Kolhar ಬಳಿ ಕೃಷ್ಣೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ಯುಗಾದಿ ನಿಮಿತ್ತ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಸ್ನಾನಕ್ಕೆ ಆಗಮಿಸಿದ್ದರು...
Team Udayavani, Apr 8, 2024, 7:44 PM IST
ಕೊಲ್ಹಾರ (ವಿಜಯಪುರ): ಯುಗಾಗಿ ಹಬ್ಬದ ನಿಮಿತ್ತ ಗ್ರಾಮದೇವಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಸ್ನಾನಕ್ಕೆ ಆಗಮಿಸಿದ್ದ ಇಬ್ಬರು ಬಾಲಕರು ನದಿಯಲ್ಲಿ ಮೃತಪಟ್ಟಿರುವ ಘಟನೆ ಸೋಮವಾರ ಜರುಗಿದೆ.
ಮೃತಪಟ್ಟವರನ್ನು ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಶ್ರೀಧರ ಶಿವಪ್ಪ ಮಾದರ ಉರ್ಫ್ ದೊಡ್ಡಮನಿ (10), ಯಶಸ್ವಿ ರಾಜು ಮಾದರ(13) ಎಂದು ಗುರುತಿಸಲಾಗಿದೆ. ಬಾಲಕರಿಬ್ಬರು ಸಹೋದರ ಸಂಬಂಧಿಗಳಾಗಿದ್ದು,ಯುಗಾದಿ ಅಮವಾಸ್ಯೆ ನಿಮಿತ್ತ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದಿಂದ ಹೆತ್ತವರೊಂದಿಗೆ ಕೊಲ್ಹಾರ ಬಳಿ ಇರುವ ಕೃಷ್ಣಾ ನದಿಗೆ ಬಂದಿದ್ದರು.
ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ಇಳಿದಾಗ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಧ್ಯಾಹ್ನ ಬಾಲಕರಿಬ್ಬರ ಶವಗಳು ಪತ್ತೆಯಾಗಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ