ವರುಣನ ಅವಕೃಪೆಗೆ ರೈತ ಕಂಗಾಲು


Team Udayavani, Oct 22, 2018, 12:41 PM IST

vij-3.jpg

ಇಂಡಿ: ಒಂದೆಡೆ ಕೈ ಕೊಟ್ಟ ಮುಂಗಾರು ಮಳೆ, ಮತ್ತೂಂದೆಡೆ ಕೈ ಗೆಟುಕದ ಕಾಲುವೆ ನೀರು. ಇಂಥದರ ನಡುವೆ ಕೆಲವೆಡೆ ಸುರಿದ ಅಲ್ಪ-ಸ್ವಲ್ಪ ಮಳೆಯಲ್ಲೆ ಬಿತ್ತಿದ ಬಡ ರೈತರ ಬೆಳೆ ಬೆಳೆದು ಇನ್ನೇನು ಹೂ ಕಟ್ಟುವ ಹಂತಕ್ಕೆ ತಲುಪಿದ್ದು ಆದರೆ ಈ ಬೆಳೆ ಈಗ ನೀರಿನ ಕೊರತೆಯಿಂದ ತತ್ತರಿಸಿದ್ದು ಅನ್ನದಾತ ಅಕ್ಷರಶಃ ಕಂಗಾಲಾಗಿದ್ದಾನೆ.

ತಾಲೂಕಿನ ತೊಗರಿ ಬೆಳೆಗಾರರು ಈಗ ಭಾರಿ ಪ್ರಮಾಣ ನೀರಿನ ಕೊರತೆಯಿಂದ ಬಾಡುತ್ತಿರುವ ತಮ್ಮ ಜಮೀನಿನಲ್ಲಿನ ತೊಗರಿ ಬೆಳೆಯನ್ನು ರಕ್ಷಿಸಿಕೊಳ್ಳಲು ಹರಸಾಹಸ ನಡೆಸಿದ್ದಾರೆ.  ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆ ಆಶ್ರಿತ ಕೆಲ ರೈತರು ಸಾಲ-ಸೂಲ ಮಾಡಿ ಗೊಬ್ಬರ ತೊಗರಿ ಬೀಜ ಖರೀದಿಸಿ ಬಿತ್ತನೆ ಮಾಡಿದ್ದಾರೆ. ಈ ಬೆಳೆ ಈಗ ಕೆಲವೆಡೆ ಹೂ ಕಟ್ಟುವ ಹಂತ ತಲುಪಿದರೆ, ಮತ್ತೆ ಕೆಲವೆಡೆ ಹೂ ಕಟ್ಟುವ ಮುನ್ನವೆ ತೇವಾಂಶದ ಕೊರತೆಯಿಂದಾಗಿ ಗಿಡದ ಎಲೆ ಉದುರುತ್ತಿರುವ ನೋಟ ಕಂಡು ಬಂದಿದ್ದು, ಮಳೆ ನಿರೀಕ್ಷೆಯಲ್ಲಿಯೇ ರೈತರು ದಿನ ದೂಡುತ್ತಿದ್ದಾರೆ.

ಈ ಬಾರಿ ಉತ್ತಮ ಲಾಭದ ನಿರೀಕ್ಷೆಯಿಂದ ರೈತರು ಪಿಂಕ್‌, ಗುಳಾಳ ತಳಿಯ ತೊಗರಿ ಧಾನ್ಯ ಬಿತ್ತನೆ ಮಾಡಿದ್ದಾರೆ. ಆದರೆ ಮೊಳಕಾಲುದ್ದ ಬೆಳೆದ ತೊಗರಿ ಬೆಳೆ ನಿತ್ಯದ ಬೇಸಿಗೆಯಂತಹ ಬಿರು ಬಿಸಿಲಿನ ಶಾಖಕ್ಕೆ ಮಮ್ಮಲ ಮರುಗುತ್ತಿದೆ. ಅತ್ತ ಭೂಮಿಯಲ್ಲೂ ತೇವಾಂಶವಿಲ್ಲದೆ ಒಣಗುತ್ತಿದೆ. 

ಕಾಲುವೆ ನೀರನ್ನಾದರೂ ಬಳಸಿ ಬಂಗಾರದಂತಹ ಬೆಳೆ ಉಳಿಸಿಕೊಳ್ಳಬೇಕು ಎಂದರೆ ಆ ನೀರು ಕಳೆದ ತಿಂಗಳಿನಿಂದ ಸಿಗುತ್ತಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಲಮಟ್ಟಿ ಡ್ಯಾಂ ಭರ್ತಿಯಾದರೂ ತೊಟ್ಟು ನೀರು ಸಿಗದ ಕಾರಣ ದೇವರು ವರ ಕೊಟ್ಟರೂ ಪೂಜಾರಿ ವರ ಕೊಡುತ್ತಿಲ್ಲ ಎನ್ನುವಂತಾಗಿದೆ ಈ ಭಾಗದ ರೈತರ ಪರಿಸ್ಥಿತಿ. 

ವಾರಾಬಂದಿ ನಿಯಮದಂತೆ ಇಂಡಿ ಶಾಖಾ ಕಾಲುವೆಯಲ್ಲಿ ನೀರು ಹರಿಯಬೇಕಿತ್ತು. ಆದರೆ ಹನಿ ನೀರು ಸಹ ಬಿಡದ ಕಾರಣ ಕಾಲುವೆ ಒಣಗಿದೆ. ನಮ್ಮ ದುಸ್ಥಿತಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ತಾಲೂಕಿನ ಲಚ್ಯಾಣ ಗ್ರಾಮದ ರೈತರಾದ ಗೌರಿಶಂಕರ ಬಾಬಳಗಿ, ಕಲ್ಲನಗೌಡ ಬಿರಾದಾರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಇಂಡಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆ ಎಂದು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಮತ್ತೂಂದೆಡೆ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರು ಕೇವಲ ಸ್ವ
ಕ್ಷೇತ್ರದತ್ತ ಮಾತ್ರ ಗಮನ ಹರಿಸುತ್ತಾರೆ. ಕಳೆದ ಬಾರಿ ಕೇವಲ ಮೂರು ಪಂಪ್‌ಸೆಟ್‌ ಬಳಸಿ ನೀರು ಹರಿಸಲಾದ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ಈ ಬಾರಿ ಐದು ಪಂಪ್‌ಸೆಟ್‌ ಬಳಸಿ ನೀರು ಹರಿಸಿ, ಇಂಡಿ ಶಾಖಾ ಕಾಲುವೆಯನ್ನು ನಿರ್ಲಕ್ಷಿಸಿದ್ದಾರೆ ಎಂಬ ಆರೋಪವೂ ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಮತ್ತೂಂದೆಡೆ ಸಂಬಂಧಿಸಿದ ಯುಕೆಪಿ ಅಧಿಕಾರಿಗಳು ಕಾಲುವೆಗೆ ಸಮರ್ಪಕ ನೀರು ಹರಿಸುವಲ್ಲಿ ವಿಫಲರಾಗಿದ್ದಾರೆ. ಸರ್ಕಾರ ಕೂಡಲೆ ಇನ್ನಾದರೂ ಎಚ್ಚೆತ್ತು ಇಂಡಿ ಶಾಖಾ ಕಾಲುವೆಗೆ ನೀರು ಹರಿಸಬೇಕು. ಈ ಮೂಲಕ ನೀರಿಲ್ಲದೆ ಬಾಡುತ್ತಿರುವ ತೊಗರಿ ಬೆಳೆಯನ್ನು ರಕ್ಷಿಸಬೇಕು. ಇಲ್ಲವಾದರೆ
ಮುಂಬರುವ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಾಲುವೆ ಆಶ್ರಿತ ರೈತರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.