ಯುಕೆಪಿ ಯೋಜನೆಗೆ ವೇಗ ನೀಡಲು ಸಂತ್ರಸ್ತರ ಆಗ್ರಹ


Team Udayavani, Feb 4, 2020, 12:45 PM IST

vp-tdy-2

ಬಾಗಲಕೋಟೆ: ಕಳೆದ ಐದು ದಶಕಗಳಿಂದ ಕುಂಟುತ್ತ ಸಾಗಿರುವ ಯುಕೆಪಿ ಯೋಜನೆಗೆ ವೇಗ ನೀಡಿ, ಸಂತ್ರಸ್ತರ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಭೂಮಿಗೆ ಯೋಗ್ಯ ಬೆಲೆ ನೀಡಲು ಮಾರುಕಟ್ಟೆ ಬೆಲೆ ನಿರ್ಧರಣಾ ಸಮಿತಿ ರಚಿಸುವಂತೆ ಒತ್ತಾಯಿಸಿ ಅವಳಿ ಜಿಲ್ಲೆಯ ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಧಿತ ಸಂತ್ರಸ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ವಿಜಯಪುರ, ಬಾಗಲಕೋಟೆ ಅವಳಿಜಿಲ್ಲೆಗಳಿಂದ ಆಗಮಿಸಿದ್ದ ಸಂತ್ರಸ್ತರು, ಸರ್ಕಾರದ ವಿಳಂಬ ನೀತಿ ಹಾಗೂ ಭೂ ಪರಿಹಾರಕ್ಕೆ ಯೋಗ್ಯ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಮಲ್ಲಿಕಾರ್ಜುನ ಅಂಗಡಿ, ಪ್ರಕಾಶ ಅಂತರಗೊಂಡ, ಕಿರಣ ಬಾಳಾಗೋಳ ಮುಂತಾದವರು ಮಾತನಾಡಿ, ಯುಕೆಪಿ 3ನೇ ಹಂತದಲ್ಲಿ ಸ್ವಾಧೀನಗೊಳ್ಳಲಿರುವ ಭೂಮಿಗೆ ಯೋಗ್ಯ ಪರಿಹಾರ ನೀಡಲು ಮಾರುಕಟ್ಟೆ ಬೆಲೆ ನಿರ್ಧರಣಾ ಸಮಿತಿ ರಚಿಸುವುದಾಗಿ ಚುನಾವಣೆಗೆ ಮುನ್ನ ಸ್ವತಃ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಹೇಳಿದ್ದರು. ಆದರೆ, ಈಗ ಕಾನೂನು ಪ್ರಕಾರ ಪರಿಹಾರ ನೀಡುವುದಾಗಿ ಹೇಳುತ್ತಿದ್ದು, ಇದರಿಂದ ಸಂತ್ರಸ್ತರಿಗೆ ಅನ್ಯಾವಾಗಲಿದೆ ಎಂದರು.

ಭೂಮಿ ಕಳೆದುಕೊಳ್ಳುವ ರೈತರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಯೋಜನೆಯ ಪುನರ್‌ ವಸತಿ ಕೇಂದ್ರ, ಕಾಲುವೆ ನಿರ್ಮಾಣ, ಹಿನ್ನೀರ ವ್ಯಾಪ್ತಿಯಡಿ 1.24 ಲಕ್ಷ ಎಕರೆ ಭೂಮಿ ಕಳೆದುಕೊಳ್ಳಲಿದ್ದು, ಇದಕ್ಕೆ ಯೋಗ್ಯ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ಬೆಲೆ ನೀಡಬೇಕು. ಭೂಮಿ ಹಿಡಿದು, ಉತ್ಪನ್ನ ಬರುವವರೆಗೆ ನಿರ್ವಾತ ಅವಧಿಯಲ್ಲಿ ಸಂತ್ರಸ್ತರು ಬದಕು ನಡೆಸಲು ತಗಲುವ ವೆಚ್ಚ ಹಾಗೂ ಪರಿಹಾರ ಹಣದಲ್ಲಿ ಜಮೀನಿನ ಮೇಲಿರುವ ಕೃಷಿ ಸಾಲ, ಆಸ್ತಿ ಭದ್ರತೆ ಸಾಲಗಳು, ಬೆಳೆ ಸಾಲದ ಹಣ ಕಡಿತ ಮಾಡುತ್ತಿದ್ದು, ಇದರಿಂದ ಸಂತ್ರಸ್ತರ ಬದುಕು ಬೀದಿಪಾಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭೂಮಿಗೆ ಯೋಗ್ಯ ಪರಿಹಾರ ನೀಡದೇ ಇದ್ದರೆ, ಯೋಜನೆಗಾಗಿ ತ್ಯಾಗ ಮಾಡಿದವರನ್ನು ಬೀದಿಗೆ ತಳ್ಳಿದಂತಾಗುತ್ತದೆ ಎಂದರು.

ಖುಷ್ಕಿ ಜಮೀನಿಗೆ 20 ಲಕ್ಷ, ನೀರಾವರಿ ಜಮೀನಿಗೆ 30 ಲಕ್ಷದ ವರೆಗೆ ಬೆಲೆ ಇದೆ. ಆದರೆ, ನೊಂದಣಿ ಕಚೇರಿಯಲ್ಲಿನ ಯೋಜನಾ ಪ್ರದೇಶದಲ್ಲಿ ಸರ್ಕಾರದ ಮಾರ್ಗಸೂಚಿ ಬೆಲೆಗಳು 1ರಿಂದ 6 ಲಕ್ಷದವರೆಗೆ ಇದೆ. ಗರಿಷ್ಠ ಮಾರ್ಗಸೂಚಿ ಬೆಲೆಗಳನ್ನು ಪರಿಗಣಿಸಿ ಸಾಮಾನ್ಯ ಐತಿರ್ಪಿನನ್ವಯ ಪರಿಹಾರ ನೀಡಿದರೂ ಸಹ, ಮರಳಿ ಭೂಮಿ ಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮಾರುಕಟ್ಟೆ ಬೆಲೆ ನಿರ್ಧಾರಣ ಸಮಿತಿ ರಚಿಸಿ ಸರ್ವ ಸಮ್ಮತ ಯೋಗ್ಯ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಪುನರ್‌ ವಸತಿ ಕೇಂದ್ರಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಂಸದರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ಗ್ರಾಮ ಪ್ರತಿನಿಧಿಗಳ ಒಳಗೊಂಡಂತೆ ಸಮಿತಿ ರಚಿಸಿ, ಸಂತ್ರಸ್ಥರಿಗೆ ನ್ಯಾಯ ದೊರಕಿಸಿ ಕೊಡುವ ವ್ಯವಸ್ಥೆಯಾಗಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.