ಕಷ್ಟಗಳಿಗೆ ಮಿಡಿಯುವ ಮನಸ್ಸು ಅಗತ್ಯ

ಸಮಾಜದ ನಡುವೆ ಸೇತುವೆಯಾಗಿ ಸಾರ್ಥಕ ಸೇವೆ ಮಾಡುವಲ್ಲಿ ಫೌಂಡೇಶನ್‌ಗೆ ಹೆಚ್ಚೆಚ್ಚು ಬೆಂಬಲ ದೊರೆಯಲಿ

Team Udayavani, Apr 20, 2021, 7:02 PM IST

Manasu

ಮುದ್ದೇಬಿಹಾಳ: ಮಾನವೀಯತೆಯ ನೆರವು ಮನುಷ್ಯನನ್ನು ಎತ್ತರದ ಸ್ಥಾನದಲ್ಲಿ ಕೂಡ್ರಿಸುತ್ತದೆ. ಕಷ್ಟದಲ್ಲಿರುವವರ ಬಗ್ಗೆ ಮಿಡಿಯುವ ಮನಸ್ಸುಗಳು ದೇವರಿಗೆ ಪ್ರಿಯವಾಗಿರುತ್ತವೆ. ಸದಾಚಾರ, ಸತ್ಸಂಪ್ರದಾಯ, ಕಷ್ಟಕ್ಕೆ ಮಿಡಿಯುವ ಮನಸ್ಸು ನಮ್ಮೆಲ್ಲರದ್ದಾಗಬೇಕು. ಇದು ಸಮಾಜ ಕಟ್ಟುವ ಕೆಲಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಚನ್ನವೀರ ದೇವರು ಹೇಳಿದರು.

ಪಟ್ಟಣದ ಬಸ್‌ ನಿಲ್ದಾಣ ಪಕ್ಕದಲ್ಲಿರುವ ಹಳೆ ಸಿಪಿಐ ಕಚೇರಿ ಆವರಣದಲ್ಲಿ ಸೋಮವಾರ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕುಮಾರೇಶ್ವರ ಜೀವನ ವಿಕಾಸ ಫೌಂಡೇಶನ್‌ ಅಡಿ ಬೀದಿ ಬದಿ ವ್ಯಾಪಾರಿಗಳಿಗೆ ಮಾನವೀಯ ನೆರಳು ಯೋಜನೆಯಡಿ ದೊಡ್ಡ ಕೊಡೆ ವಿತರಿಸುವ ಪ್ರಥಮ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಒಳಿತು ಮಾಡು ಮನುಜ ನೀ ಇರೋದು ಮೂರು ದಿವಸಾ ಅನ್ನೋದರ ಮಹತ್ವವನ್ನು ನಾವೆಲ್ಲರೂ ಅರಿತುಕೊಳ್ಳಬೇಕು. ಆತ್ಮನಿರ್ಭರ ಭಾರತಕ್ಕೆ ಬೆಂಬಲಿಸುವ ಮನೋಭಾವ ನಮ್ಮದಾಗಬೇಕು. ದುಡಿಯುವ ಕೈಗಳಿಗೆ ಮಾನವೀಯ ನೆರವು, ಸ್ವಾವಲಂಬಿ ಬದುಕಿಗೆ ಸೇತುವೆಯಾಗಿ ಫೌಂಡೇಶನ್‌ ಕೆಲಸ ಮಾಡಲಿದೆ. ಕಷ್ಟದಲ್ಲಿರುವವರಿಗೆ ನೆರವಾಗುವುದರಲ್ಲಿಯೇ ನಿಜವಾದ ಸಾರ್ಥಕತೆ ಅಡಗಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದರು.

ಜಾತಿ ಮಾಡೋದು ಸ್ವಾಮಿಗಳ ಕಾರ್ಯವಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು, ಎಲ್ಲರನ್ನೂ ಒಂದಡೆ ಕೂಡಿಸುವುದು ಸ್ವಾಮೀಜಿಗಳ, ಮಠಾಧೀಶರ ಕಾರ್ಯವಾಗಿದೆ. ದೇಶ, ಸಮಾಜದ ಚಿಂತನೆ, ಯುವಕರಲ್ಲಿ ಪ್ರೋತ್ಸಾಹ, ದೇಶಪ್ರೇಮ ಬೆಳೆಸುವ, ಪ್ರೇರೇಪಿಸುವ ಕೆಲಸವನ್ನು ಮಠಾಧಿಪತಿಗಳು ಆಯ್ದುಕೊಳ್ಳಬೇಕು. ಪ್ರತಿಯೊಂದಕ್ಕೂ ಸರ್ಕಾರವನ್ನೇ ಅವಲಂಬಿಸುವ, ದೂಷಿಸುವುದನ್ನು ಕೈ ಬಿಟ್ಟು ಸೇತುವೆಯಾಗಿ ಕೆಲಸ ಮಾಡುವುದನ್ನು ಫೌಂಡೇಶನ್‌ ಪಾಲಿಸುತ್ತದೆ. ದಾನಿಗಳು ಫೌಂಡೇಶನ್‌ ಗೆ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಥಳೀಯ ಸಂಸ್ಥೆ ಉಪಾಧ್ಯಕ್ಷ ಡಿ.ಬಿ. ವಡವಡಗಿ ಮಾತನಾಡಿ, ಹಾನಗಲ್ಲ ಕುಮಾರೇಶ್ವರ ಶಿವಯೋಗಿಗಳು ಹಾಕಿಕೊಟ್ಟ ಸತ್ಸಂಪ್ರದಾಯ, ಚನ್ನವೀರ ದೇವರ ಸಮಾಜಮುಖೀ ಕಾರ್ಯ ಮತ್ತು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಫೌಂಡೇಶನ್‌ ಕಾರ್ಯಚಟುವಟಿಕೆಗಳು, ಯೋಜನೆಗಳನ್ನು ವಿವರಿಸಿದರು.

ಸಮಾಜದಲ್ಲಿ ಸಮಾಜೋಪಯೋಗಿ ಕಾರ್ಯಗಳನ್ನು ನಡೆಸುವ ಮೂಲಕ ಎಲ್ಲರಿಗೂ ಪ್ರೇರಣೆ ನೀಡುತ್ತ, ಮಾನವೀಯತೆ ಮಹತ್ವ ಪ್ರಾಯೋಗಿಕವಾಗಿ ತಿಳಿಸಿಕೊಡುತ್ತಿರುವ ಚನ್ನವೀರ ದೇವರ ಕಾರ್ಯ ಸಮಾಕ್ಕೆ ಮಾದರಿಯಾದದ್ದು. ಮುಂಬರುವ ದಿನಗಳಲ್ಲಿ ಫೌಂಡೇಶನ್‌ ರಾಜ್ಯಕ್ಕೆ ಮಾದರಿಯಾಗಲಿ. ಫೌಂಡೇಶನ್‌ನಲ್ಲಿರುವ ಸ್ವಾಮೀಜಿಯವರಾದಿಯಾಗಿ ಎಲ್ಲ ಯುವಕರು ನಿಸ್ವಾರ್ಥಿಗಳಾಗಿ, ಟೀಕೆ ಟಿಪ್ಪಣಿಗಳಿಗೆ ಅತೀತರಾಗಿ ಸಮಾಜೋಪಯೋಗಿ ಕೆಲಸ
ಮಾಡುವಂಥವರಾಗಿದ್ದಾರೆ. ದಾನಿಗಳು, ಸಮಾಜದ ನಡುವೆ ಸೇತುವೆಯಾಗಿ ಸಾರ್ಥಕ ಸೇವೆ ಮಾಡುವಲ್ಲಿ ಫೌಂಡೇಶನ್‌ಗೆ ಹೆಚ್ಚೆಚ್ಚು ಬೆಂಬಲ ದೊರೆಯಲಿ ಎಂದರು.

25,000 ರೂ. ಮೌಲ್ಯದ ಕೊಡೆಗಳನ್ನು ಫೌಂಡೇಶನ್‌ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಕೊಡುಗೆಯಾಗಿ ನೀಡಿದ ಸಮಾಜ ಸೇವಕ ಪ್ರಭುರಾಜ್‌ ಕಲಬುರ್ಗಿ ಅವರನ್ನು ಸನ್ಮಾನಿಸಲಾಯಿತು. ಹಿರಿಯ ಸಮಾಜ ಸೇವಕ ಅಶೋಕ ನಾಡಗೌಡರನ್ನು ಸನ್ಮಾನಿಸಲು ಮುಂದಾದಾಗ ಅದನ್ನು ನಯವಾಗಿಯೇ ನಿರಾಕರಿಸಿ ಪುರಸಭೆ ಹಿರಿಯ ಸದಸ್ಯ ಚನ್ನಪ್ಪ ಕಂಠಿ ಅವರನ್ನು ಸನ್ಮಾನಿಸಿ ಸರಳತೆ ಮೆರೆದರು.

ಬಸವರಾಜ ಸುಕಾಲಿ, ಎಂ.ಜಿ. ಬಿರಾದಾರ (ಬಾಂಬೇಗೌಡ), ಸುರೇಶ ಪಾಟೀಲ, ಮಲ್ಲನಗೌಡ ಬಿರಾದಾರ, ಬಿ.ಟಿ. ಬಿರಾದಾರ, ಸೋಮನಿಂಗಪ್ಪ ಗಸ್ತಿಗಾರ, ಹಡಪದ ಶಿಕ್ಷಕರು, ಸಂಗೀತಾ ನಾಡಗೌಡ ವೇದಿಕೆಯಲ್ಲಿದ್ದರು. ಮಹಾಂತೇಶ ಬೂದಿಹಾಳಮಠ, ಮುತ್ತು ವಡವಡಗಿ, ಬಸವರಾಜ ಬಿರಾದಾರ, ಸೋಮು ಗಸ್ತಿಗಾರ, ಚೇತನ್‌ ಶಿವಸಿಂಪಿ, ವೀರೇಶ ಹಿರೇಮಠ, ಸಂಗಯ್ಯ ಸಾರಂಗಮಠ, ಅಪ್ಪು ಬಿರಾದಾರ, ಹನುಮಂತ ನಲವಡೆ, ರೇಣುಕಾ ಹಳ್ಳೂರ, ಗಿರಿಜಾ ಕಡಿ, ಹರೀಶ ಬೇವೂರ ಇದ್ದರು. ಚೈತನ್ಯ ದಶವಂತ ಸ್ವಾಗತಿಸಿದರು. ಶಿವಕುಮಾರ ಶಾರದಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಗಿರಿಜಾ ಕಡಿ ನಿರೂಪಿಸಿದರು. ಒಟ್ಟು 15 ಬೀದಿ ಬದಿ ವ್ಯಾಪಾರಸ್ಥರಿಗೆ ದೊಡ್ಡ ಕೊಡೆ ವಿತರಿಸಲಾಯಿತು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.