ತೊಗರಿ ಬಿಲ್ ಪಾವತಿಸದ್ದಕ್ಕೆ ವಿಜಯಪುರ ರೈತರ ಆಕ್ರೋಶ
Team Udayavani, Oct 4, 2018, 6:00 AM IST
ವಿಜಯಪುರ: 10 ತಿಂಗಳ ಹಿಂದೆ ಬೆಂಬಲ ಬೆಲೆಯಲ್ಲಿ ತೊಗರಿ ಮಾರಾಟ ಮಾಡಿದ್ದರೂ ಬಿಲ್ ಪಾವತಿಸದ ಕಾರಣ ಆಕ್ರೋಶಗೊಂಡ ರೈತರು ವಿಷದ ಬಾಟಲಿ ಪ್ರದರ್ಶಿಸಿ ಆತ್ಮಹತ್ಯೆ ಬೆದರಿಕೆ ಹಾಕಿದರು ಸಿಂದಗಿ ತಾಲೂಕಿನ ಚಟ್ಟರಕಿ, ಹಚ್ಯಾಳ ಭಾಗದ ತೊಗರಿ ಬೆಳೆಗಾರರು ಬುಧವಾರ ನಗರದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ತಮಟೆ ಬಾರಿಸುತ್ತ ಬಾಯಿ ಬಡಿದುಕೊಂಡರು.
ತೊಗರಿಗೆ ಕೂಡಲೇ ಬಿಲ್ ಪಾವತಿಸುವಂತೆ ಆಗ್ರಹಿಸಿ ಉಪವಾಸ ಆರಂಭಿಸಿದರು. 98 ರೈತರು ತಲಾ 20 ಕ್ವಿಂಟಲ್
ತೊಗರಿಯನ್ನು ಕಳೆದ ಜನವರಿ 25ರಂದೇ ಖರೀದಿ ಕೇಂದ್ರಕ್ಕೆ ನೀಡಿದ್ದೇವೆ. ಆದರೆ, ಅಧಿಕಾರಿಗಳು ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡದೇ ಭ್ರಷ್ಟಾಚಾರ ಎಸಗಿದ್ದಾರೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು ಕೌಟುಂಬಿಕ ನಿರ್ವಹಣೆ ಕಷ್ಟವಾಗಿದೆ.
ಮಕ್ಕಳ ಶಿಕ್ಷಣ ಹಾಗೂ ಇತರ ಕಾರ್ಯಗಳಿಗೆ ಆರ್ಥಿಕ ಸಮಸ್ಯೆ ಎದುರಾಗಿದ್ದರೂ ಅಧಿಕಾರಿಗಳು ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿಸಿ ಮತ್ತು ಎಸ್ಪಿ ಸಂಬಂಧಿಸಿದ ಅ ಧಿಕಾರಿಗಳೊಂದಿಗೆ ಮೊಬೈಲ್ ಮೂಲಕ ಮಾತನಾಡಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ, ಪ್ರತಿಭಟನೆಯನ್ನು ವಾಪಸ್ ಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?