ಬಾಲ್ಯವಿವಾಹ ತಡೆಗಟ್ಟಲು ಶ್ರಮಿಸಿ


Team Udayavani, Feb 11, 2019, 10:38 AM IST

vij-2.jpg

ಸಿಂದಗಿ: ಬಾಲ್ಯವಿವಾಹ ತಡೆಗಟ್ಟಲು ನಾವೆಲ್ಲರೂ ಕಾರ್ಯ ಪ್ರವೃತ್ತರಾಗೋಣ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಭವನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಹಾಗೂ ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016 ಹಾಗೂ ಬಾಲ್ಯವಿವಾಹ ನಿಷೇಧ (ಕರ್ನಾಟಕ) ನಿಯಮಗಳು-2014ರ ಕುರಿತು ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಬಾಲ್ಯವಿವಾಹ ನೆರವೇರಿಸುವುದು, ನಡೆಸುವುದು, ನಿರ್ದೇಶಿಸುವ ಅಥವಾ ಪ್ರೇರೆಪಿಸುವುದು ಅಪರಾಧವಾಗಿದೆ. ಬಾಲ್ಯವಿವಾಹಕ್ಕೆ ಒಳಪಟ್ಟರೆ ಮಗುವಿನ ಹೊಣೆ ಹೊತ್ತಿರುವ ಯಾವುದೇ ವ್ಯಕ್ತಿ, ತಂದೆ-ತಾಯಿಯಾಗಲಿ, ಪೋಷಕರಾಗಲಿ ಅಥವಾ ಯಾವುದೇ ವ್ಯಕ್ತಿಯಾಗಲಿ, ಇತರ ಯಾವುದೇ ಸಾಮರ್ಥ್ಯದಲ್ಲಿ ಕಾನೂನು ಬದ್ಧವಾಗಿಯಾಗಲಿ, ಕಾನೂನಿಗೆ ವಿರುದ್ಧವಾಗಲಿ, ಮಗುವಿನ ಹೊಣೆ ಹೊಂದಿರುವ ಯಾವುದೇ ಸಂಸ್ಥೆಯಾಗಿರಲಿ ಅಥವಾ ಸಂಘಟನೆಯಾಗಿರಲಿ ಬಾಲ್ಯವಿವಾಹಕ್ಕೆ ಉತ್ತೇಜನ ನೀಡುವುದು ಅಪ‌ರಾಧ. ಬಾಲ್ಯವಿವಾಹದಲ್ಲಿ ಭಾಗವಹಿಸುವುದು ಒಳಗೊಂಡಂತೆ ನೆರವೇರುವುದನ್ನು ತಡೆಯಲು ನಿರ್ಲಕ್ಷ್ಯ ತೋರುವವರು ಅಪರಾಧಿಗಳಾಗುತ್ತಾರೆ. ಇಂಥ ಅಪರಾಗಳಿಗೆ 2 ವರ್ಷದವರೆಗೆ ವಿಸ್ತರಿಸಬಹುದಾದ ಕಠಿಣ ಕಾರಾಗೃಹ ಶಿಕ್ಷೆ ಅಥವಾ ಒಂದು ಲಕ್ಷ ರೂ.ವರೆಗೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ ಎಂದು ಹೇಳಿದರು.

ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ -2016ರ ಕಲಂ 15(ಎ) ಪ್ರಕಾರ ಪ್ರತಿಯೊಬ್ಬ ಪೊಲೀಸ್‌ ಅಧಿಕಾರಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಡೆದಲ್ಲಿ ಅಧಿನಿಯಮದಡಿ ತಾವಾಗಿಯೇ ಕ್ರಮ ತೆಗೆದುಕೊಳ್ಳಬೇಕು. ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಸೇರಿದಂತೆ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಬಾಲ್ಯವಿವಾಹ ತಡೆಗಟ್ಟಲು ಕಂಕಣಬದ್ಧರಾಗಿ ನಿಲ್ಲಬೇಕಿದೆ ಎಂದರು.

ಮಕ್ಕಳ ಸಹಾಯವಾಣಿ ಜಿಲ್ಲಾ ಸಂಚಾಲಕಿ ಸುನಂದಾ ತೋಳಬಂದಿ, ತಹಶೀಲ್ದಾರ್‌ ಬಸವರಾಜ ಕಡಕಬಾವಿ, ಸಿಡಿಪಿಒ ಜಿ.ಎಸ್‌. ಗುಣಾರಿ, ಶಿಕ್ಷಣ ಸಂಯೋಜಕ ಆನಂದ ಮಾಡಗಿ ಅವರು ಬಾಲ್ಯವಿವಾಹ ತಡೆಗಟ್ಟುವ ಕುರಿತು ಮಾತನಾಡಿದರು. ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.