ರೈತರಿಂದ ಟ್ರ್ಯಾಕ್ಟರ್‌ ಜನತಾ ಪರೇಡ್‌

ಮೂರು ಮರಣ ಶಾಸನಗಳು ಯಾವೂದೇ ಕಾರಣಕ್ಕೂ ಜಾರಿಗೆ  ಬರಬಾರದು ಎಂದು ಆಗ್ರಹಿಸಿದರು.

Team Udayavani, Jan 27, 2021, 4:06 PM IST

ರೈತರಿಂದ ಟ್ರ್ಯಾಕ್ಟರ್‌ ಜನತಾ ಪರೇಡ್‌

ಆಳಂದ: ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ದೆಹಲಿಯಲ್ಲಿ ರೈತರು ನಡೆಸಿದ ಸತ್ಯಾಗ್ರಹಕ್ಕೆ ಬೆಂಬಲಿಸಿ ಪಟ್ಟಣದಲ್ಲಿ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಪಟ್ಟಣದಲ್ಲಿ ಟ್ರ್ಯಾಕ್ಟರ್‌ ಮೂಲಕ ಜನತಾ ಪರೇಡ್‌ ನಡೆಸಲಾಯಿತು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಿಂದ ಆರಂಭಗೊಂಡ ಟ್ರ್ಯಾಕ್ಟರ್‌ ನಿಂದ ಜನತಾ ಪರೇಡ್‌ಅನ್ನು ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ತಹಸೀಲ್‌ ಹತ್ತಿರದ ಸತ್ಯಾಗ್ರಹ ಸ್ಥಳಕ್ಕೆ ತಲುಪಿದ ಮುಖಂಡರು ಮಾತನಾಡಿ, ರೈತರಿಗೆ ಬೇಡವಾದ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ರೈತರ ವಿರೋಧಿ  ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಮುಖಂಡ ಮೌಲಾ ಮುಲ್ಲಾ, ರಮೇಶ ಲೋಹಾರ, ಸುಧಾಮ ಧನ್ನಿ, ಪಾಂಡುರಂಗ ಮಾವೀನಕರ್‌, ಪ್ರಕಾಶ  ಜಾನೆ, ಶಂಕಕರಾವ್‌ ದೇಶಮುಖ, ದಲಿತ ಸೇನೆ ಅಧ್ಯಕ್ಷ ಧರ್ಮಾ ಬಂಗರಗಾ, ಚಂದ್ರಕಾಂತ ಖೋಬ್ರೆ, ಆಶ್ಪಾಕ್‌ ಮುಲ್ಲಾ, ಫಕ್ರೋದ್ದೀನ್‌ ಗೋಳಾ ಇದ್ದರು.

ವಾಡಿಯಲ್ಲಿ ಡಿಎಸ್‌ಎಸ್‌ ನಿರಶನ ವಾಡಿ: ಗಣರಾಜ್ಯೋತ್ಸವದಂದು ದೇಶಾದ್ಯಂತ ಹೊಸ ಕೃಷಿ ನೀತಿಗಳನ್ನು ಖಂಡಿಸಿ ನಡೆದ ರೈತರ ಐತಿಹಾಸಿಕ ಚಳವಳಿ ಬೆಂಬಲಿಸಿ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ್ದ ದಸಂಸ ಮುಖಂಡರು, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಕೃಷಿ ಮಸೂದೆಗಳ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದರು.ಕೇಂದ್ರ ಬಿಜೆಪಿ ಸರಕಾರದ ವಿರುದ್ಧ  ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಮೂರು ಮರಣ ಶಾಸನಗಳು ಯಾವೂದೇ ಕಾರಣಕ್ಕೂ ಜಾರಿಗೆ
ಬರಬಾರದು ಎಂದು ಆಗ್ರಹಿಸಿದರು.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶ್ರವಣಕುಮಾರ ಮೊಸಲಗಿ ಮಾತನಾಡಿ, ಸಂಸತ್ತಿನಲ್ಲಿ ಮಂಡಿಸಲಾದ ರೈತ ವಿರೋಧಿ  ಮೂರು ಕರಾಳ ಕಾಯ್ದೆಗಳ ಕುರಿತು ಪ್ರಜಾತಾಂತ್ರಿಕವಾಗಿ ಚರ್ಚೆಯಾಗದೆ ಏಕಾಏಕಿ ಜಾರಿಗೆ ತರಲು ಹಟತೊಟ್ಟಿರುವ ಬಿಜೆಪಿ ಸರಕಾರ ರೈತರ ಗೋರಿ ಕಟ್ಟಲು ಮುಂದಾಗಿದೆ ಎಂದು ಆರೋಪಿಸಿದರು. ಡಿಎಸ್‌ಎಸ್‌ ಮುಖಂಡರಾದ ರಾಘುವೀರ ಪವಾರ, ಉದಯಕುಮಾರ ಯಾದಗಿರಿ, ಹೋರಾಟವನ್ನು ಬೆಂಬಲಿಸಿ ಪಾಲ್ಗೊಂಡಿದ್ದ
ಕಾಂಗ್ರೆಸ್‌ ಮುಖಂಡರಾದ ಟೋಪಣ್ಣ ಕೋಮಟೆ, ದೇವಿಂದ್ರ ಕರದಳ್ಳಿ, ಚಂದ್ರಸೇನ ಮೇನಗಾರ, ಝರೀನಾಬೇಗಂ, ಮಹ್ಮದ್‌ ಗೌಸ್‌, ನಾಗೇಂದ್ರ
ಜೈಗಂಗಾ, ರಾಜಾ ಪಟೇಲ, ವಿಜಯಕುಮಾರ ಸಿಂಗೆ, ತಿಮ್ಮಯ್ಯ ಪವಾರ, ಬಶೀರ ಖುರೇಶಿ, ಮಲ್ಲಯ್ಯ ಗುತ್ತೇದಾರ, ಮರಗಪ್ಪ ಕಲಕುಟಗಿ, ಅಶ್ರಫ್‌ ಖಾನ್‌ ಇದ್ದರು.

ಟಾಪ್ ನ್ಯೂಸ್

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

4-mother

Mother: ತಾಯಿಯ ವೃತ್ತಿಗಳು; ಆಕ್ಯುಪೇಷನಲ್‌ ಥೆರಪಿಯ ಒಳನೋಟಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.