ಅನರ್ಹ ಶಾಸಕರಿಗೆ,ಬಿಜೆಪಿಗೆ ಸಂತ್ರಸ್ತರ ಶಾಪ ತಟ್ಟಲಿದೆ : ಎಂ.ಬಿ.ಪಾಟೀಲ
Team Udayavani, Sep 23, 2019, 6:33 PM IST
ವಿಜಯಪುರ : ಅನರ್ಹ ಶಾಸಕರು ಹಾಗೂ ಬಿಜೆಪಿ ಪಕ್ಷಕ್ಕೆ ರಾಜ್ಯದ ನೆರ ಸಂಸತ್ರಸ್ತರ ಶಾಪ ತಟ್ಟಲಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಟೀಕಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಅವರು ಅನರ್ಹ ಶಾಸಕರು ರಾಜ್ಯದ ಜನತೆಗೆ ಹಾಗೂ ಕ್ಷೇತ್ರದ ಮತದಾರರಿಗೆ, ಸಂಕಷ್ಟದಲ್ಲಿರುವ ಸಂಸತ್ರಸ್ತರಿಗೆ ಮೋಸ ಮಾಡಿದ್ದಾರೆ.
ತಮ್ಮ ಕ್ಷೇತ್ರದ ಜನರು ನೆರೆಯ ಬಾಧೆಯಿಂದ ಕಣ್ಣೀರಲ್ಲಿ ಮುಳುಗಿದ್ದರೂ ಕಾಗವಾಡ, ಅಥಣಿ, ಗೋಕಾಕ ಅನರ್ಹ ಶಾಸಕರಿಗೆ ಸಂತ್ರಸ್ತ ಸಮಸ್ಯೆ ಆಲಿಸಲು ಮುಂದಾಗಿಲ್ಲ. ಹೀಗಾಗಿ ಅನರ್ಹ ಶಾಸಕರಿ ಸಂತ್ರಸ್ತರ ಶಾಪ ತಟ್ಟೊದು ಗ್ಯಾರಂಟಿ ಎಂದು ಹರಿಹಾಯ್ದರು.
ಅನರ್ಹ ಶಾಸಕರ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಏನೇ ಬರಲಿ, ಕಾನೂನು ಗೌರವಿಸಬೇಕು.
15 ಮತಕ್ಷೇತ್ರದಲ್ಲಿ ಒಂದು ಪೆನಲ್ ಮಾಡಿದ್ದೇವಿ. ಹೀಗಾಗಿ ಉಪ ಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳ ಖಂಡಿತ ಕಾಂಗ್ರೆಸ್ ಗೆಲ್ಲಲಿದೆ ಎಂದರು.
ವಿರೋಧ ಪಕ್ಷದ ನಾಯಕರ ನೇಮಕ ಶೀಘ್ರದಲ್ಲೇ ಆಗಲಿದೆ. ಹೈಕಮಾಂಡ ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತಮ್ಮ ನೇತೃತ್ವದ ಕಾಂಗ್ರೆಸ್ ಬೆಂಬಲಿತ ಸಮ್ಮಿಶ್ರ ಸರ್ಕಾರ ಅತಿ ಕೆಟ್ಟ ಸರಕಾರವಾಗಿತ್ತು ಎಂದು ಹೇಳಿಕೊಂಡಿರುವ ಹಿಂದಿನ ಅರ್ಥ, ತಾತ್ಪರ್ಯ ಬೇರೆಯೇ ಇದೆ. ಬಿಜೆಪಿ ಸರ್ಕಾರದಲ್ಲಿ ಜನರ ಕೆಲಸಗಳ ಆಗ್ತಿಲ್ಲ. ಇದನ್ನ ವಿಶ್ಲೇಷಣೆ ಮಾಡುವಾಗ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದರು.
ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಹೊಂದಾಣಿಕೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ