ಸಮಸ್ಯೆಗೆ ಸ್ಪಂದಿಸದಿದ್ದರೆ ವರ್ಗಾವಣೆ


Team Udayavani, Sep 15, 2018, 1:50 PM IST

vij-5.jpg

ಇಂಡಿ: ನ್ಯಾಯ ನಿಷ್ಠೆಯಿಂದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುವುದಾದರೆ ಇಲ್ಲಿ ಕೆಲಸ ಮಾಡಿ, ಇಲ್ಲದಿದ್ದರೆ ಕೂಡಲೆ ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.

ಶುಕ್ರವಾರ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ನಡೆದ ಟಾಸ್ಕ್ಪೋರ್ಸ್‌ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ತಾಲೂಕನ್ನು ಎರಡನೇ ಜಿಲ್ಲೆಯನ್ನಾಗಿ ಮಾಡುವ ಗುರಿ ಹೊಂದಿದ್ದು ಆ ನಿಮಿತ್ತ ಕಾರ್ಯ ಮಾಡಬೇಕು ಎಂದು ತಾಕೀತು ಮಾಡಿದರು.

ಮುಂಗಾರು, ಹಿಂಗಾರು ಮಳೆಯಾಗದೆ ರೈತರು ಆತಂಕದಲ್ಲಿದ್ದಾರೆ. ಈಗಾಗಲೇ ಸರಕಾರ 86 ತಾಲೂಕುಗಳಿಗೆ ಬರ ಘೋಷಣೆ ಮಾಡಿದ್ದು ಅಧಿಕಾರಿಗಳು ರೈತರಿಗೆ ಸೂಕ್ತ ಪರಿಹಾರ ದೊರಕುವಂತೆ ಸರಕಾರಕ್ಕೆ ಸರಿಯಾದ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನನ್ನ ಅವಧಿಯಲ್ಲಿ ಮಹತ್ವದ ಎಲ್ಲ ಯೋಜನೆಗಳು ಅಭಿವೃದ್ಧಿ ಕಾರ್ಯಗಳು ಆಗಿವೆ. ಇಂದು ತಾಲೂಕಿನಾದ್ಯಂತ ಮುಂಗಾರು ಹಾಗೂ ಹಿಂಗಾರು ಬೆಳೆ ಸಂಪೂರ್ಣ ವಿಫಲವಾಗಿವೆ. ಕಳೆದ ವರ್ಷದಲ್ಲಿ ಅನೇಕ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗಿತ್ತು. ಆದರೆ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಿಂದ ಅಲ್ಪ ಸ್ವಲ್ಪ ಸಮಸ್ಯೆ ಪರಿಹಾರವಾಗಿದ್ದರೂ ಸಹಿತ ಹೇಳಿಕೊಳ್ಳುವಷ್ಟು ಯಶಸ್ವಿಯಾಗಿಲ್ಲ.

ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಕಾಲುವೆ ಆಧಾರಿತ ಯೋಜನೆಯಾಗಿದ್ದು ಅಧಿಕಾರಿಗಳು ವಿಶೇಷ ಗಮನ ಹರಿಸಿ ಎಂದ ಅವರು, ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಭೀಮಾ ನದಿಯಲ್ಲಿ ನೀರು ನಿಲ್ಲುವ ಸ್ಥಳದಲ್ಲಿ ಶಾಶ್ವತ ಯೋಜನೆ ಅನುಷ್ಠಾನಕ್ಕೆ ತರಲು ತ್ವರಿತವಾಗಿ ಯೋಜನೆ ಸಿದ್ಧಪಡಿಸಿ ಎಂದು ಪಿಆರ್‌ಡಿ ಅಧಿಕಾರಿ ಬಿ.ಎಫ್‌. ನಾಯ್ಕ ಅವರಿಗೆ ಸೂಚಿಸಿದರು. 

ಬರದ ಹಣೆ ಪಟ್ಟಿ ಕಟ್ಟಿಕೊಂಡಿರುವ ಈ ಭಾಗದ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಿ. ಕುಡಿಯುವ ನೀರಿನ ಸಮಸ್ಯೆಯಿಂದಾಗಿ ನಿಮ್ಮ ಕಚೇರಿಗೆ ಸಾಮಾನ್ಯ ವ್ಯಕ್ತಿ ಬಂದರೂ ಸಹಿತ ತಾಂತ್ರಿಕ ಕಾರಣಗಳನ್ನು ಹೇಳಬೇಡಿ. ಸರಿಯಾಗಿ ಸ್ಪಂದಿಸಿ 24 ಗಂಟೆಯಲ್ಲಿ ನೀರು ಒದಗಿಸಬೇಕು ಎಂದರು.

ಐಎಲ್‌ಸಿ ಕ್ಯಾನಲ್‌ ನೀರು ಹರಿಯುತ್ತಿಲ್ಲ ಎಂದು ರೂಗಿ ಗ್ರಾಮದ ರೈತರು ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡುವಾಗ ಅಧಿ ಕಾರಿಗಳು ಆಗಸ್ಟ್‌ 13ರೊಳಗೆ ಗಡುವು ಪಡೆದು ನೀರು ಬಿಡುತ್ತೇವೆ ಎಂದು ಹೇಳಿದ್ದು ನೀರು ಏಕೆ ಬಿಟ್ಟಿಲ್ಲ? ಸುಳ್ಳು ಹೇಳುವುದು ಅಶ್ವಾಸನೆ ಕೊಡುವುದು ರಾಜಕಾರಣಿಗಳ ಕೆಲಸ. ನೀವು ಸುಳ್ಳು ಹೇಳಿದರೆ ಸಾರ್ವಜನಿಕರು ನಂಬಿಕೆ ಯಾರ ಮೇಲೆ ಇಡಬೇಕು ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಕೃಷಿ ಅಧಿಕಾರಿ ಮಾದೇವಪ್ಪ ಏವೂರ ಮಾತನಾಡಿ, ಮುಂಗಾರು ಹಂಗಾಮಿನ ಬೆಳೆಗಳು ವಿಫಲವಾಗಿರುವುದರಿಂದ ಸರಕಾರಕ್ಕೆ ಪ್ರಸಕ್ತ ಸಾಲಿನಲ್ಲಿ 31.72 ಕೋಟಿ ರೂ. ಪರಿಹಾರ ಕೋರಿ ಮಾಹಿತಿ ಸಲ್ಲಿಸಲಾಗಿದೆ ಎಂದಾಗ ಶಾಸಕರು ಮಧ್ಯಪ್ರವೇಶಿಸಿ ನೋಡಿ ಹಿಂದೆ ಆಲಿಕಲ್ಲು ಮಳೆಯಾದ ಸಂದರ್ಭದಲ್ಲಿ ಕೆಲವೊಂದು ಗ್ರಾಮಗಳಿಗೆ ಮಾತ್ರ ಪರಿಹಾರ
ನೀಡಿ, ಇನ್ನು ಕೆಲವೊಂದು ಗ್ರಾಮಗಳಿಗೆ ಪರಿಹಾರ ನೀಡಿಲ್ಲ. ನಿಮ್ಮ ತಪ್ಪುಗಳಿಂದ ರೈತರಿಗೆ ಅನ್ಯಾಯ ಮಾಡಿದಂತಾಗಿದೆ. ಈ ಬಾರಿ ಹೆಚ್ಚುವರಿಯಾಗಿ ಪರಿಹಾರ ಕೋರಿ ಸರಕಾರಕ್ಕೆ ಪತ್ರ ಬರೆಯಲು ತಿಳಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳಾದ ಪಶು ವೈದ್ಯಾಧಿಕಾರಿ ಸಿ.ಬಿ. ಕುಂಬಾರ, ತೋಟಗಾರಿಕೆ ಅಧಿಕಾರಿ ಎಸ್‌.ಎಚ್‌. ಪಾಟೀಲ, ಕೃಷಿ ಅಧಿಕಾರಿ ಮಹಾದೇವಪ್ಪ ಏವೂರ, ತಾಲೂಕು ವೈದ್ಯಾಧಿಕಾರಿ ಕುಲಕರ್ಣಿ ತಮ್ಮ ಇಲಾಖೆ ಪ್ರಗತಿ ಪರಿಶೀಲನೆ ವರದಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ| ಪಿ.ರಾಜು, ತಹಶೀಲ್ದಾರ್‌ ಸಂತೋಷ ಮ್ಯಾಗೇರಿ, ತಾಪಂ ಇಒ ವಿಜಯಕುಮಾರ ಅಜೂರ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ರಾಜಕುಮಾರ ತೋರವಿ, ಬಿಇಒ ಎಸ್‌.ಬಿ. ಬಿಂಗೇರಿ, ಹೆಸ್ಕಾಂ ಅಭಿಯಂತರ ಮೆಡೇದಾರ, ಸಣ್ಣ ನೀರಾವರಿ ಅಭಿಯಂತರ ಎಸ್‌. ಎಸ್‌. ಪಾಟೀಲ, ಪಿಡಬ್ಲೂಡಿ ಅಧಿಕಾರಿ ಕತ್ತಿ ಇದ್ದರು. 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.