Vijayapura:ಗಾಂಜಾ ಬೆಳೆದವನಿಗೆ 5 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ.ದಂಡ
Team Udayavani, Aug 24, 2023, 8:06 PM IST
ವಿಜಯಪುರ: ಅಕ್ರಮವಾಗಿ ಗಾಂಜಾ ಬೆಳೆದ ಆರೋಪದ ಮೇಲೆ ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯ ಜಾಲಗೇರಿ ವಿಟ್ಠಲವಾಡಿ ಗ್ರಾಮದ ನಿವಾಸಿ ಕಾಶಿನಾಥ ರಾಠೋಡನಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನಿಡಿದೆ.
ಆರೋಪಿ ಕಾಶೀನಾಥ ರಾಠೋಡ ತನ್ನ ಜಮೀನಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗಾಂಜಾ ಬೆಳೆದಿರುವುದನ್ನು ತಿಕೋಟಾ ಪೋಲಿಸರು ದಾಳಿ ಮಾಡಿ ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಾಲವಾಡೆ ಅವರು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆ.23 ರಂದು ತೀರ್ಪು ನೀಡಿದ್ದಾರೆ.
ತಿಕೋಟಾ ಪೋಲಿಸ್ ಠಾಣೆಯ ಶ್ರೀಮತಿ ಎಸ್.ಕೆ.ಲಂಗೋಟಿ ಅವರು ಈ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾದ ಎಸ್.ಎಚ್.ಹಕೀಮ ಅವರು ವಾದ ಮಂಡಿಸಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್