ಕೃಷ್ಣೆ ನೀರು ಸದ್ಬಳಕೆಯಾಗಲಿ


Team Udayavani, Mar 9, 2019, 11:24 AM IST

vij-2.jpg

ಮುದ್ದೇಬಿಹಾಳ: ಕೃಷ್ಣಾ ನದಿಯ ಹೊಳೆದಂಡೆ ರೈತರು ನೀರಾವರಿ ಯೋಜನೆಗಳಿಗೆ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದು, ಅವರ ತ್ಯಾಗಕ್ಕೆ ಪ್ರತಿಫಲ ದೊರಕಿಸಿಕೊಡಲು ಸಾಕಷ್ಟು ಪ್ರಯತ್ನ ನಡೆಸಿದ್ದೇನೆ. ಆ ರೈತರ ಜಮೀನಿಗೆ ನೀರಾವರಿ ಸೌಲಭ್ಯ ತಲುಪಿಸಲು ಈಗಾಗಲೇ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ತಂಗಡಗಿ ಗ್ರಾಮದಲ್ಲಿ ರಸ್ತೆ ಕಾಮಗಾರಿ, ಸರ್ಕಾರಿ ಪ್ರೌಢಶಾಲೆ ಕೊಠಡಿ ಕಟ್ಟಡ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕೃಷ್ಣೆ ನೀರು ಬಳಕೆಗೆ ಎ, ಬಿ ಸ್ಕೀಂ ನೆಪದಲ್ಲಿ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಯುಕೆಪಿಯ ಎ ಸ್ಕೀಂನಲ್ಲಿ ಇನ್ನೂ 55 ಟಿಎಂಸಿ ನೀರು ಬಳಸಿಕೊಂಡಿಲ್ಲ. ಈ ನೀರು ಬಳಸಿಕೊಳ್ಳಲು ಕಾನೂನಾತ್ಮಕ ತೊಂದರೆ ಇಲ್ಲ ಅನ್ನೋದನ್ನು ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದರು.

ನೀರಾವರಿಗೆ 110 ಕೋಟಿ, ನೀರಾವರಿ ಡಿಸ್ಟ್ರೀಬ್ಯೂಟರ್‌, ಲ್ಯಾಟರಲ್‌ ದುರಸ್ತಿಗೆ 44.5 ಕೋಟಿ, ಗ್ರಾಮೀಣ ರಸ್ತೆಗಳಿಗೆ 63 ಕೋಟಿ, ಪ್ರೌಢಶಾಲೆ ಕೊಠಡಿಗಳಿಗೆ 2.36 ಕೋಟಿ, ಪ್ರಾಥಮಿಕ ಶಾಲೆ ಕೊಠಡಿಗಳಿಗೆ 2.83 ಕೋಟಿ ಹಾಗೂ ತಂಗಡಗಿಯಲ್ಲಿನ ರಸ್ತೆಗಳಿಗೆ 50 ಲಕ್ಷ ಅನುದಾನ ಸರ್ಕಾರದಿಂದ ತಂದಿದ್ದೇನೆ. ಚರಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕರ ನಿಧಿ ಅಡಿ 5 ಲಕ್ಷ ರೂ. ಕೊಟ್ಟಿದ್ದೇನೆ. 22 ಕೆರೆಗಳಲ್ಲಿ 18 ಕೆರೆ ತುಂಬಿಸಿದ್ದೇನೆ. ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ. ಆದರೆ ನಮ್ಮ ಸರ್ಕಾರ ಇಲ್ಲದ್ದರಿಂದ ಸುಮ್ಮನಿದ್ದೇನೆ ಎಂದರು.

ಇದೇ ಸಂದರ್ಭ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ತಮಗೆ ಶಾಲೆಗೆ ಹೋಗಲು ರಸ್ತೆ ಮತ್ತು ಶಾಲೆಗೆ ಕಂಪ್ಯೂಟರ್‌ ಸೌಲಭ್ಯ ದೊರಕಿಸಿಕೊಡುವಂತೆ ಶಾಸಕರನ್ನು ಒತ್ತಾಯಿಸಿದರು. ಧುರೀಣರಾದ ಶಿವಶಂಕರಗೌಡ ಹಿರೇಗೌಡರ, ಮಲಕೇಂದ್ರಗೌಡ ಪಾಟೀಲ ಸಾನ್ನಿಧ್ಯ ವಹಿಸಿದ್ದ ಹಡಪದ ಅಪ್ಪಣ್ಣ ಸಂಸ್ಥಾನಮಠದ ಅನ್ನದಾನಭಾರತಿ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸೋಮನಗೌಡ ಬಿರಾದಾರ, ಪ್ರಭಾರ ದೈಹಿಕ ಶಿಕ್ಷಣಾಧಿಕಾರಿ ಎಚ್‌.ಎಲ್‌. ಕರಡ್ಡಿ, ಪುರಸಭೆ ಮಾಜಿ ಸದಸ್ಯ ಮನೋಹರ ತುಪ್ಪದ, ಲಕ್ಷ್ಮಣ ಬಿಜ್ಜೂರ, ಸಂಗಮೇಶ ಹುಂಡೇಕಾರ, ಶಿವಾನಂದ ಮಂಕಣಿ, ಶಿವಾನಂದ ನಿಡಗುಂದಿ, ಬಸವರಾಜ ಡೊಂಗರಗಾಂವಿ, ರಾಜು ಹೊಳಿ, ಸಿದ್ದು ಹೊಳಿ, ಮಹಾಂತೇಶ ಪಡಶೆಟ್ಟಿ, ನಿಂಗಪ್ಪ ಕಮಲಾಪುರ, ಮುದಕಪ್ಪಗೌಡ ಪಾಟೀಲ, ಪರಶುರಾಮ ಢವಳಗಿ, ಪಿಡಿಒ ಅಯ್ಯಪ್ಪ ತಂಗಡಗಿ ಇದ್ದರು. 

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.