Vijayapura; ಮೂರು ಫೈನಾನ್ಸ್ ಕಳ್ಳತನದಲ್ಲಿ ಮೂವರ ಬಂಧನ
Team Udayavani, Feb 11, 2024, 12:58 PM IST
ವಿಜಯಪುರ: ಜಿಲ್ಲೆಯಲ್ಲಿ ನಡೆದಿದ್ದ ಫೈನಾನ್ಸ್ ಕಳ್ಳತನ, ಕಳ್ಳತನ ಯತ್ನ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸಿಂದಗಿ ಪಟ್ಟಣದಲ್ಲಿರುವ ಅನ್ನಪೂರ್ಣ ಫೈನಾನ್ಸ್, ಇಂಡಿ ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಳ್ಳತನ ಹಾಗೂ ಸಿಂದಗಿ ಪಟ್ಟಣದಲ್ಲಿರುವ ಎಲ್&ಟಿ ಕಂಪನಿಯ ಕಳ್ಳತನ ಯತ್ನ ಪ್ರಕರಣದಲ್ಲಿ ಸಿಂದಗಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಸಿಂದಗಿ ಪಟ್ಟಣದ ಗೋಲಿಬಾರ ಮಡ್ಡಿಓಣಿ ನಿವಾಸಿಗಳಾದ ಪ್ರಭು ಹಲಗಿ (32), ಅನಿಲ ನಾಯ್ಕೋಡಿ (32), ಬಸವರಾಜ ಮಾದರ (28) ಎಂದು ಗುರುತಿಸಲಾಗಿದೆ. ಬಂಧಿತರಿಂದ 2.20 ಲಕ್ಷ ರೂ. ವಶಕ್ಕೆ ಪಡೆದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.
ಫೈನಾನ್ಸ್ ಕಳ್ಳತನ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಸಿಂದಗಿ ಸಿಪಿಐ ಆರ್.ನಾನಾಗೌಡ ಪೊಲೀಸಪಾಟೀಲ, ಪಿಎಸ್ಐ ಭೀಮಣ್ಣ ರಬಕವಿ ನೇತೃತ್ವದ ಪೊಲೀಸ್ ತನಿಖಾ ತಂಡವನ್ನು ಎಸ್ಪಿ ಋಷಿಕೇಶ ಭಗವಾನ್ ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್