ಪಡಿತರದಲ್ಲಿ ಜೋಳ-ತೊಗರಿಗೆ ಚಿಂತನೆ

ಈಗಾಗಲೇ ಕೃಷಿಗೆ ಪೂರಕ ಕೈಗಾರಿಕೆಗಳು ನಮ್ಮ ಭಾಗದಲ್ಲಿ ತಲೆ ಎತ್ತತೊಡಗಿವೆ.

Team Udayavani, Jan 27, 2021, 6:27 PM IST

ಪಡಿತರದಲ್ಲಿ ಜೋಳ-ತೊಗರಿಗೆ ಚಿಂತನೆ

ಮುದ್ದೇಬಿಹಾಳ: ಉತ್ತರ ಕರ್ನಾಟಕದ ಪ್ರಮುಖ ಆಹಾರ ಪದ್ಧತಿಯ ಭಾಗವಾಗಿರುವ ಜೋಳ, ತೊಗರಿಯನ್ನು ಪಡಿತರ ವ್ಯವಸ್ಥೆಯಡಿ ವಿತರಿಸುವ ಕುರಿತು ಮುಖ್ಯಮಂತ್ರಿಗಳ ಮನವೊಲಿಸಿ ಜಾರಿಗೊಳಿಸಲು ಸಿದ್ಧತೆ ನಡೆಸಿದ್ದೇನೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದರು.

ತಾಲೂಕಿನ ಮಡಿಕೇಶ್ವರ, ಪಡೇಕನೂರ ಗ್ರಾಮಗಳಲ್ಲಿ ಪಿಡಬ್ಲೂಡಿಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಉಕದ ಬಡವರು, ಜನಸಾಮಾನ್ಯರು ತಮ್ಮ ದಿನನಿತ್ಯದ ಊಟದಲ್ಲಿ ಜೋಳದ ರೊಟ್ಟಿ, ತೊಗರಿ ಬೇಳೆ ಪಲ್ಯೆ, ತೊಗರಿ ಬೇಳೆ ಸಾಂಬಾರು ಬಳಸುತ್ತಾರೆ. ಇದನ್ನು ಪಡಿತರ ವ್ಯವಸ್ಥೆಯಲ್ಲಿ ವಿತರಿಸಿದರೆ ಜನಸಾಮಾನ್ಯರ ಜೊತೆಗೆ ರೈತರಿಗೆ ಹೆಚ್ಚು ಪ್ರಯೋಜನಕಾರಿಯಾಗುತ್ತದೆ. ಬಜೆಟ್‌ ಪೂರ್ವಭಾವಿ ಸಭೆಯಲ್ಲಿಯೇ ಈ ಪ್ರಸ್ತಾವ  ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅನುಷ್ಠಾನಕ್ಕೆ ಕ್ರಮ ಕೈಕೊಳ್ಳುತ್ತೇನೆ ಎಂದರು.

12 ಲಕ್ಷ ಮೆಟ್ರಿಕ್‌ ಟನ್‌ ತೊಗರಿ: ಉಕದ ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಬೀದರ, ರಾಯಚೂರು, ಕೊಪ್ಪಳ ಸೇರಿ ರಾಜ್ಯದ 15 ಜಿಲ್ಲೆಗಳಲ್ಲಿ ಪ್ರತಿ ವರ್ಷ 12 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಬೆಳೆಯಲಾಗುತ್ತಿದೆ. ಇದನ್ನು ಮನಗಂಡು ಆಹಾರ ಸಚಿವ ಉಮೇಶ ಕತ್ತಿಯವರು ಬಡವರಿಗೆ ತೊಗರಿ ಬೇಳೆಯನ್ನು ಕಡಿಮೆ ದರದಲ್ಲಿ ಪಿಡಿಎಸ್‌ ವ್ಯವಸ್ಥೆಯಡಿ ವಿತರಿಸುವ ಮಾತನ್ನು ಹೇಳಿದ್ದಾರೆ. ಇದನ್ನು ನಾನೂ ಬೆಂಬಲಿಸುತ್ತೇನೆ ಎಂದರು.

ಜೋಳಕ್ಕೆ ಹೆಚ್ಚಿನ ಬೆಂಬಲ ಬೆಲೆ: ಜೋಳಕ್ಕೆ ಈಗ ನೀಡುತ್ತಿರುವ ಕ್ವಿಂಟಲ್‌ಗೆ 2,600 ರೂ. ಬೆಂಬಲ ಬೆಲೆಯನ್ನು 3,500 ರೂ.ಗೆ ಹೆಚ್ಚಿಸಬೇಕೆನ್ನುವ ಪ್ರಸ್ತಾಪವನ್ನು ಸರ್ಕಾರದ ಮುಂದಿಡುತ್ತೇನೆ. ಇದರಿಂದ ಜೋಳ ಬೆಳೆಯುವ ಲಕ್ಷಾಂತರ ರೈತರು ಬದುಕು ಕಟ್ಟಿಕೊಳ್ಳಲು ನೆರವಾದಂತಾಗುತ್ತದೆ. ಪಡಿತರ ವ್ಯವಸ್ಥೆಯಡಿ ಜೋಳ ವಿತರಿಸುವುದರಿಂದಲೂ ಬಡವರಿಗೆ ಅನುಕೂಲದ ಜೊತೆಗೆ ಜೋಳದ ಮಹತ್ವವನ್ನೂ ಹೆಚ್ಚು ಮಾಡಿದಂತಾಗುತ್ತದೆ. ಹೆಚ್ಚಿನ ಪ್ರೋಟಿನ್‌
ಅಂಶವುಳ್ಳ ಜೋಳ ದೇಹಕ್ಕೆ ಉತ್ತಮ ಆಹಾರ. ದಕ್ಷಿಣ ಕರ್ನಾಟಕ ರಾಗಿಯಂತೆ ಉಕದ ಜೋಳ ಮಹತ್ವ ಪಡೆದುಕೊಳ್ಳಬೇಕು. ಕಾರ್ಡುದಾರರಿಗೆ 30 ಕೆಜಿ ಅಕ್ಕಿ ನೀಡುವ ಬದಲು ತಲಾ 10 ಕೆಜಿ ಜೋಳ, ಅಕ್ಕಿ, 1 ಕೆಜಿ ತೊಗರಿಬೇಳೆ ವಿತರಿಸುವ ಯೋಜನೆ ಇದೆ. ಇದನ್ನು ಯಾವ ರೀತಿ ವಿತರಿಸಬೇಕು ಎನ್ನುವುದು ಸರ್ಕಾರದ ಮಟ್ಟದಲ್ಲಿ ತೀರ್ಮಾನಗೊಳ್ಳಬೇಕು ಎಂದರು.

ಕೃಷಿ ಆಧಾರಿತ ಕೈಗಾರಿಕೆ: ಮುಂದಿನ ದಿನಗಳಲ್ಲಿ ಉಕ ಭಾಗದಲ್ಲಿ ಕೃಷಿ ಆಧಾರಿತ ಬೆಳೆಗಳಿಗೆ  ಪೂರಕವಾಗಿರುವ ಕೈಗಾರಿಕೆಗಳನ್ನು ಸ್ಥಾಪಿಸುವ ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಕೃಷಿಗೆ ಪೂರಕ ಕೈಗಾರಿಕೆಗಳು ನಮ್ಮ ಭಾಗದಲ್ಲಿ ತಲೆ ಎತ್ತತೊಡಗಿವೆ. ಮಂಗಳೂರು ಭಾಗದಲ್ಲಿ ಕುಚಲಕ್ಕಿ, ಬೆಂಗಳೂರು ಭಾಗದಲ್ಲಿ ರಾಗಿ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು. ಪಡೇಕನೂರಲ್ಲಿ 2.80 ಕೋಟಿ ರೂ, ಮಡಿಕೇಶ್ವರದಲ್ಲಿ 60 ಲಕ್ಷ ರೂ.ಗಳ ವಿವಿಧ ರಸ್ತೆ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ಪ್ರಮುಖರಾದ ಎಂ.ಆರ್‌.ಪಾಟೀಲ ವಕೀಲರು, ಜಿ.ಬಿ. ಬಿರಾದಾರ, ಜಿ.ಎನ್‌. ಪಾಟೀಲ, ಎಸ್‌.ಎಂ. ಕೇಶಪ್ಪಗೌಡ, ಬಿ.ಅರ್‌. ಪಾಟೀಲ, ರಾಮಣ್ಣ ಚಲವಾದಿ, ಬಿ.ಎಸ್‌. ಪಾಟೀಲ, ಬಸಪ್ಪ ವಗ್ಗರ, ಹನುಮಂತ್ರಾಯ ತುಂಬಗಿ, ಸೋಮಶೇಖರ ಮೇಟಿ, ಪಿಡಬ್ಲೂಡಿ ಎಇಇ ಆರ್‌.ಎಂ. ಹುಂಡೇಕಾರ, ಎಂಜಿನಿಯರ್‌ ಗಳಾದ ಅಶೋಕ ಬಿರಾದಾರ, ಸೋಮನಾಥ ಕುಳಗೇರಿ, ಧರ್ಮರಾಜ ಕಲುºರ್ಗಿ, ಸಂದೀಪ ಕುಡೂÉರ, ಹೊನ್ನಪ್ಪ ಢವಳಗಿ, ಗುತ್ತಿಗೆದಾರರಾದ  ಎ.ಎಸ್‌. ಪಾಟೀಲ, ಎ.ಜಿ. ಮಲ್ಲಿಕಾರ್ಜುನ, ಲಕ್ಷ್ಮಣ ವಡ್ಡರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಆವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.