ಪಡಿತರ ವಿತರಣೆಗೆ ಅಗತ್ಯದಷ್ಟು ಜೋಳ, ರಾಗಿ ಸಿಗುತ್ತಿಲ್ಲ : ಸಚಿವ ಕತ್ತಿ
Team Udayavani, Jan 26, 2022, 7:12 PM IST
ವಿಜಯಪುರ : ರಾಜ್ಯದಲ್ಲಿ ಪಡಿತರದ ಮೂಲಕ ನ್ಯಾಯಬೆಲೆ ಅಂಗಡಿಯಲ್ಲಿ ಉಪ್ಪಿನಕಾಯಿ ವಿತರಣೆ ಅಸಾಧ್ಯ. ಆದರೆ ಜೋಳ-ರಾಗಿ ವಿತರಣೆಗೆ ಸರ್ಕಾರ ನಿರ್ಧರಿಸಿದ್ದರೂ ಅಗತ್ಯದಷ್ಟು ಉತ್ಪಾದನೆ ಇಲ್ಲವಾಗಿದೆ. ಭವಿಷ್ಯದಲ್ಲಿ ಮಾಲ್ದಂಡಿ ಜೋಳಕ್ಕೆ ಹೆಚ್ಚಿನ ಬೆಂಬಲ ಬೆಲೆ ನೀಡಿ ಖರೀದಿಸಿ ಜೋಳದ ಉತ್ಪಾದನೆಗೆ ಪ್ರೋತ್ಸಾಹ ನೀಡಲು ಸರ್ಕಾರ ಯೋಜಿಸಿದೆ ಎಂದು ಆಹಾರ-ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪಡಿತರ ವ್ಯವಸ್ಥೆಯಲ್ಲಿ ಅಕ್ಕಿಯ ಜೊತೆ ಜೋಳ ಹಾಗೂ ರಾಗಿ ವಿತರಿಸುವ ಯೋಜನೆ ರೂಪಿಸಲಾಗಿತ್ತು. ಆದರೆ ರಾಜ್ಯದಲ್ಲಿ ಪಡಿತರ ವಿತರಣೆಗೆ ಅಗತ್ಯವಾಗಿರುವ ಜೋಳ ಹಾಗೂ ರಾಗಿ ತಲಾ 6.50 ಲಕ್ಷ ಟನ್ ಬೇಡಿಕೆಯಲ್ಲಿ ಕೇವಲ 70 ಸಾವಿರ ಟನ್ ಜೋಳ ಹಾಗೂ 2 ಲಕ್ಷ ಟನ್ ರಾಗಿ ಉತ್ಪನ್ನ ಲಭ್ಯವಾಗಿದೆ ಎಂದರು.
ಅಗತ್ಯಕ್ಕಿಂತ ಕಡಿಮೆ ಉತ್ಪಾದನೆ ಇರುವ ಕಾರಣಕ್ಕೆ ಭವಿಷ್ಯದಲ್ಲಿ ಜೋಳದ ಬೆಳೆ ಪ್ರಮಾಣ ಹೆಚ್ಚಿಸಲು ಮಾಲ್ದಂಡಿ ಜೋಳಕ್ಕೆ ಹೆಚ್ಚಿನ ಬೆಂಬಲ ಬೆಲೆ ನಿಗದಿ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುತ್ತದೆ. ಆ ಮೂಲಕ ಜೋಳ ಬೆಳೆಯುವ ಪ್ರದೇಶ ಹೆಚ್ಚಿಸಿ ಅಗತ್ಯಕ್ಕೆ ತಕ್ಕಷ್ಟು ಉತ್ಪಾದನೆಗೆ ಯೋಜಿಸಿದ್ದೇವೆ ಎಂದರು.
ವಿಜಯಪುರ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಿಂಬೆ ಬೆಳೆಯಲಾಗುತ್ತದೆ. ಮೌಲ್ಯವರ್ಧನೆ ಮೂಲಕ ಪಡಿತರದ ಮೂಲಕ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರದ ಜೊತೆ ಲಿಂಬೆ ಉಪ್ಪಿನಕಾಯಿ ವಿತರಣೆ ಅಸಾಧ್ಯ. ಆದರೆ ಶಿಕ್ಷಣ ಇಲಾಖೆ ಜೊತೆ ಮಾತನಾಡಿ ಶಾಲೆಗಳಲ್ಲಿ ಬಿಸಿಯೂಟದೊಂದಿಗೆ ಲಿಂಬೆ ಉಪ್ಪಿನಕಾಯಿ ವಿತರಣೆಗೆ ಯೋಚಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ