ಬಳಸಿ ಎಸೆದ ಪಿಪಿಇ ಕಿಟ್-ಮಾಸ್ಕ್ ಧರಿಸಿ ಹುಚ್ಚಾಟ
Team Udayavani, Jul 13, 2020, 2:43 PM IST
ವಿಜಯಪುರ: ಸ್ಮಶಾನದಲ್ಲಿ ಸೋಂಕಿತರ ಶವ ಸಂಸ್ಕಾರದ ಬಳಸಿ ಎಸೆದಿದ್ದ ಪಿಪಿಇ ಕಿಟ್, ಫೇಸ್ ಶೀಲ್ಡ್, ಮಾಸ್ಕ್ ಧರಿಸಿದ ಮಾನಸಿಕ ಅಸ್ವಸ್ಥನೊಬ್ಬ ಹುಚ್ಚಾಟ ನಡೆಸಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸಿಬ್ಬಂದಿ ಪಿಪಿಇ ಕಿಟ್ಗಳನ್ನು ಸುಟ್ಟು ಹಾಕಿದ ಘಟನೆ ಜರುಗಿದೆ.
ನಗರದ ಮನಗೂಳಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸಂದರ್ಭದಲ್ಲಿ ಬಳಸುವ ಪಿಪಿಇ ಕಿಟ್ ಬಳಸಿ ಎಸೆಯಲಾಗಿತ್ತು. ಇದನ್ನು ನೋಡಿದ ಮಾನಸಿಕ ಅಸ್ವಸ್ಥನೊಬ್ಬ ಅದನ್ನು ಧರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ. ಮನಗೂಳಿ ರಸ್ತೆಗೆ ಹೊಂದಿಕೊಂಡ ಪುಲಕೇಶಿ ನಗರ, ಕೀರ್ತಿ ನಗರ, ಕೆ.ಕೆ.ನಗರ, ಕನಕದಾಸ ಬಡಾವಣೆಗಳಲ್ಲಿ ಓಡಾಡಿಕೊಂಡಿದ್ದರಿಂದ ನಿವಾಸಿಗಳು ಕಂಗಾಲಾಗಿದ್ದರು. ಮಾನಸಿಕ ಅಸ್ವಸ್ಥನ ಈ ಹುಚ್ಚಾಟದ ಮಾಹಿತಿ ದೊರೆಯುತ್ತಲೇ ಪೌರ ಕಾರ್ಮಿಕರೊಂದಿಗೆ ಸ್ಥಳಕ್ಕಾಗಮಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ ಹುಚ್ಚಾಟ ನಡೆಸಿದ್ದವನಿಂದ ಪಿಪಿಇ ಕಿಟ್ ಕಿತ್ತುಕೊಂಡು ಸುಟ್ಟು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್