ಹಳ್ಳ ದಾಟಲು ಹರಸಾಹಸ
Team Udayavani, Feb 18, 2020, 1:15 PM IST
ಚಡಚಣ: ತಾಲೂಕಿನ ಹಲಸಂಗಿ ಗ್ರಾಮದಿಂದ ನಂದ್ರಾಳವರೆಗಿನ 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ವಾಹನ ಸವಾರರು ತೀವೃ ತೊಂದರೆ ಅನುಭವಿಸುವಂತಾಗಿದೆ.
ಸುಮಾರು ಮೂರು ವರ್ಷಗಳ ಹಿಂದೆ ಕೆಬಿಜಿಎನ್ ಎಲ್ ವತಿಯಿಂದ ಖಡೀಕರಣ ಮಾಡಲಾಗಿತ್ತು. ಆದರೆ ರಸ್ತೆ ದುರಸ್ತಿ ಮಾಡಿದ ಆರು ತಿಂಗಳುಗಳಲ್ಲಿ ಅದು ಕಿತ್ತು ಹೋಗಿ, ದಾರಿ ತುಂಬೆಲ್ಲ ಕಲ್ಲು ಬಂಡೆಗಳು ತುಂಬಿಕೊಂಡಿವೆ. ರಸ್ತೆ ಇಕ್ಕೆಲೆಗಳಲ್ಲಿ ಬೆಳೆದು ನಿಂತ ಜಾಲಿ ಮುಳ್ಳು ಕಂಟಿಗಳು ರಸ್ತೆ ಆವರಸಿರುವುದರಿಂದ ಈ ಮಾರ್ಗದ ಮೂಲಕ ಹಾದು ಹೋಗುವ ವಾಹನ ಸವಾರರು, ಪಾದಚಾರಿಗಳು ರೈತರು ಹಿಡಿಶಾಪ ಹಾಕುವಂತಾಗಿದೆ.
ರಸ್ತೆ ಮಧ್ಯದಲ್ಲಿರುವ ಹಳ್ಳದಲ್ಲಿ ನಿರಂತರ ನೀರು ಹರಿಯುತ್ತದೆ. ಮಳೆಗಾಲ ಬಂತೆಂದರೆ ಸಾಕು, ವಿದ್ಯಾರ್ಥಿಗಳು ಶಾಲೆಗೆ ಬರುವುದೇ ದುಸ್ತರವಾಗಿದೆ. ಹಲಸಂಗಿ ಗ್ರಾಮಕ್ಕೆ ಸೈಕಲ್ ಮೂಲಕ ಬರುವ ಅಡವಿ ವಸ್ತಿ ಹಾಗೂ ನಂದ್ರಾಳ ಗ್ರಾಮದ ಶಾಲಾ ವಿದ್ಯಾರ್ಥಿಗಳು ಶಾಲೆ ತಲುಪವುದೇ ಪಾಲಕರಿಗೆ ದೊಡ್ಡ ಚಿಂತೆಯಾಗಿದೆ. ಈ ರಸ್ತೆ ಡಾಂಬರೀಕರಣ ಮಾಡುವಂತೆ ಸ್ಥಳಿಯ ಗ್ರಾಪಂ ಮತ್ತೆ ಕಳೆದ ಸಾಲಿನಲ್ಲಿ ಸುಮಾರು 3.50 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಿ ಮತ್ತೆ ಕೆಬಿಜಿಎನ್ಎಲ್ ಇಲಾಖೆಗೆ ಕಳುಹಿಸಿಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕುರಿತು ಭಾಗದ ಜನಪ್ರತಿನಿಧಿಗಳು, ಶಾಸಕರಿಗೆ ಮನವಿ ಸಲ್ಲಿಸಿದರೂ ಯರೋಬ್ಬರೂ ಸ್ಪಂದಿಸುತ್ತಿಲ್ಲ ಎಂಬುದು ನಂದ್ರಾಳ ಗ್ರಾಮಸ್ಥರ ಆರೋಪವಾಗಿದೆ.
ಇನ್ನೂ ರಸ್ತೆಗಳ ಸುಧಾರಣೆ ಮಾಡಬೇಕಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗಂತೂ ಈ ರಸ್ತೆ ಎಲ್ಲಿದೆ ಎಂಬುದು ಗೊತ್ತೆ ಇಲ್ಲ ಎಂಬುದು ಪ್ರಜ್ಞಾವಂತರ ಅನಿಸಿಕೆ. ಇನ್ನದರೂ ಈ ರಸ್ತೆ ಸುಧಾರಣೆ ಹಾಗೂ ಡಾಂಬರೀಕರಣಕ್ಕೆ ಸಂಬಂಧಿಸಿದ ಇಲಾಖೆ, ಶಾಸಕರು ಹಾಗೂ ಭಾಗದ ಜನಪ್ರತಿನಿಧಿಗಳು ಗಮನ ಹರಿಸಿ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವರೇ ಎಂಬುದನ್ನು ಕಾದು ನೋಡುತ್ತಿದ್ದಾರೆ ಹಲಸಂಗಿ, ನಂದ್ರಾಳ ಗ್ರಾಮಸ್ಥರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!