ಮುದ್ದೇಬಿಹಾಳ: ಕಾಲುವೆಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಜಲ ಸಮಾಧಿ
Team Udayavani, Feb 2, 2023, 11:58 AM IST
ವಿಜಯಪುರ: ಬಟ್ಟೆ ತೊಳೆಯಲು ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಹೋಗಿದ್ದಾಗ ಓರ್ವ ಬಾಲಕ ಸೇರಿ ಇಬ್ಬರು ಜಲ ಸಮಾಧಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.
ಮೃತರನ್ನು ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ರಸೂಲ್ ಮಾಲದಾರ (26) ಹಾಗೂ ಸಮೀವುಲ್ಲಾ ಗೊಳಸಂಗಿ (10) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:‘ವಿದ್ಯಾರ್ಥಿ ಭವನ್’ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಮುದ್ದೇಬಿಹಾಳ ಪಟ್ಟಣದಲ್ಲಿ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ಗುರುವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಪಟ್ಟಣದ ಹೊರವಲಯದಲ್ಲಿರುವ ಹಡಲಗೇರಿ ಬಳಿಯ ನಾಲೆಗೆ ಹೋಗಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಸದರಿ ನಾಲೆ ತುಂಬಿ ಹರಿಯುತ್ತಿದ್ದು, ಬಟ್ಟೆ ತೊಳೆಯಲು ಇಬ್ಬರೂ ನಾಲೆಗೆ ಇಳಿದಾಗ ಕೊಚ್ಚಿಕೊಂಡು ಹೋಗಿದ್ದಾರೆ.
ಸುದ್ದಿ ತಿಳಿದು ಅಗ್ನಿಶಾಮಕ ಸೇವೆಯ ಸಿಬ್ಬಂದಿ ಜೊತೆ ಸ್ಥಳಕ್ಕೆ ಧಾವಿಸಿದ ಮುದ್ದೇಬಿಹಾಳ ಪೊಲೀಸರು ಶವಗಳನ್ನು ಹೊರ ತೆಗೆಯುವ ಕೆಲಸದಲ್ಲಿ ತೊಡಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ
ಉರಿಗೌಡ-ನಂಜೇಗೌಡ ವಿಷಯ ರಾಜಕೀಯ ಲಾಭಕ್ಕೆ ಸಲ್ಲದು: ಸಿಎಂ ಬೊಮ್ಮಾಯಿ
ಯುಗಾದಿ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಂ.ಬಿ.ಪಾಟೀಲ
ಮೇಲ್ಮನೆ ವಿಪಕ್ಷದ ಸಚೇತಕ ರಾಠೋಡಗೆ ಮಾತೃವಿಯೋಗ
ಅಕಾಲಿಕ ಮಳೆಗೆ ಕೊಳೆಯುತ್ತಿದೆ ದ್ರಾಕ್ಷಿ ಬೆಳೆ; ವಿಜಯಪುರ ಜಿಲ್ಲೆ ಅನ್ನದಾತರು ಕಂಗಾಲು
MUST WATCH
ಹೊಸ ಸೇರ್ಪಡೆ
ಸ್ಟಾರ್ಟ್ಅಪ್ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು
ಆನ್ಲೈನ್ ನಲ್ಲಿ ವಿದ್ಯುತ್ ಬಿಲ್ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ
ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ
ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ
ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ