Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ
Team Udayavani, Mar 27, 2024, 12:53 PM IST
ವಿಜಯಪುರ: ಪರೀಕ್ಷೆ ಬರೆಯಲು ಕೈಗಳಲ್ಲಿ ಶಕ್ತಿ ಇಲ್ಲದ ವಿಕಲಾಂಗ ಪರೀಕ್ಷಾರ್ಥಿಗೆ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುವ ಸಹಾಯಕನ ಸೇವೆ ಪಡೆಯುವಲ್ಲಿ ಅವಕಾಶ ನೀಡದ ಕಾರಣ ವಿಕಲಾಂಗ ಪರೀಕ್ಷಾರ್ಥಿ ಪರದಾಟ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ನಗರದ ಮೊಹಮ್ಮದ್ ನಾಯ್ಕೋಡಿ ಎಂಬ ದಿವ್ಯಾಂಗ ವಿದ್ಯಾರ್ಥಿ ಪರೀಕ್ಷೆ ಬರೆಯಬೇಕಿತ್ತು. ಆದರೆ ಫೆಬ್ರವರಿ ತಿಂಗಳಲ್ಲೇ ಪರೀಕ್ಷೆ ಬರೆಯಲು ಸಹಾಯಕನ ಸೇವೆ ಒದಗಿಸುವಂತೆ ಮಾಡಿಕೊಂಡ ಪರೀಕ್ಷಾರ್ಥಿಯ ಮನವಿಗೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಂದಿಸಿಲ್ಲ.
ಪರಿಣಾಮ ಬುಧವಾರ ಪರೀಕ್ಷಾ ಕೇಂದ್ರಕ್ಕೆ ಹಾಜರಾದರೂ ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ಮೊಹಮ್ಮದ್ ಸುಮ್ಮನೇ ಕುಳಿತಿದ್ದಾನೆ. ತಮ್ಮ ಮಗ ಪರೀಕ್ಷೆ ಬರೆಯಲಾಗದ ಸುಸ್ಥಿತಿ ಕಂಡು ಪರೀಕ್ಷಾ ಕೇಂದ್ರದ ಹೊರಗೆ ಮೊಹಮ್ಮದನ ತಂದೆ ಅಝ್ಲಾನ್ ಅಳುತ್ತಾ ಕುಳಿತಿದ್ದಾರೆ.
ದಿವ್ಯಾಂಗ ಮೊಹಮ್ಮದ್ ಓದಿದ ಶಾಲೆಯವರು ತಮ್ಮ ಶಾಲೆಯ ದಿವ್ಯಾಂಗ ವಿದ್ಯಾರ್ಥಿ ಮೊಹಮ್ಮದ್ ಗೆ ಪರೀಕ್ಷೆ ಬರೆಯಲು ಸಹಾಯಕನ ಸೇವೆ ಪಡೆಯಲು ಅನುಮತಿ ಕೋರಿ ಫೆಬ್ರವರಿ ತಿಂಗಳಲ್ಲೇ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ಮನವಿ ಮಾಡಿದ್ದರೂ ಸ್ಪಂದನೆ ಸಿಕ್ಕಿಲ್ಲ.
ಪರಿಣಾಮ ಪರೀಕ್ಷಾರ್ಥಿ ಮೊಹಮ್ಮದ್ ಪರಿಸ್ಥಿತಿ ಮಾಧ್ಯಮಗಳ ಗಮನಕ್ಕೆ ಬರುತ್ತಲೇ ಎಚ್ಚೆತ್ತ ಶಾಲಾ ಶಿಕ್ಷಣ ಇಲಾಖೆ ಪರೀಕ್ಷೆ ಆರಂಭವಾಗಿ ಸುಮಾರು ಒಂದು ಗಂಟೆ ಬಳಿಕ ಪರೀಕ್ಷೆ ಬರೆಯಲು ಸಹಾಯಕನ ಸೇವೆ ಒದಗಿಸಿದ್ದಾರೆ.
ಅಲ್ಲದೇ ದಿವ್ಯಾಂಗ ಮೊಹಮ್ಮದ್ ಮುಂದಿನ ವಿಷಯಗಳ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಸಹಾಯಕನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಪರೀಕ್ಷಾರ್ಥಿಯ ಪೋಷಕರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ