್ಮ ದೊಡ್ಡ ಮಗನ ಮನೆಯಲ್ಲಿ ಮಲಗಿಸಿ ಚಹಾ ಕುಡಿದು ಬಂದು ಮಲಗಿದ್ದರು. ದಂಪತಿ ಗಾಢ ನಿದ್ದೆಯಲ್ಲಿದ್ದಾಗ ಪಕ್ಕದ ಗೋಡೆ ಕುಸಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜೇವೂರ ಗ್ರಾಮದಲ್ಲಿ ಆಕಳವಾಡಿ ದಂಪತಿ ತಮ್ಮ ತೋಟದ ಹಳೆಯಮನೆಯಲ್ಲಿ ವಾಸವಿದ್ದು ರಾತ್ರಿಯಿಡಿ ಮಳೆ ಬರುತ್ತಿರುವುದನ್ನು ಕಂಡು ಮನೆ ಕುಸಿಯಬಹುದೆಂಬ ಶಂಕೆಯಿಂದ ಮನೆ ಹಿಂಭಾಗದ ಪತ್ರಾಸ್‌ ಸೆಡ್ಡಿನಲ್ಲಿರುವ ಕಾಟ್‌ ಮೇಲೆ ಹೋಗಿ ಮಲಗಿದ್ದರು. ರಾತ್ರಿ ಗಾಢ ನಿದ್ರೆಯಲ್ಲಿದ್ದಾಗ ಮನೆಯ ಹಿಂಭಾಗದ ಗೋಡೆ ಕುಸಿದು ಪತ್ರಾಸ್‌ ಶೆಡ್‌ ಮತ್ತು ಗೋಡೆಯ ಕಲ್ಲುಗಳು ದಂಪತಿ ಮೇಲೆ ಬಿದ್ದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಒಂದು ನಾಯಿ ಮತ್ತು ಒಂದು ಕುರಿ ಸಹ ಅಸುನೀಗಿವೆ. 

ಈ ಎರಡೂ ಕುಟುಂಬಸ್ಥರ ದುರ್ಮರಣದಿಂದ ಎರಡೂ ಗ್ರಾಮಗಳಲ್ಲಿ ಕುಟುಂಬ ವರ್ಗದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕಾಗಮಿಸಿದ ಶಾಸಕ ಯಶವಂತ್ರಾಯಗೌಡ ಪಾಟೀಲ ಮೃತರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಕಂದಾಯ ಉಪ ವಿಭಾಗಾಧಿಕಾರಿ ಮಹಾದೇವಪ್ಪ ಮುರಗಿ, ತಹಶೀಲ್ದಾರ್‌ ಸಂತೋಷ ಮ್ಯಾಗೇರಿ ಇದ್ದರು. ಸ್ಥಳಕ್ಕೆ ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ, ಮುಖಂಡರಾದ ದಯಾಸಾಗರ ಪಾಟೀಲ, ಶ್ರೀಶೈಲಗೌಡ ಬಿರಾದಾರ, ಶೀಲವಂತ ಉಮರಾಣಿ, ಹನುಮಂತ್ರಾಯಗೌಡ ಪಾಟೀಲ ಭೇಟಿ ನೀಡಿ ಸಾಂತ್ವನ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.