ಡೋಣಿ ನದಿಯಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್: ಸ್ಥಳೀಯರಿಂದ ರಕ್ಷಣೆ
Team Udayavani, Jul 21, 2021, 1:24 PM IST
ವಿಜಯಪುರ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಕಾರಣ ತುಂಬಿ ಹರಿಯುತ್ತಿರುವ ಡೋಣಿ ನದಿಯ ಸೇತುವೆ ಮೇಲೆ ಚಲಿಸುತ್ತಿದ್ದ ಟ್ರ್ಯಾಕ್ಟರ್ ಕೊಚ್ವಿಹೋದ ಘಟನೆ ತಾಳಿಕೋಟೆ ಬಳಿ ಸಂಭವಿಸಿದೆ.
ತಾಳಿಕೋಟೆ ತಾಲೂಕಿನ ಹಡಗಿನಾಳ ಗ್ರಾಮದ ಬಳಿ ಹರಿಯುವ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗೆ ನೆಲ ಮಟ್ಟದಲ್ಲಿ ನಿರ್ಮಿಸಿರುವ ಸೇತುವೆ ಮೇಲೆ ಸಂಚರಿಸುತ್ತಿದ್ದ ಟ್ರ್ಯಾಕ್ಟರ್ ನದಿಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕೂಡಲೇ ಟ್ರ್ಯಾಕ್ಟರ್ ನಲ್ಲಿದ್ದವರು ತಕ್ಷಣ ಈಜಿ ದಡ ಸೇರಿದ್ದು, ಯಾವುದೇ ಜೀವ ಅಪಾಯ ಸಂಭವಿಸಿಲ್ಲ.
ಇದನ್ನೂ ಓದಿ:ಎರಡನೇ ವರ್ಷದ ಸಂಭ್ರಮದ ಬಿಎಸ್ ವೈ ಭೋಜನ ಕೂಟ ಮುಂದೂಡಿಕೆ!
ಗುಂಡಕಾನಾಳ ಗ್ರಾಮದ ಮಧುಗೌಡ ಪಾಟೀಲ ಅವರಿಗೆ ಸೇರಿದ್ದು, ತಾಳಿಕೋಟಿ ಪಟ್ಟಣದಿಂದ ಮೂಕಿಹಾಳ ಗ್ರಾಮಕ್ಕೆ ಟ್ರ್ಯಾಕ್ಟರ್ ಹೊರಟಿತ್ತು. ನದಿ ನೀರು ಸೇತುವೆ ಮೇಲೆ ಪ್ರವಾಹದ ನೀರು ಹರಿಯುತ್ತಿದ್ದರೂ ಚಾಲಕ ಪ್ರವಾಹ ಲೆಕ್ಕಿಸದೇ ನದಿ ದಾಟಲು ಪ್ರಯತ್ನಿಸಿದಾಗ ಈ ಘಟನೆ ಸಂಭವಿಸಿದೆ.
ವಿಷಯ ತಿಳಿಯುತ್ತಲೇ ಸ್ಥಳೀಯರು ಜೆಸಿಬಿ ಬಳಸಿ ಟ್ರ್ಯಾಕ್ಟರ್ ಮೇಲೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ