ವಿಜಯಪುರ: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ
Team Udayavani, Dec 13, 2022, 6:41 PM IST
ವಿಜಯಪುರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತನ್ನಿಬ್ಬರು ಕರುಳ ಕುಡಿಗಳೊಂದಿಗೆ ತಾಯಿ ತುಮಬಿ ಹರಿಯುತ್ತಿದ್ದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಉಕ್ಕಲಿ ಗ್ರಾಮದಲ್ಲಿ ನಡೆದಿದೆ.
ತನ್ನಿಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಯನ್ನು ಬಸವನಬಾಗೇವಾಡಿ ತಾಲೂಕ ಉಕ್ಕಲಿ ಗ್ರಾಮದ ರೇಣುಕಾ ಅಮೀನಪ್ಪ ಕೋನಿನ್ (26 ) ಹಾಗೂ ಹೆತ್ತವಳಿಂದಲೇ ನಾಲೆಗೆ ಎಸೆಯಲ್ಪಟ್ಟು ಹತ್ಯೆಯಾದ ದುರ್ಧೈವಿ ಹಸುಳೆಗಳನ್ನು ಯಲ್ಲವ್ವ (2) ಅಮೃತಾ (1) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಬಿಜೆಪಿಯವರಿಗೆ ತಾಕತ್ತಿದ್ದರೆ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ: ಡಾ.ಪುಷ್ಪಾ ಅಮರನಾಥ
ಕಳೆದ ಎರಡು ದಿನಗಳ ಹಿಂದೆ ಗಂಡನ ಮನೆಯಲ್ಲಿ ಜಗಳವಾಡಿ, ತನ್ನಿಬ್ಬರು ಮಕ್ಕಳೊಂದಿಗೆ ರೇಣುಕಾ ಮನೆ ಬಿಟ್ಟು ಬಂದಿದ್ದಳು. ಕಾಣೆಯಾದ ಹೆಂಡತಿ ಮಕ್ಕಳನ್ನು ಅಮೀನಪ್ಪ ಹಾಗೂ ಕುಟುಂಬದವರು ಹುಡುಕಿದ್ದರೂ ಸಿಕ್ಕಿರಲಿಲ್ಲ.
ಸೋಮವಾರ ಮನಗೂಳಿ ಪೊಲೀಸ್ ಠಾಣೆಗೆ ಬಂದಿದ್ದ ಅಮೀನಪ್ಪ ತನ್ನ ಹೆಂಡತಿ-ಮಕ್ಕಳು ಕಾಣೆಯಾಗಿದ್ದಾರೆಂದು ದೂರು ನೀಡಿದ್ದ. ಮಂಗಳವಾರ ಕಾಲುವೆಯಲ್ಲಿ ರೇಣುಕಾ, ಓರ್ವ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ. ಒನ್ನೊಂದು ಮಗುವಿಗಾಗಿ ಪೊಲೀಸರು ಸ್ಥಳೀಯರ ನೆರವಿನಿಂದ ಮುಳುಗು ಈಜುತಜ್ಞರ ಸಹಾಯದಿಂದ ಶೋಧಕಾರ್ಯ ನಡೆಸಿದ್ದಾರೆ.
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಮನಗೂಳಿ ಎಸೈ ಪರಶುರಾಮ, ಪರಿಶೀಲನೆ ನಡೆಸಿದ್ದು, ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ