![modi (4)](https://www.udayavani.com/wp-content/uploads/2024/07/modi-4-4-415x256.jpg)
ಅಂತ್ಯಕ್ರಿಯೆಗೆ ತಪ್ಪದ ಸಂಕಟ
Team Udayavani, Jan 7, 2020, 2:54 PM IST
![vp-tdy-1](https://www.udayavani.com/wp-content/uploads/2020/01/vp-tdy-1-2-620x273.jpg)
ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯ ಲಾಲ್ ಬಹಾದ್ದೂರ್ ಜಲಾಶಯ ನಿರ್ಮಾಣಕ್ಕೆ ಮುಳುಗಡೆ ಹೊಂದಿರುವ ಪ್ರಥಮ ಗ್ರಾಮಗಳಲ್ಲಿ ಒಂದಾಗಿರುವ ಆಲಮಟ್ಟಿಯಲ್ಲಿ ಅಂತ್ಯಕ್ರಿಯೆಗೆ ಪರದಾಡುವಂಹ ಪರಿಸ್ಥಿತಿ ನಿರ್ಮಾಣವಾಗಿದೆ.
20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಆಲಮಟ್ಟಿ ಪುನರ್ವಸತಿ ಕೇಂದ್ರಕ್ಕೆ ಸುಮಾರು 10 ಎಕರೆ ಜಮೀನನ್ನು ಕೃ.ಮೇ.ಯೋ. ಪುನರ್ವಸತಿ ಇಲಾಖೆಯಿಂದ ಸ್ವಾಧೀನ ಮಾಡಿಕೊಂಡಿದ್ದರೂ ಕೂಡ ಸ್ಮಶಾನಕ್ಕೆ ಅಗತ್ಯವಾಗಿರುವ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಅಲ್ಲದೇ ಅದರಲ್ಲಿ ಅಂತ್ಯಕ್ರಿಯೆ ನಡೆಸಬೇಕೆಂದರೆ ಸ್ಮಶಾನದ ತುಂಬೆಲ್ಲ ಮುಳ್ಳು ಕಂಟಿಗಳು ತುಂಬಿವೆ.ಅಲ್ಲದೇ ಆ ಸ್ಥಳ ಕೂಡ ಸವುಳು-ಜವುಳಿನಿಂದ ಕೂಡಿದ್ದರಿಂದ ಮಳೆಗಾಲದಲ್ಲಂತೂ ಎಲ್ಲೆಂದರಲ್ಲಿ ನೀರು ಜಿನುಗುತ್ತದೆ.
ಅಂತ್ಯಕ್ರಿಯೆ ಎಲ್ಲಿ?: ಪಟ್ಟಣದಲ್ಲಿ ಯಾರಾದರೂ ಮೃತರಾದರೆ ಅವರ ಅಂತ್ಯಕ್ರಿಯೆಯನ್ನು ಪಾರ್ವತಿ ಕಟ್ಟೆ ಸೇತುವೆ ಹತ್ತಿರ ಇಲ್ಲವೇ ರಾಕ್ ಉದ್ಯಾನದ ಮುಂಭಾಗದಲ್ಲಿರುವ ಸರ್ಕಾರಿ ಜಾಗೆಯಲ್ಲಿ ನಡೆಸಲಾಗುತ್ತಿದೆ. ಇದರಿಂದ ಪುನರ್ವಸತಿ ಕೇಂದ್ರವಾಗಿರುವ ಆಲಮಟ್ಟಿಗೆ ಸಮರ್ಪಕವಾಗಿ ರುದ್ರಭೂಮಿಯಿಲ್ಲದೇ ಇರುವುದರಿಂದ ಅನಿವಾರ್ಯವಾಗಿ ಹೀಗೆ ಮಾಡಬೇಕಾಗುತ್ತಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿಡಗುಂದಿ ತಾಲೂಕು ಉಪಾಧ್ಯಕ್ಷ ವೆಂಕಟೇಶ ವಡ್ಡರ.
ಆಲಮಟ್ಟಿಯನ್ನು ಸುಮಾರು 1980ರ ದಶಕದಲ್ಲಿ ಅವೈಜ್ಞಾನಿಕ ಪುನರ್ವಸತಿ ಕೇಂದ್ರ ನಿರ್ಮಾಣ ಮಾಡಿದ್ದರ ಪರಿಣಾಮ ಸಂತ್ರಸ್ತರು ಇನ್ನೂವರೆಗೆ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇನ್ನು ಸಂತ್ರಸ್ತರಾದವರು ಮರಣ ಹೊಂದಿದರೆ ಅವರ ಅಂತ್ಯಕ್ರಿಯೆ ನಡೆಸಲೂ ಪ್ರಯಾಸ ಪಡುವಂತಾಗಿದೆ.
ಆಲಮಟ್ಟಿ ಪುನರ್ವಸತಿ ಕೇಂದ್ರಕ್ಕೆ ಸ್ಮಶಾನ ಜಾಗೆ ಬಗ್ಗೆ ಯಾವ ದಾಖಲೆಯಿಲ್ಲ, ನೀರಿನ ವ್ಯವಸ್ಥೆಯಿಲ್ಲ, ವಿದ್ಯುತ್ ವ್ಯವಸ್ಥೆಯಿಲ್ಲ. ಅಲ್ಲದೇ ಎಲ್ಲೆಡೆಯೂ ಮುಳ್ಳು ಕಂಟಿಗಳು ತುಂಬಿದ್ದು ಸವುಳು-ಜವುಳಿನಿಂದ ಕೂಡಿದೆ. ಗ್ರಾಮಸ್ಥರಿಗೆ ಅದನ್ನು ಇನ್ನೂವರೆಗೆ ಪುನರ್ವಸತಿ ಇಲಾಖೆಯವರು ತೋರಿಸಿಲ್ಲ. ಅಲ್ಲದೇ ಅಲ್ಲಿಗೆ ಹೋಗಲು ಸಮರ್ಪಕ ರಸ್ತೆಯೂ ಇಲ್ಲ. ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಅಂತ್ಯಕ್ರಿಯೆ ನಡೆಸಲು ಜಾಗವಿಲ್ಲದಂತಾಗಿದೆ.
-ಶಂಕರ ಜಲ್ಲಿ
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.