Vijayapura: ಚಲಿಸುವಾಗ ಹೆದ್ದಾರಿಯಲ್ಲೇ ಹೊತ್ತಿ ಉರಿದ ಕಾರು
Team Udayavani, Apr 5, 2024, 3:51 PM IST
ವಿಜಯಪುರ: ಚಲಿಸುವ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಾರಿಗೆ ಆವರಿಸಿ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜರುಗಿದೆ.
ಕಲಬುರಗಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿಲ್ಲೆಯ ಸಿಂದಗಿ ರಸ್ತೆಯಲ್ಲಿರುವ ಹೊನ್ನುಟಗಿ ಗ್ರಾಮದ ಬಳಿ ಈ ಘಟನೆ ಜರುಗಿದೆ.
ಕಾರು ಚಲಿಸುವಾಗಲೇ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನ ಚಾಲಕ ಕಾರು ನಿಲ್ಲಿಸಿ ಕೆಳಗೆ ಇಳಿದಿದ್ದಾನೆ. ಇದರಿಂದಾಗಿ ಸಂಭವನೀಯ ಅನಾಹುತ ತಪ್ಪಿದೆ.
ವಿಷಯ ತಿಳಿಯುತ್ತಲೇ ಅಗ್ನಿಶಾಮಕ ಸೇವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ಬಿರು ಬಿಸಿಲಿನಲ್ಲಿ ಈ ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳ ಚಾಲಕರು ತಮ್ಮ ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುವ ಭೀತಿಯಿಂದ ವಾಹನಗಳನ್ನು ಇಕ್ಕೆಲಗಳಲ್ಲಿ ನಿಲ್ಲಿಸಿದ್ದರಿಂದ ಸಂಚಾರ ಕೆಲ ಕಾಲ ಸ್ಥಗಿತವಾಗಿತ್ತು.
ಸುದ್ದಿ ತಿಳಿಯುತ್ತಲೇ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
MUST WATCH
ಹೊಸ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು
ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ