ಪ್ರವಾಸಿಗರ ಆಕರ್ಷಣೆಗೆ ಟೂರಿಸಂ ಹಬ್‌


Team Udayavani, Mar 8, 2021, 7:50 PM IST

Tourism hub for tourists

ವಿಜಯಪುರ: ನಗರದ ಐತಿಹಾಸಿಕ ಸ್ಥಳಗಳ ಸಂರಕ್ಷಣೆ ಹಾಗೂ ಪ್ರವಾಸಿಗರ ಆಕರ್ಷಣೆಗಾಗಿ ಟೂರಿಸಂ ಹಬ್‌ ನಿರ್ಮಾಣಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ಹೇಳಿದರು.

ನಗರದ ಮಧ್ಯಭಾಗದಲ್ಲಿರುವ ಆದಿಲಶಾಹಿ ಕಾಲದ ಐತಿಹಾಸಿಕ ತಾಣಗಳ ಸ್ವತ್ಛತೆ, ಸಂರಕ್ಷಣೆ ಮತ್ತು ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲಿಸಲು ರವಿವಾರ ಹೆರಿಟೇಜ್‌ ವಾಕ್‌ ನಡೆಸಿದ ಅವರು, ಖ್ವಾಜಾ ಜಹಾನ್‌ ಮಸೀದಿ-ಹಳೆ ಮಸೀದಿ ನಂ. 294, ಗಗನ್‌ ಮಹಲ್‌, ಆನಂದ ಮಹಲ್‌, ಸಿಎಸ್‌ಐ ಚರ್ಚ್‌, ಮೆಕ್ಕಾ ಮಸೀದಿ, ಚಿಂಚದೀದಿ ಮಸೀದಿ, ಪಸರಿ ಕಮಾನ್‌ ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಗನ್‌ ಮಹಲ್‌ಗೆ ಸ್ವತ್ಛತೆಗಾಗಿ ಕ್ರಮ ಕೈಗೊಳ್ಳಲು ಕಸ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಆನಂದ ಮಹಲ್‌ ಗೆ ಭೇಟಿ ನೀಡಿ ಪ್ರವಾಸಿಗರಿಗೆ ಐತಿಹಾಸಿಕ ಸ್ಮಾರಕಗಳು, ಇತಿಹಾಸದ ಬಗ್ಗೆ ತಿಳಿಯುವಂತಾಗಲು ಮೊದಲು ವ್ಯಾಖ್ಯಾನ ಕೇಂದ್ರ ಸ್ಥಾಪನೆ, ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿ ಫುಡ್‌ ಕೋರ್ಟ್‌ ಇರುವುದು ಅತ್ಯಂತ ಅವಶ್ಯಕವಾಗಿದೆ ಎಂದರು.

ಉದ್ಯಾನವನ ನಿರ್ಮಿಸಿ, ಪಾಕಿಂìಗ್‌ ವ್ಯವಸ್ಥೆಗೂ ಗಮನ ನೀಡುವುದು ಮುಖ್ಯವಾಗಿದ್ದು ಈ ಕುರಿತು ಸಂಬಂ ಧಿಸಿದ ಅ ಧಿಕಾರಿಗಳು ಗಮನ ಹರಿಸಬೇಕು. ಮೆಕ್ಕಾ ಮದೀನಾ ಮಸೀದಿ ಹಿಂದಿನ ಭಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಮಸೀದಿ ಮುಂಭಾಗ ಉದ್ಯಾನವನ ನಿರ್ಮಿಸಿ ಮಾರ್ನಿಂಗ್‌ ವಾಕರ್ಸಗಳಿಗೆ ಅನುವು ಮಾಡಿಕೊಳ್ಳುವ ಅಗತ್ಯವಿದೆ. ಮಕ್ಕಳು ಆಟವಾಡಲು ಸಾಧನ-ಸಲಕರಣೆಗಳು ಒದಗಿಸಬೇಕು ಎಂದು ಹೇಳಿದರು.

ಮಹಿಳೆಯರ ಮಸೀದಿ ಇದಾಗಿದ್ದು ಐತಿಹಾಸಿಕ ಸ್ಮಾರಕಗಳ ಛಾಯಾಚಿತ್ರದೊಂದಿಗೆ ಉತ್ತಮ ದಾಖಲೀಕರಣಗೊಳಿಸಲಾಗಿದೆ. ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ ಅವರು ಈಗಾಗಲೇ ಮೆಕ್ಕಾ ಮಸೀದಿ ಮುಂಭಾಗ ಸ್ವತ್ಛಗೊಳಿಸಿ ಅತಿಕ್ರಮಣಗೊಂಡ ಕಟ್ಟಡಗಳನ್ನು ತೆರವುಗೊಳಿಸಿದೆ. ಅದರಂತೆ ಸ್ವತ್ಛಗೊಳಿಸಲಾಗಿದೆ. ಉದ್ಯಾನವನ ನಿರ್ಮಿಸುವುದರಿಂದ ಸಾರ್ವಜನಿಕರಿಗೆ ನೆರವಾಗಲಿದೆ ಎಂದರು.

ಐತಿಹಾಸಿಕ ತಾಣಗಳಿಗೆ ನೀರು ಪೂರೈಸುವ ಯೋಜನೆಯ ಖರ್ಚು ವೆಚ್ಚ ವರದಿ ಸಿದ್ಧಪಡಿಸಲಾಗುತ್ತಿದ್ದು, ಗೋಲಗುಮ್ಮಟವರೆಗೆ ನೀರು ಸರಬರಾಜು ಮಾಡುವ ಕುರಿತು ಧಾರವಾಡ ಪುರಾತತ್ವ ಸರ್ವೇಕ್ಷಣ ಇಲಾಖೆ ಕಚೇರಿಯೊಂದಿಗೆ ಪತ್ರ ವ್ಯವಹಾರ ನಡೆಸಿಗೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದರು. ಇವುಗಳ ವ್ಯಾಪ್ತಿಯಲ್ಲಿ ಇರುವ ತೋಟಗಾರಿಕೆ ಕಚೇರಿಯನ್ನು ಪ್ರವಾಸೋದ್ಯಮ ಇಲಾಖೆ ಸ್ಥಳಕ್ಕೆ ಹಾಗೂ ಪ್ರವಾಸೋದ್ಯಮ ಇಲಾಖೆಯನ್ನು ಈ ಸ್ಥಳಕ್ಕೆ ಸ್ಥಳಾಂತರಿಸಿ ಟೂರಿಸಂ ಹಬ್‌ಗ ಸೂಕ್ತ ಗಮನ ನೀಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಚಿಂಚ್‌ ದೀದಿ ಮಸೀದಿ, ಖ್ವಾಜಾ ಮಸೀದಿ ಹಾಗೂ ಕಮಾನ್‌ ಪರಿಶೀಲಿಸಿದ ಅವರು ಕೋಟೆ ಮೇಲೆ ಬೆಳೆದ ಗಿಡಗಂಟೆಗಳನ್ನು ತೆಗೆದು, ಶುಚಿಗೊಳಿಸಲು ಪ್ರಯತ್ನಿಸಬೇಕು. ಅಸಾರ್‌ ಮಹಲ್‌ ಪಕ್ಕದಲ್ಲಿ ತ್ಯಾಜ್ಯ ಹಾಗೂ ಕಸ ಚೆಲ್ಲುವುದನ್ನು ನಿಯಂತ್ರಿಸಬೇಕು. ಪಸರಿ ಕಮಾನ್‌ ವ್ಯಾಪ್ತಿಯಲ್ಲಿ ಅನ  ಧಿಕೃತವಾಗಿ ವಾಹನಗಳ ನಿಲುಗಡೆಯನ್ನು ನಿಯಂತ್ರಿಸಿ, ಸ್ಮಾರಕಗಳನ್ನು ಸಂರಕ್ಷಿಸಬೇಕು. ಈ ಪ್ರದೇಶ ವ್ಯಾಪ್ತಿಯಲ್ಲಿ ಸ್ವತ್ಛತೆಗೆ ಗಮನ ನೀಡಬೇಕು ಎಂದು ಅ ಧಿಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ನಗರ ಯೋಜನಾ ನಿರ್ದೇಶಕರು, ಉಪ ವಿಭಾಗಾ ಧಿಕಾರಿ ಬಲರಾಮ ಲಮಾಣಿ, ಪುರಾತತ್ವ ಇಲಾಖೆ ಹಿರಿಯ ಸಂರಕ್ಷಣಾ ಧಿಕಾರಿ ಪ್ರಮೋದ,  ಕಿರಿಯ ಸಂರಕ್ಷಣಾಧಿ ಕಾರಿ ರಾಕೇಶ ಹಾಗೂ ಕ್ರೀಡಾ ಧಿಕಾರಿ ಎಸ್‌.ಜಿಲೋಣಿ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.