ಅಂಬೇಡ್ಕರ್ ಪಂಚಲೋಹದ ಪ್ರತಿಮೆ ಅನಾವರಣ
ಸಂಘಪಾಲ ಬಂತೇಜಿ, ರಾಂಪೂರ ಆರೂಢ ಮಠದ ನಿತ್ಯಾನಂದ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು.
Team Udayavani, Apr 15, 2021, 6:23 PM IST
ಸಿಂದಗಿ: ಡಾ| ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನಬದ್ಧ ಹಕ್ಕು, ಮೀಸಲಾತಿ, ಸಮಾಜದಲ್ಲಿ ಅಸ್ಪೃಶ್ಯತೆ ಎಲ್ಲಿಯವರೆಗೆ ಜೀವಂತವಾಗಿರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಬೇಕೇ ಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು. ರಾಂಪೂರ ಪಿ.ಎ. ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ಸಿಂದಗಿ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳು ಸೇರಿ ಡಾ| ಬಿ.ಆರ್. ಅಂಬೇಡ್ಕರ್ರವರ ಪಂಚಲೋಹದ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ವೈ.ಸಿ. ಮಯೂರ ಮಾತನಾಡಿದರು. ಸಂಘಪಾಲ ಬಂತೇಜಿ, ರಾಂಪೂರ ಆರೂಢ ಮಠದ ನಿತ್ಯಾನಂದ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು.
ಜಿ ಶಾಸಕ ರಮೇಶ ಭೂಸನೂರ, ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಮಾತನಾಡಿ, ತಾಲೂಕಿನ ರಾಂಪೂರ ಪಿ.ಎ. ಗ್ರಾಮದಲ್ಲಿ ಡಾ| ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದು ಶ್ಲಾಘನೀಯ ಎಂದರು. ಜಿಪಂ ಸದಸ್ಯ ಬಿ.ಆರ್. ಸಿಸ್ಟರ್ ಅನಿತಾ ಡಿಸೋಜಾ, ಡಾ| ದಸ್ತಗೀರ ಮುಲ್ಲಾ, ಶಿವಾಜಿ ಮೆಟಗಾರ ಮಾತನಾಡಿದರು.
ಈ ವೇಳೆ ಮೈಬೂಬಸಾಬ್ ತಾಂಬೋಳಿ, ಜಿಪಂ ಮಾಜಿ ಉಪಾಧ್ಯಕ್ಷ ಸಿದ್ದರಾಮ ಪಾಟೀಲ, ವಿನಾಯಕ ಗುಣಸಾಗರ, ಶರಣು ಶಿಂಧೆ, ಅಶೋಕ ಚಲವಾದಿ, ಆರ್.ಎಂ. ಚೌರ, ಮಂಜು ಯಂಟಮಾನ, ಚಂದ್ರಕಾಂತ ಸಿಂಗೆ, ಸೋಮು ಮೇಲಿನಮನಿ, ಪ್ರಕಾಶ ಗುಡಿಮನಿ, ಶ್ರೀಕಾಂತ ಸೋಮಜಾಳ, ನೀಲಕಂಠ ಹೊಸಮನಿ, ಶರಣು ಚಲವಾದಿ, ಸೈಬಣ್ಣ ದೊಡಮನಿ, ಜೈಭೀಮ ತಳಕೇರಿ, ಸುನಂದಾ ಯಂಪೂರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ