Vijayapura; ವಾಗ್ದೇವಿ ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸಿದ ಸಿಎಂ ಸಿದ್ಧರಾಮಯ್ಯ

ಸಿದ್ದು ಸ್ಪರ್ಶಿಸಿದ ಪುಷ್ಪಮಾಲೆ ವಾಗ್ದೇವಿಗೆ ಸಮರ್ಪಿಸಿದ ಸಚಿವ ಪಾಟೀಲ

Team Udayavani, Jan 2, 2024, 8:06 PM IST

Vijayapura; ವಾಗ್ದೇವಿ ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸಿದ ಸಿಎಂ ಸಿದ್ಧರಾಮಯ್ಯ

ವಿಜಯಪುರ : ಪುನರುಜ್ಜೀವನಗೊಂಡಿದ್ದ ದೇವಸ್ಥಾನದ ಲೋಕಾರ್ಪಣೆಗೆ ಬಂದಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ದೇವಸ್ಥಾನ ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸಿರುವ ಘಟನೆ ಜರುಗಿದೆ.

ಮಂಗಳವಾರ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದ ಶ್ರೀವಾಗ್ದೇವಿ ಸೇವಾ ಸಮಿತಿ ಪುರುಜ್ಜೀವನಗೊಂಡ ವಾಗ್ದೇವಿ ದೇವಸ್ಥಾನದ ನೂತನ ಕಟ್ಟಡ ಲೋಕಾರ್ಪಣೆ, ದೇವಿ ಪ್ರಾಣಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಗಮಿಸಿದ್ದಾಗ ಈ ಘಟನೆ ಜರುಗಿದೆ.

ವಿಜಯಪುರ ನಗರದ ಜ್ಞಾನ ಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ ಗುರುನಮನ ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ದ್ಯಾಬೇರಿ ವಾಗ್ದೇವಿ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು. ದೇವಸ್ಥಾನದ ಭೇಟಿಗೆ ಮುನ್ನ ಗ್ರಾಮದಲ್ಲಿ ನೀರು ತುಂಬಿಸುವ ಯೋಜನೆಯಲ್ಲಿ ಭರ್ತಿಯಾಗಿರುವ ಕೆರೆಗೆ ಬಾಗಿನ ಅರ್ಪಿಸಿದರು. ಬಳಿಕ ಶ್ರೀ ವಾಗ್ದೇವಿ ದೇವಸ್ಥಾನಕ್ಕೆ ತೆರಳಿದ್ದರು.

ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದಾಗ ವಾಗ್ದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗಾಗಿ ಮೂರ್ತಿಗೆ ಹೂಮಾಲೆ ಅರ್ಪಿಸುವಂತೆ ಅರ್ಚಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸಿದರು. ಪಕ್ಕದಲ್ಲಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಕೂಡ ಆಗ್ರಹಿಸಿದರು. ಆದರೂ ಗರ್ಭ ಗುಡಿ ಪ್ರವೇಶಕ್ಕೆ ಕೈ ಸನ್ನೆಯಿಂದಲೇ ನಿರಾಕರಿಸಿದ ಸಿದ್ಧರಾಮಯ್ಯ, ಗರ್ಭಗುಡಿ ಬಾಗಿಲಲ್ಲೇ ನಿಂತು ಕೈಮುಗಿದರು.

ಆಗಲೂ ಅರ್ಚಕರು, ಗ್ರಾಮಸ್ಥರು ಗರ್ಭಗುಡಿ ಒಳಗೆ ಪ್ರವೇಶಿಸಿ, ಪುಷ್ಪ ಮಾಲೆ ಸಮರ್ಪಿಸಲು ಆಗ್ರಹಿಸಿದಾಗ ಪಕ್ಕದಲ್ಲಿದ್ದ ಸಚಿವ ಎಂ.ಬಿ.ಪಾಟೀಲ ಅವರನ್ನು ನೀನು ಹೋಗು ಎಂದು ಗರ್ಭಗುಡಿ ಒಳಗೆ ಕಳಿಸಿದರು. ಗರ್ಭಗುಡಿ ಪ್ರವೇಶಿಸಿದ ಸಚಿವ ಪಾಟೀಲ, ಅರ್ಚಕರಿಂದ ಪಡೆದ ಹೂಮಾಲೆಯನ್ನು ಸಿದ್ಧರಾಮಯ್ಯ ಅವರಿಂದ ಸ್ಪರ್ಶ ಮಾಡಿಸಿ ತಂದು ಮುಖ್ಯಮಂತ್ರಿಗಳ ಪರವಾಗಿ ವಾಗ್ದೇವಿಗೆ ಸಮರ್ಪಿಸಿದರು.

ಬಳಿಕ ವಾಗ್ದೇವಿ ದೇವಸ್ಥಾನದ ಅರ್ಚಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಸನ್ಮಾನಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ, ವಾಗ್ದೇವಿ ನಾಡಿನ ಎಲ್ಲ ಜನರಿಗೆ ಒಳಿತು ಮಾಡಿಲಿ. ಮುಂದಿನ ಮುಂಗಾರು ಹಂಗಾಮಿನಲ್ಲಿ ಮಳೆ ಉತ್ತಮವಾಗಿ ಒಳ್ಳೆಯ ಬೆಳೆ ಬರಲಿ. ಎಲ್ಲರೂ ಖುಷಿಯಿಂದ ಜೀವನ ನಡೆಸುವ ಕುರಿತು ವಾಗ್ದೇವಿ ಕರುಣಿಸಲಿ. ಸಮಯದ ಅಭಾವದ ಕಾರಣದಿಂದ ಸ್ವಲ್ಪ ಸಮಯ ಮಾತ್ರ ನಾನು ಮಾತನಾಡುತ್ತೇನೆ ಎಂದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.