ವಿಜಯಪುರ: ಸಿಡಿಲು ಬಡಿದು 15 ಕುರಿಗಳು ಸಾವು
Team Udayavani, Sep 8, 2020, 6:32 PM IST
ವಿಜಯಪುರ: ಮರವೊಂದಕ್ಕೆ ಸಿಡಿಲು ಬಡಿದ ಪರಿಣಾಮ ಆ ಮರದ ಅಡಿಯಲ್ಲಿ ನಿಂತಿದ್ದ ಕುರಿಮಂದೆಯೊಂರ 15 ಕುರಿಗಳು ಸಾವಿಗೀಡಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಭಾರೀ ಮಳೆಯಿಂದ ರಕ್ಷಣೆ ಪಡೆಯಲು ಕುರಿಗಾಹಿಗಳು ತಮ್ಮ ಕುರಿ ಮಂದೆಯೊಂದಿಗೆ ಮರದ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಆ ಮರಕ್ಕೆ ಸಿಡಿಲು ಬಡಿದ ಪರಿಣಾಮ 15 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಹಂದಿಗನೂರ ಗ್ರಾಮದ ಮಡಿವಾಳಪ್ಪ ಈರಪ್ಪ ಹಿರೇಕುರುಬರ ಎಂದಿನಂತೆ ಮಂಗಳವಾರವೂ ಕುರಿ ಮೇಯಿಸಲು ತನ್ನ ಹೊಲಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಗುಡುಗು ಮಿಂಚು ಸಹಿತ ಮಳೆ ಸುರಿಯಲು ಆರಂಭವಾಯಿತು.
ಈ ಸಂದರ್ಭದಲ್ಲಿ ಕುರಿಗಳನ್ನು ಗಿಡದ ಕೆಳಗೆ ನಿಲ್ಲಿಸಿ, ಮಗನೊಂದಿಗೆ ಮತ್ತೊಂದು ಕಡೆ ಈರಪ್ಪ ನಿಂತಿದ್ದರು. ಈ ಸಂದರ್ಭದಲ್ಲಿ ಕುರಿಗಳು ನಿಂತಿದ್ದ ಮರಕ್ಕೆ ಇದ್ದಕ್ಕಿದ್ದಂತೆಯೇ ಸಿಡಿಲು ಬಡಿಯಿತು.
ಪರಿಣಾಮ, 15 ಕುರಿಗಳು ಸ್ಥಳದಲ್ಲಿಯೇ ಸಾವಿಗೀಡಾಗಿವೆ ಮತ್ತು ಇದರಿಂದ ಕುರಿಗಳ ಮಾಲೀಕ ಮಡಿವಾಳಪ್ಪನಿಗೆ 2 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ. ಈ ನಷ್ಟವನ್ನು ಸರಕಾರ ಪರಿಹಾರ ರೂಪದಲ್ಲಿ ಭರಿಸಬೇಕು ಎಂದು ಕರ್ನಾಟಕ ಜನಸ್ಪಂದನ ಟ್ರಸ್ಟ್ ಜಿಲ್ಲಾಧ್ಯಕ್ಷ ಮಂಜುನಾಥ ಹಂದಿಗನೂರ ಈ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ