ನೆರಳಿಗಾಗಿ ಮರದಡಿ ಕುಳಿತವರಿಗೆ ಸಿಡಿಲು ಬಡಿತ: ತಾಯಿ-ಮಗಳು ಸಾವು
Team Udayavani, Oct 10, 2020, 4:13 PM IST
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಮದ್ಯಾಹ್ನ ಮಳೆ ಇಲ್ಲದೇ ಸಿಡಿಲು ಬಡಿದು ತಾಯಿ ಹಾಗೂ ಮಗಳು ಮೃತಪಟ್ಟು, ಇನ್ನೊಬ್ಬನಿಗೆ ಗಾಯಗಳಾದ ಘಟನೆ ಜರುಗಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದ ಹೊರ ಭಾಗದಲ್ಲಿ ಬಿದ್ದ ಸಿಡಿಲಿಗೆ ಸಾವನ್ನಪ್ಪಿದವರನ್ನು ಮಹಾದೇವಿ ಭಜಂತ್ರಿ (43), ಆಕೆಯ ಮಗಳು ಸೋನಿ ಭಜಂತ್ರಿ (12) ಎಂದು ಗುರುತಿಸಲಾಗಿದೆ. ಮೃತ ಮಹಾದೇವಿಯವರ ಪತಿ ಯಂಕಪ್ಪನಿಗೆ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪತಿ, ಪತ್ನಿ ಹಾಗೂ ಮಗಳು ಜಮೀನಿನಿಂದ ವಾಪಸ್ ಮನೆಗೆ ಬರುವ ವೇಳೆ ಮರದ ನೆರಳಿಗೆ ಕುಳಿತಿದ್ದರು. ಈ ವೇಳೆ ಸಿಡಿಲು ಬಡಿದು, ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:ಮಹದಾಯಿ- ಕೃಷ್ಣಾ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ರಮೇಶ್ ಜಾರಕಿಹೊಳಿ ಚರ್ಚೆ
ಸುದ್ದಿ ತಿಳಿಯುತ್ತಲೇ ಬಸವನಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್