ಹಕ್ಕುಪತ್ರಕ್ಕೆ ಆಗ್ರಹಿಸಿ ವಿಭೂತಿಹಳ್ಳಿ ಪ್ರವಾಹ ಸಂತ್ರಸ್ತರ ಧರಣಿ


Team Udayavani, Feb 5, 2019, 12:00 PM IST

vij-1.jpg

ವಿಜಯಪುರ: ದಶಕದ ಹಿಂದೆ ಅಧಿಕ ಮಳೆ ಪ್ರವಾಹದಿಂದಾಗಿ ಜಲಾವೃತಗೊಂಡಿದ್ದ ವಿಭೂತಿಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಅರ್ಹ ಸಂತ್ರಸ್ತರ ಬದಲಿಗೆ ಅನರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಅರ್ಹರು ಮನೆ ಇಲ್ಲದೇ ಬೀದಿಗೆ ಬಿದ್ದಿದ್ದು, ಈ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆ ಮಾಡುವಂತೆ ಆಗ್ರಹಿಸಿ ಸಂತ್ರಸ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಿದ ಸಂತ್ರಸ್ತರು, ತಮ್ಮ ಬೇಡಿಕೆಗಳ ಈಡೇರಿಕೆ ಅಗದ ಹೊರತು ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು.

ಈ ಹಂತದಲ್ಲಿ ಸ್ಥಳಕ್ಕೆ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ, ವಿಭೂತಿಹಳ್ಳಿ ಗ್ರಾಮಕ್ಕೆ ಸ್ವಯಂ ನಾನೇ ಭೇಟಿ ನೀಡಿ ಸಮಸ್ಯೆ ಪರಿಹರಿಸುತ್ತೇನೆ. ನೈಜ ಫಲಾನುಭವಿಗಳಿಗೆ ಯಾವುದೇ ರೀತಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಧರಣಿ ಹಿಂಪಡೆದುಕೊಂಡರು.

ಸಂತ್ರಸ್ತರ ಪರ ಸಲೀಂ ಆಲ್ದಿ ಮಾತನಾಡಿ, ವಿಭೂತಿಹಳ್ಳಿ ಪುನರ್ವಸತಿ ಕೇಂದ್ರದ ಹಕ್ಕುಪತ್ರ ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ. ವಿಭೂತಿಹಳ್ಳಿಯಲ್ಲಿ ಇರದೇ ಇರುವ ಅನೇಕ ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ, ಅಷ್ಟೇ ಅಲ್ಲ ಜೀವಂತವಿಲ್ಲದೇ ಇರುವವ ಹೆಸರಿನಲ್ಲಿಯೂ ಖೊಟ್ಟಿ ದಾಖಲೆ ಸೃಷ್ಟಿಸಿ ಹಕ್ಕುಪತ್ರ ನೀಡಲಾಗಿದೆ. ಒಂದೇ ಕುಟುಂಬಕ್ಕೆ ಎರಡು ಮೂರು ಮನೆಗಳನ್ನು ನೀಡಲಾಗಿದೆ ಎಂದು ದೂರಿದರು.

ವರ್ಷಗಳಿಂದ ಈ ಸಮಸ್ಯೆ ಬಗ್ಗೆ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ, ಅವ್ಯವಹಾರ ತನಿಖೆಗೆ ನಿಯೋಜಿತವಾಗುವ ಅಧಿಕಾರಿಗಳ ತಂಡ ಕೇವಲ ನಾಮಕೆವಾಸ್ತೆ ವರದಿ ತಯಾರಿಸಿ ಯಾವುದೇ ಲೋಪವಾಗಿಲ್ಲ ಎನ್ನುತ್ತಾರೆ. ಸ್ಥಳಕ್ಕೆ ಭೇಟಿ ನೀಡದೇ, ಫಲಾನುಭವಿಗಳನ್ನು ಮಾತನಾಡಿಸದೇ ಏಕಪಕ್ಷೀಯವಾಗಿ ವರದಿ ಸಲ್ಲಿಸಿದ್ದೇ ಹೆಚ್ಚು. ಈ ಕಾರಣದಿಂದಾಗಿ ನೈಜ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತವಾಗಬೇಕಾಗಿದೆ. ಅಷ್ಟೇ ಅಲ್ಲದೇ ಅನೇಕ ಉಳ್ಳವರು ಸಹ ಗ್ರಾಮದಲ್ಲಿ ಪಡಿತರ ಚೀಟಿ ಹೊಂದಿ ಬಡವರಿಗೆ ದಕ್ಕಬೇಕಾದ ಸೌಲಭ್ಯಗಳನ್ನು ತಾವೇ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಉನ್ನತ ಮಟ್ಟದ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಂಡು ನೈಜ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಹಕ್ಕೊತ್ತಾಯ ಮಂಡಿಸಿದರು.

ಬಸೀರ್‌ ಅಹ್ಮದ್‌ ತಾಂಬೆ, ಎಚ್.ಮೈನುದ್ದೀನ್‌, ಶಫೀಕ್‌ ಕನ್ನೂರ, ಅಶ್ಫಾಕ್‌ ಜಮಖಂಡಿ, ರಿಯಾಜ್‌ ಹುಂಡೇಕಾರ, ಜಿ.ಎಂ. ಜಮಖಂಡಿ, ಸಂಗಮೇಶ ಹಡಪದ ಇದ್ದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.