ವಾಜಪೇಯಿ ದೇಶಕಂಡ ಅಪ್ರತಿಮ ಪ್ರಧಾನಿ


Team Udayavani, Dec 26, 2017, 11:46 AM IST

vajpayee-2_650_070814093501.jpg

ತಾಳಿಕೋಟೆ: ಚಿಕ್ಕಂದಿನಿಂದ ಹೋರಾಟಗಳ ಮೂಲಕ ಸಂಘಟನೆ ಮಾಡಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಂತಹ ದೇಶ ಕಂಡ ಅಪ್ರತಿಮ ಪ್ರಧಾನಿಯಾಗಿದ್ದಾರೆ ಅಟಲ್‌ಬಿಹಾರಿ ವಾಜಪೇಯಿ ಎಂದು ಭಾರತೀಯ ಜನತಾ ಪಕ್ಷದ ದೇವರಹಿಪ್ಪರಗಿ ಮಂಡಲದ ಉಪಾಧ್ಯಕ್ಷ ಹನುಮಂತ್ರಾಯ ಢವಳಗಿ ಹೇಳಿದರು.

ಸೋಮವಾರ ಪಟ್ಟಣದ ಕವೀ ಫೌಂಡೇಶನ್‌ ಆಯೋಜಿಸಿದ್ದ ಅಟಲ್‌ಬಿಹಾರಿ ವಾಜಪೇಯಿ ಅವರ 93ನೇ ಜನ್ಮದಿನ ಕಾರ್ಯಕ್ರಮದಲ್ಲಿ ಭಾರತಾಂಭೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಬಡವರು, ದೀನ ದಲಿತರ ಕಲ್ಯಾಣಕ್ಕಾಗಿ ವಾಜಪೇಯಿ ಶ್ರಮಿಸಿದ್ದಾರೆ. ಅವರು ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ದೇಶದ ಮೂಲೆ ಮೂಲೆಗಳಲ್ಲಿದ್ದ ಎಲ್ಲ ಗ್ರಾಮಗಳಿಗೆ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮೂಲಕ ರಸ್ತೆ ಸಂಪರ್ಕ ಕಲ್ಪಿಸಿ ಅಭಿವೃದ್ಧಿಯ ದಾರಿ ತೋರಿಸಿಕೊಟ್ಟಿದ್ದಾರೆ.

ಅವರ ಆಡಳಿತಾವಧಿಯಲ್ಲಿ ನಿರ್ಮಾಣಗೊಂಡ ರಸ್ತೆಗಳು ಇನ್ನೂ ಅಜರಾಮರವಾಗಿವೆ. ದೇಶ ಕಂಡ ಪ್ರಧಾನಿಗಳಲ್ಲಿ ಅತ್ಯತಂತ ಶ್ರೇಷ್ಠ ಪ್ರಧಾನಿ ವಾಜಪೇಯಿ. ಸದ್ಯ ನರೇಂದ್ರ ಮೋದಿ ಆಡಳಿತ ನಡೆಸುತ್ತಿದ್ದು ಇಡಿ ವಿಶ್ವವೇ ಭಾರತದೆಡೆಗೆ
ನೋಡುವಂತೆ ಮಾಡುತ್ತಿದ್ದು ವಾಜಪೇಯಿ ಮಾರ್ಗದಲ್ಲಿ ಸಾಗುತ್ತಿದ್ದಾರೆ ಎಂದರು. 

ಅಧ್ಯಕ್ಷತೆ ವಹಿಸಿ ಕವೀ ಫೌಂಡೇಶನ್‌ ಸಂಸ್ಥಾಪಕ ನಿರ್ದೇಶಕ ವೀರೇಶ ಕೋರಿ ಮಾತನಾಡಿ, ಬಡಜನರ ಆಶಾಕಿರಣರಾಗಿ ಹೊರಹೊಮ್ಮಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದುಕೊಂಡ ವಾಜಪೇಯಿ ಸಾಧನೆ ಅನನ್ಯವಾಗಿದೆ ಎಂದು ಬಣ್ಣಿಸಿದರು. 

ಮುಖಂಡರಾದ ರಾಮನಗೌಡ ಕರಕಳ್ಳಿ, ವಿಠ್ಠಲ ಗಾಯಕವಾಡ, ರಮೇಶ ಪಾಟೀಲ, ಕಾಶೀನಾಥ ಅರಳಿಚಂಡಿ, ಬಸವರಾಜ ಕೋರಿ, ಮಲಕನಗೌಡ ಪಾಟೀಲ, ಶಿವನಗೌಡ ಉಕ್ಕಲಿ, ಸಿದ್ದು ಬಿರಾದಾರ, ನಾಗೇಶ ಭಜಂತ್ರಿ, ಸುರೇಶ ಪಾಟೀಲ, ಕುಮಾರ ಪಾಟೀಲ, ಆನಂದ ಮೇಟಿ, ಪುಂಡಲಿಂಗ ಬಿರಾದಾರ, ಸೋಮು ಹಿರೇಮಠ, ಕಾಶೀನಾಥ ಅರಳಿಚಂಡಿ ಇದ್ದರು. 

ಅಟಲ್‌ ಜನ್ಮದಿನಾಚರಣೆ 
ಮುದ್ದೇಬಿಹಾಳ: ಇಲ್ಲಿನ ಬಸ್‌ ನಿಲ್ದಾಣದಲ್ಲಿ ಸ್ವತ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ 93ನೇ ಜನ್ಮದಿನವನ್ನು ಬಿಜೆಪಿ ಯುವ ಘಟಕದ ನೇತೃತ್ವದಲ್ಲಿ ಸೋಮವಾರ ಆಚರಿಸಲಾಯಿತು. ಬಿಜೆಪಿಯ ಎಲ್ಲ ಮುಖಂಡರು, ಯುವ ಘಟಕದ ಕಾರ್ಯಕರ್ತರು ಭಾಗವಹಿಸಿ ನಿಲ್ದಾಣದಲ್ಲಿನ ಕಸ ಗೂಡಿಸುವ ಮೂಲಕ ಸ್ವತ್ಛಗೊಳಿಸಿದರು. ಈ ವೇಳೆ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಂಗಳಾದೇವಿ ಬಿರಾದಾರ ಅವರು ಅಟಲ್‌ಬಿಹಾರಿ ವಾಜಪೇಯಿ ಅವರ ಸರಳ, ನಿಗರ್ವಿ ಜೀವನ ಮತ್ತು ಅವರು ಪ್ರಧಾನಿಯಾಗಿದ್ದಾಗ ಜನಮಾನಸದಲ್ಲಿ ಸದಾ ಉಳಿಯುವ ಉತ್ತಮ ಆಡಳಿತ ನೀಡಿದ್ದರ ಕುರಿತು ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್‌.ಎಸ್‌.ಪಾಟೀಲ ಕೂಚಬಾಳ, ಮುದ್ದೇಬಿಹಾಳ ಮಂಡಲ ಅಧ್ಯಕ್ಷ ವಕೀಲ ಎಂ.ಡಿ. ಕುಂಬಾರ, ತಾಪಂ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ, ಶಾಂತಗೌಡ ಬಿರಾದಾರ, ಪ್ರಭು ಕಡಿ, ಬಿ.ಪಿ. ಕುಲಕರ್ಣಿ, ಪರಶುರಾಮ ಪವಾರ, ಕಾಶೀಬಾಯಿ ರಾಂಪುರ, ಅರವಿಂದ ಕಾಶಿನಕುಂಟಿ, ಸಿದ್ದು ಹೆಬ್ಟಾಳ, ಶೇಖರ ಢವಳಗಿ, ಜಗದೀಶ ಪಂಪಣ್ಣವರ, ರಾಜಶೇಖರ ಹೊಳಿ, ಬಸವರಾಜ ಗುಳಬಾಳ, ನಾಗಪ್ಪ ರೂಢಗಿ, ಬಿ.ಜಿ. ಜಗ್ಗಲ್‌, ರಫೀಕ್‌ ಕುಂಟೋಜಿ, ಮುತ್ತು ಪಾಟೀಲ ಇದ್ದರು.

ಬಿಜೆಪಿ ಕಾರ್ಯಾಲಯ: ಸ್ಥಳೀಯ ಬಿಜೆಪಿ ಕಾರ್ಯಾಲಯದಲ್ಲಿ ವಾಜಪೇಯಿ ಜನ್ಮದಿನ ಆಚರಿಸಲಾಯಿತು. ವಾಜಪೇಯಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ಬಿಜೆಪಿ ಮುಖಂಡರಾದ ಪ್ರಭು ಕಡಿ, ಬಿ.ಪಿ. ಕುಲಕರ್ಣಿ, ಪರಶುರಾಮ ಪವಾರ ಮಾತನಾಡಿ ವಾಜಪೇಯಿ ಅವರ ಒಡನಾಟ, ಸರಳತೆ ಸ್ಮರಿಸಿದರು. ಮುಖಂಡರಾದ ಮಂಗಳಾದೇವಿ ಬಿರಾದಾರ, ಬಾಬುಲಾಲ ಓಸ್ವಾಲ್‌, ಎಂ.ಎಸ್‌. ಪಾಟೀಲ, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.

ಅಟಲ್‌ಜೀ ಮಹಾನ್‌ ನಾಯಕ
ಚಡಚಣ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ಬಿಹಾರಿ ವಾಜಪೇಯಿ ದೇಶ ಕಂಡ ಅಪರೂಪದ ಮಹಾನ್‌ ನಾಯಕ
ಎಂದು ಬಿಜೆಪಿ ಮುಖಂಡ ನಾಗೇಂದ್ರ ಮಾಯವಂಶಿ ಹೇಳಿದರು.  ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ಘೋಷಿತ ತಾಲೂಕು ಹೋರಾಟ ಸಮಿತಿಯ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ 93ನೇಯ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಮುಖಂಡ ಗಂಗಾಧರ ಪಾವಲೆ, ನ್ಯಾಯವಾದಿ ಅಶೋಕ ಕುಲಕರ್ಣಿ ಮಾತನಾಡಿ, ಅಟಲಜೀ ಅವರ ದೂರದೃಷ್ಟಿ ಪರಿಣಾಮ ದೇಶ ಇಂದು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಅವರೊಬ್ಬ ಅಪರೂಪದ ರಾಜಕೀಯ ನಾಯಕರಾಗಿದ್ದಾರೆ ಎಂದರು.

ಜಿಪಂ ಸದಸ್ಯ ಭೀಮಾಶಂಕರ ಬಿರಾದಾರ, ನಾಗಠಾಣ ಮಂಡಲ ಬಿಜೆಪಿ ಅಧ್ಯಕ್ಷ ಕಲ್ಲು ಉಟಗಿ, ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ನಿರಾಳೆ, ತಾಲೂಕು ಹೋರಾಟ ಸಮೀತಿ ಅಧ್ಯಕ್ಷ ಪ್ರಭಾಕರ ನಿರಾಳೆ, ಮುಖಂಡರಾದ ರಾಮ ಅವಟಿ, ಮಹಾದೇವ ಯಂಕಂಚಿ, ರಾಮಚಂದ್ರ ಬಡಿಗೇರ, ಸಂಗಮೇಶ ಮುಂಡೋಡಗಿ, ಪ್ರಕಾಶಗೌಡ ಪಾಟೀಲ, ರಾಜು ಕ್ಷತ್ರಿ, ಪ್ರಮೋದ ಮಠ, ಮಲ್ಲು ಉಮರಾಣಿ,
ಬಸವರಾಜ ಭಮಶೆಟ್ಟಿ, ಚೇತನ ನಿರಾಳೆ, ಚೇತನ ಮಠ, ರಾಹುಲ್‌ ಬನಪಟ್ಟಿ, ರಾಹುಲ್‌ ಲೋಖಂಡೆ, ಅನಿಲ ಸಾಳುಂಕೆ ಇದ್ದರು. 

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.