ವಿಜಯಪುರ ಕಾಮಗಾರಿ ಮಾದರಿಯಾಗಲಿ: ಯತ್ನಾಳ


Team Udayavani, Jan 3, 2022, 3:04 PM IST

23work

ವಿಜಯಪುರ: ಗುತ್ತಿಗೆದಾರರು ವಿಜಯಪುರ ನಗರದಲ್ಲಿ ಮಾಡುವ ಕಾಮಗಾರಿಗಳನ್ನು ಅತ್ಯಂತ ಸಮರ್ಪಕವಾಗಿ ಮಾಡಬೇಕು. ರಾಜ್ಯಕ್ಕೇ ಮಾದರಿ ಯಾಗುವ ರೀತಿಯಲ್ಲಿ ಕಟ್ಟಡ ಹಾಗೂ ಇತರೆ ಯೋಜನೆಗಳ ಕಾಮಗಾರಿ ಮಾಡುವ ಮೂಲಕ ವಿಶ್ವಾಸಗಳಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿವಿಮಾತು ಹೇಳಿದರು.

ನಗರದ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಆವರಣದಲ್ಲಿ 20 ಲಕ್ಷ ರೂ. ವೆಚ್ಚದ ಗುರುಭವನ ಕಟ್ಟಡ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಕೈಗೊಳ್ಳಲಾದ ಹೆಚ್ಚುವರಿ ತರಗತಿ ಕೊಠಡಿಗಳ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳ ಭೂಮಿಪೂಜೆ ಹಾಗೂ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಸದ್ಯ ಕೈಗೆತ್ತಿಕೊಳ್ಳಲಾಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಬಹಳ ಮುತುವರ್ಜಿ ವಹಿಸಿ ಮಾದರಿ ಆಗುವಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್‌ ಸಂಕಷ್ಟದ ಕಾರಣದಿಂದ ಸದರಿ ಕಾಮಗಾರಿಗಳು ಆರಂಭಕ್ಕೆ ವಿಳಂಬವಾಗಿದೆ. ಹೀಗಾಗಿ ಇನ್ನು ವಿಳಂಬ ಮಾಡದೇ ತ್ವರಿತವಾಗಿ ಕಾಮಗಾರಿ ಕೈಗೊಂಡು ಫೆಬ್ರುವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಈಗಾಗಲೇ ಒದಗಿಸಲಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅನುದಾನದ ಕೊರತೆಯಾದಲ್ಲಿ, ಹೆಚ್ಚುವರಿಯಾಗಿ ಅಗತ್ಯದ ಅನುದಾನ ನೀಡುವ ಭರವಸೆ ನೀಡಿದರು.

ನಗರದಲ್ಲಿ ಈಗ ಕೈಗೊಳ್ಳುತ್ತಿರುವ ಶೈಕ್ಷಣಿಕ ಸೌಲಭ್ಯಗಳ ಯೋಜನೆಗಳ ಕಾಮಗಾರಿಗಳು ಭವಿಷ್ಯದಲ್ಲಿ ವಿಜಯಪುರ ನಗರದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಕಲಿಯಲು ಹಾಗೂ ಶಿಕ್ಷಕರಿಗೆ ಕಲಿಸುವಂತಹ ಚಟುವಟಿಕೆಗಳಿಗೆ ಬಹಳ ಪೂರಕವಾಗಲಿವೆ ಎಂದರು.

ಇಲ್ಲಿನ ಇನ್ನು ಕೆಲ ಕಟ್ಟಡಗಳ ಕಾಮಗಾರಿಗಳನ್ನು ಶಿಕ್ಷಕರ ದಿನವಾದ ಸೆಪ್ಟೆಂಬರ್‌ 5ರೊಳಗಾಗಿ ಪೂರ್ಣಗೊಳಿಸಿದರೆ ಹೆಚ್ಚು ಅರ್ಥಪೂರ್ಣವಾಗಿ ಆ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಬಹುದು. ಅದರಂತೆ ನಗರದ ಕೆಲವು ಶಾಲಾ, ಕಾಲೇಜುಗಳ ಆವರಣದಲ್ಲಿ ಶೌಚಾಲಯಗಳ ನಿರ್ಮಾಣಕ್ಕೂ ಒತ್ತು ನೀಡಬೇಕು ಎಂದು ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್‌.ವಿ. ಹೊಸೂರ, ಸಿದ್ಧು ಹಂಚನಾಳ, ಟಿ.ಎಸ್‌.ಗೌಡರ, ಸುರೇಶ ಪಾಟೀಲ ಸೇರಿದಂಥೆ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.