ಡಾ| ಅಂಬೇಡ್ಕರ್‌ ಬದುಕು ಅನುಕರಣೀಯ


Team Udayavani, Apr 19, 2021, 7:14 PM IST

19-23

ಮುದ್ದೇಬಿಹಾಳ: ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಜೀವನ ಭಾರತಕ್ಕೆ, ಭಾರತದಲ್ಲಿರುವ ತುಳಿತಕ್ಕೊಳಗಾದವರ ಏಳ್ಗೆಗೆ ಮೀಸಲಾಗಿತ್ತು. ಶೋಷಿತರ, ದೀನ ದಲಿತರ, ದಮನಿತರ ಬಗ್ಗೆ ಚಿಂತನೆ ಅವರಲ್ಲಿತ್ತು. ಹತ್ತಾರು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಈ ದೇಶದ ಸಂಸ್ಕೃತಿ, ಜಾತಿ ವ್ಯವಸ್ಥೆಗೆ ಪೂರಕವಾದ ಸಂವಿಧಾನ ನೀಡಿದ್ದಾರೆ ಎಂದು ಜಿಲ್ಲಾ ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ ಶಿವಪುತ್ರ ಅಜಮನಿ ಹೇಳಿದರು.

ಮುದ್ದೇಬಿಹಾಳ ತಾಲೂಕಿನ ದೇವೂರ ಗ್ರಾಮದಲ್ಲಿ ರವಿವಾರ ಏರ್ಪಡಿಸಿದ್ದ ಡಾ| ಅಂಬೇಡ್ಕರ್‌ ಅವರ 130ನೇ ಜಯಂತ್ಯುತ್ಸವ, ನವೀಕೃತ ಅಂಬೇಡ್ಕರ್‌ ವೃತ್ತ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್‌ ಓದಿರುವಷ್ಟು ಪುಸ್ತಕಗಳನ್ನು ಜಗತ್ತಿನ ಯಾವೊಬ್ಬ ಜ್ಞಾನಿಯೂ ಓದಿಲ್ಲ. ಇದಕ್ಕಾಗಿಯೇ ಅಮೆರಿಕದ ಸಂಸತ್ತಿನಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ಹಾಕಿದ್ದಾರೆ. ಬ್ರಿಟನ್‌ನಲ್ಲಿ ರಸ್ತೆಯೊಂದಕ್ಕೆ ಅಂಬೇಡ್ಕರ್‌ ಹೆಸರಿಟ್ಟಿದ್ದಾರೆ.

ಆದರೆ ಭಾರತದಲ್ಲೇ ಅವರಿಗೆ ಮನ್ನಣೆ ಸಿಗದಿರುವುದು, ಅವರು ಬರೆದ ಸಂವಿಧಾನ ಮರೆ ಮಾಚುವ ಪ್ರಯತ್ನ ನಡೆದಿರುವುದು ವಿಷಾಧಪಡುವಂಥದ್ದು ಎಂದರು. ತಹಶೀಲ್ದಾರ್‌ ಕಚೇರಿ ಚುನಾವಣಾ ವಿಭಾಗದ ಅಧಿ ಕಾರಿ ವೆಂಕಟೇಶ ಅಂಬಿಗೇರ, ಎಂಜಿವಿಸಿ ಕಾಲೇಜಿನ ಹಿರಿಯ ಉಪನ್ಯಾಸಕ ಡಾ| ಪಿ.ಎಚ್‌. ಉಪ್ಪಲದಿನ್ನಿ, ಅಧ್ಯಕ್ಷತೆ ವಹಿಸಿದ್ದ ಮುದ್ದೇಬಿಹಾಳ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ರೇವಣೆಪ್ಪ ಹರಿಜನ, ಎಸ್ಸಿ-ಎಸ್ಟಿ ನೌಕರರ ಸಂಘದ ಅಧ್ಯಕ್ಷ ಕೆ.ಎಂ. ಇಬ್ರಾಹಿಂಪುರ, ಆರ್‌.ಎನ್‌. ಕಟ್ಟಿಮನಿ ಮಾತನಾಡಿ, ಅಂಬೇಡ್ಕರ್‌ ಅವರ ನೀತಿ, ನಿರೂಪಣೆಗಳು ಬುದ್ಧ, ಬಸವಣ್ಣನ ತತ್ವಗಳನ್ನು ಹೋಲುತ್ತವೆ. ದೇಶ ಇರುವವರೆಗೂ ಅವರ ಹೆಸರು ಶಾಶ್ವತವಾಗಿರುತ್ತದೆ ಎಂದರು.

ಪಿಡಿಒ ಆನಂದ ಹಿರೇಮಠ, ಗಣ್ಯರಾದ ಬಿ.ಎಸ್‌. ದೇವೂರ, ಪರಶುರಾಮ ಚಲವಾದಿ, ವೈ.ಟಿ. ಚಲವಾದಿ, ಶರಣಬಸು ಚಲವಾದಿ ನೇಬಗೇರಿ ಸೇರಿ ಹಲವರು ವೇದಿಕೆಯಲ್ಲಿದ್ದರು. ಈಶಪ್ಪ ಇಲಕಲ್‌, ಕರಿಯಪ್ಪ ಕಟ್ಟಿಮನಿ, ಚಂದಪ್ಪ ಮಾದರ, ಏಕನಾಥ ಚಲವಾದಿ, ಬಸಲಿಂಗಯ್ಯ ಹಿರೇಮಠ, ರಾಜೇಸಾಬ ದೊಡಮನಿ, ಯಲ್ಲಪ್ಪ ಜಳಕಿ, ರಮೇಶ ಗೊಳಸಂಗಿ, ಮುತ್ತಣ್ಣ ಕಟ್ಟಿಮನಿ, ತಿಪ್ಪಣ್ಣ ಜಳಕಿ, ಎಸ್‌.ಬಿ. ಬಿರಾದಾರ, ಶಂಕ್ರಪ್ಪ ಚಲವಾದಿ, ರುದ್ರಗೌಡ ಪಾಟೀಲ, ಸಿದ್ದಪ್ಪ ಚವರಿ, ರೇವಣೆಪ್ಪ ಚವರಿ, ಏಕನಾಥ ಚಲವಾದಿ, ಗ್ರಾಪಂ ಕಾರ್ಯದರ್ಶಿ ರಂಗರಾಜು ಇದ್ದರು.

ನಿವೃತ್ತ ಸರ್ಕಾರಿ ನೌಕರರಾದ ಕೆ.ಎಂ. ಇಬ್ರಾಹಿಂಪುರ, ಬಿ.ಎಚ್‌.ಯರಝರಿ, ಪಿ.ಎ.ಯರಝರಿ, ಕೆ.ಬಿ.ದೊಡಮನಿ, ಆರ್‌. ಎನ್‌.ಕಟ್ಟಿಮನಿ, ಗ್ರಾಪಂ ಸದಸ್ಯರಾದ ಎಚ್‌. ಎನ್‌.ಹುಗ್ಗಿ, ಶೈಲಾ ಚವರಿ, ಪೀರವ್ವ ಮಾದರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಡಾ| ಅಂಬೇಡ್ಕರ್‌ ನವೀಕೃತ ವೃತ್ತವನ್ನು ಉದ್ಘಾಟಿಸಲಾಯಿತು. ಗಣ್ಯರು ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕ ಪರಶುರಾಮ ದೇವೂರ ನಿರೂಪಿಸಿದರು. ಶಿಕ್ಷಕ ವೈ.ಟಿ. ಚಲವಾದಿ ವಂದಿಸಿದರು. ಕಾರ್ಯಕ್ರಮದ ನಂತರ ಸಂಜೆ ಡಾ| ಅಂಬೇಡ್ಕರ್‌ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.