ವಚನದಲ್ಲಿದೆ ವಿಶ್ವ ಮಾನವ ಸಂದೇಶ


Team Udayavani, Aug 19, 2018, 11:23 AM IST

vij-1.jpg

ವಿಜಯಪುರ: ಪ್ರತಿಯೊಂದು ವಚನಗಳಲ್ಲಿ ಪ್ರಶ್ನೆ, ಪ್ರತಿಭಟನೆ, ನಿರಾಕರಣೆ ಹಾಗೂ ಪರ್ಯಾಯದ ಅಂಶಗಳು ಅಡಕಗೊಂಡಿವೆ. ವಚನ ಸಾಹಿತ್ಯದಲ್ಲಿದ್ದ ವಿಶ್ವಮಾನವತೆ ಸಂದೇಶದಿಂದಾಗಿಯೇ ವಚನ ಸಾಹಿತ್ಯದ ಮುದ್ರಣಕ್ಕೆ ಕ್ರೈಸ್ತ ಮಿಷನರಿಗಳು ಹಿಂದೇಟು ಹಾಕಿದ್ದವು ಎಂದು ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಬಸವರಾಜ ಸಾದರ ಅಭಿಪ್ರಾಯಪಟ್ಟರು.

ನಗರದ ಲಿಂಗಾಯತ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವರ್ತಮಾನದ ಆತಂಕಗಳಿಗೆ ವಚನ ಸಾಂತ್ವನ ಎಂಬ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಚನ ಸಾಹಿತ್ಯ ಒಂದು ಅದ್ಭುತವಾದ ಸಾಹಿತ್ಯ. ಅನೇಕ ವಚನಗಳನ್ನು ಅವಲೋಕಿಸಿದಾಗ ಅದರಲ್ಲೊಂದು ಪ್ರಶ್ನೆ ಇದ್ದೇ ಇರುತ್ತದೆ, ವಚನ ಸಾಹಿತ್ಯವನ್ನು ಎಳೆಎಳೆಯಾಗಿ ಹಾಗೂ ಸೂಕ್ಷ್ಮವಾಗಿ ಅವಲೋಕಿಸಿದಾಗ ಶರಣರು ಪ್ರಶ್ನೆಯನ್ನು ಕೇಳಿದರು, ನಂತರ ಆಗಿನ ಕಾಲದ ಧಾರ್ಮಿಕ ಕಂದಾಚಾರಗಳನ್ನು ಪ್ರತಿಭಟಿಸಿ, ಅವುಗಳ ನಿರಾಕರಣೆ ಮಾಡಿದರು ಎಂದರು.

ಕೇವಲ ನಿರಾಕರಣೆ ಮಾಡಿ ಅಷ್ಟಕ್ಕೆ ಬಿಡದೇ ವೈಚಾರಿಕ, ವೈಜ್ಞಾನಿಕ ಮಾರ್ಗವನ್ನು ಸೂಚಿಸಿದರು. ಈ ಎಲ್ಲ ಅಂಶಗಳ ತಳಹದಿ ಮೇಲೆ ವಚನಗಳು ರಚನೆಯಾಗಿವೆ. ಈ ನಾಲ್ಕು ಅಂಶಗಳು ಪ್ರತಿಯೊಂದು ವಚನಗಳಲ್ಲಿ ನಮಗೆ ಕಾಣಸಿಗುತ್ತವೆ ಎಂದು ವಿಶ್ಲೇಷಿಸಿದರು.

ಶರಣ ಕ್ರಾಂತಿಯ ಉಪ ಉತ್ಪನ್ನವೇ ವಚನ ಸಾಹಿತ್ಯ. ಆದರೆ ಫ್ರೆಂಚ್‌ ಕ್ರಾಂತಿ, ರಷ್ಯಾ ಕ್ರಾಂತಿಯಂತೆ ಐತಿಹಾಸಿಕವಾದ ಅಧ್ಯಯನ ಶರಣ ಕ್ರಾಂತಿಯ ಬಗ್ಗೆ ನಡೆಯದಿರುವುದು ಇಂದಿಗೂ ನನಗೆ ನೋವು ತಂದಿದೆ. ಶರಣ ಕ್ರಾಂತಿ ಬಗ್ಗೆ ಐತಿಹಾಸಿಕ ಹಿನ್ನೆಲೆಯ ಶಾಸ್ತ್ರೀಯ ಅಧ್ಯಯನ ನಡೆಯಬೇಕಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಚನಗುಮ್ಮಟ ಡಾ| ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯದ ಕಟ್ಟುಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತಲ್ಲೀನರಾಗಿದ್ದರು. ಅಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿ ಪ್ರಸ್‌ ಆರಂಭಗೊಂಡಿದೆ ಎಂಬ ಸುದ್ದಿ ಅವರಿಗೆ ಗೊತ್ತಾಯಿತು. ಆಗ ಅವರಿಗೆ ಸಂತೋಷದ ಪಾರವೇ ಇರಲಿಲ್ಲ, ಮರುಕ್ಷಣವೇ ಮಂಗಳೂರಿಗೆ ಹೋದರು. 

ಆಗ ಕ್ರೈಸ್ತ ಮಿಷನರಿಗಳ ಪ್ರಮುಖರು ವಚನ ಸಾಹಿತ್ಯದ ಅಂಶಗಳನ್ನು ಅಧ್ಯಯನ ಮಾಡಿ ಅದರಲ್ಲಿರುವ ಉದಾತ್ತ ವಿಚಾರಗಳಿಂದ ಎಲ್ಲಿ ಕ್ರೈಸ್ತ ಧರ್ಮ ಪ್ರಚಾರಕ್ಕೆ ಹಿನ್ನೆಡೆ ಆಗುವ ಭೀತಿಯಿಂದ ಡಾ| ಹಳಕಟ್ಟಿ ಅವರು ಕೊಟ್ಟಿದ್ದ ಮುಂಗಡ ಹಣ ಮರಳಿಸಿದರು. ಈ ಒಂದು ಘಟನೆ ಸಾಕು, ಬಸವಾದಿ ಶರಣ ಸಾಹಿತ್ಯ ಸಂದೇಶದ ಕುರಿತು ಆಗಲೇ ಮೂಲಧರ್ಮಗಳಿಗೆ ಸಮಾನತೆಯ ಸಂದೇಶದ ಸಾತ್ವಿಕ ಭಯ ಹುಟ್ಟಿಸಿತ್ತು ಎಂದು ಡಾ| ಸಾದರ ವಿಶ್ಲೇಷಿಸಿದರು.

ಸಾನ್ನಿಧ್ಯ ವಹಿಸಿದ್ದ ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಡಾ| ಸಿದ್ದರಾಮ ಮಹಾಸ್ವಾಮಿಗಳು ಆಶೀವರ್ಚನ ನೀಡಿ, ವ್ಯಕ್ತ ಶಬ್ದಗಳಿಂದ ಅವ್ಯಕ್ತವಾದ ಸಂದೇಶವನ್ನು ಸಾರುವ ಅದ್ಭುತವಾದ ವಿದ್ವತ್ತು ಶರಣರಲ್ಲಿ ಇತ್ತು ಎಂದರು.
 
ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಗೌರವ ಸಲಹೆಗಾರ ಡಾ| ಗೊ.ರು. ಚನ್ನಬಸಪ್ಪ, ವೀರಶೈವ ಮಹಾಸಭೆ ಅಧ್ಯಕ್ಷ ಸಿದ್ರಾಮಪ್ಪ ಉಪ್ಪಿನ, ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ, ಮ.ಗು. ಯಾದವಾಡ ಇದ್ದರು.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ

6-vijayapura

Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್‌ ಸ್ಟೇಬಲ್‌ ಲೋಕಾಯುಕ್ತ ಬಲೆಗೆ

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.