![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
ಪೊಲೀಸರು ರಕ್ಷಣೆ ಕೊಡುತ್ತಿಲ್ಲ... ಸಿಎಂ, ಗೃಹ ಸಚಿವ, ಡಿಸಿ-ಎಸ್ಪಿಗೆ ಮನವಿ
Team Udayavani, May 20, 2024, 10:22 PM IST
![1-wqewewqe](https://www.udayavani.com/wp-content/uploads/2024/05/1-wqewewqe-2-620x407.jpg)
ವಿಜಯಪುರ : ಆಸ್ತಿ ವಿಷಯವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರಿಂದ ಪತಿಯ ಸಹೋದರರು ದೌರ್ಜನ್ಯ ನಡೆಸುತ್ತಿದ್ದಾರೆ. ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆದರೂ ದೂರು ದಾಖಲಿಸಿಕೊಂಡು ರಕ್ಷಣೆ ಕೊಡುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಕಾರಣ ಕುಟುಂಬದ ನಾಲ್ವರಿಗೆ ದಯಾಮರಣ ನೀಡುವಂತೆ ಮಹಿಳೆಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಪ್ರತಿನಿಧಿಸುವ ಬಬಲೇಶ್ವರ ವಿಧಾನಸಭೆ ಕ್ಷೇತ್ರದ ದೂಡಿಹಾಳ ಗ್ರಾಮದ ಲಕ್ಷ್ಮಿಬಾಯಿ ಲಕ್ಷ್ಮಣ ಕುಮಟಗಿ ಎಂಬ ಮಹಿಳೆಯೇ ಕುಟುಂಬ ನಾಲ್ವರು ಸದಸ್ಯರಿಗೆ ದಯಾ ಮರಣಕ್ಕೆ ಅವಕಾಶ ಕೋರಿ ಮನವಿ ಮಾಡಿದ್ದಾರೆ.
ಸೋಮವಾರ ಪತಿ ಹಾಗೂ ಹೈಸ್ಕೂಲ್ ಓದುತ್ತಿರುವ ಇಬ್ಬರು ಮಕ್ಕಳೊಂದಿಗೆ ವಿಜಯಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿಗೆ ತೆರಳಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದಿರುವ ಮನವಿ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ.
ನನ್ನ ಪತಿ ಲಕ್ಷ್ಮಣ ಮುಗ್ಧನಿದ್ದು, 7 ಹಾಗೂ 8ನೇ ತರಗತಿ ಓದುತ್ತಿರುವ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಅವರ ಭವಿಷ್ಯ ರೂಪಿಸಲು ನಾನು ಹೆಣಗುತ್ತಿದ್ದೇನೆ. ನನ್ನ ಪತಿಯ ಮೂವರು ಸಹೋರರು ಸೇರಿದಂತೆ ಕುಟುಂಬದ ಜಂಟಿ ಖಾತೆಯಲ್ಲಿ 14 ಎಕರೆ ಜಮೀನಿದ್ದು, ನಮ್ಮ ಪಾಲಿನ ಜಮೀನು ಕೃಷಿ ಮಾಡಲು ಬಿಡುತ್ತಿಲ್ಲ ಎಂದು ದೂರಿದ್ದಾರೆ.
ನಮಗೆ ಗಂಡು ಮಕ್ಕಳಿಲ್ಲ, ಇಬ್ಬರು ಹೆಣ್ಣು ಮಕ್ಕಳು ಮಾತ್ರವಿದ್ದು, ಆಸ್ತಿ ಕೊಡುವುದಿಲ್ಲ ಎಂದು ನನ್ನ ಪತಿಯ ಸಹೋದರರು ಪದೇ ಪದೇ ಜಮೀನಿಗೆ ಬಂದು ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ತಮ್ಮ ಪತಿ ಲಕ್ಷ್ಮಣ ಇವರ ಸಹೋದರರು ಹಾಗೂ ಅವರ ಕುಟುಂಬ ಸದಸ್ಯರಾದ ವಿಠ್ಠಲ ಕುಮಟಗಿ, ಭರಮಪ್ಪ, ಶಿವಪ್ಪ, ಭೌರವ್ವ, ಇಂದರವ್ವ, ಶ್ರೀಶೈಲ, ಅಯ್ಯಪ್ಪ, ಬೀರಪ್ಪ, ಶಾಂತವ್ವ ಅಸಂಗಿ, ಲಕ್ಷ್ಮೀ ಮರನೂರು, ಸದು ದಳವಾಯಿ, ಮಾಳಪ್ಪ ವಾಲೀಕಾರ, ಅಶೋಕ ವಾಲೀಕಾರ ಇವರ ಹೆಸರಿಂದ ತಮ್ಮ ಕುಟುಂಬದ ಮೇಲೆ ರ್ದರ್ಜನ್ಯ ನಡೆಯುತ್ತಿದೆ ಎಂದು ಲಕ್ಷ್ಮೀಬಾಯಿ ವಿವರಿಸಿದ್ದಾಳೆ.
ಕಳೆದ ವರ್ಷ ನನ್ನ ಹಾಗೂ ನನ್ನ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಮನೆಯಲ್ಲಿ ನಗದು ಹಾಗೂ ಚಿನ್ನಾಭರಣ ದೋಚಿದ್ದರು. 2023 ಫೆಬ್ರವರಿ 17 ರಂದು ವಿಜಯಪುರ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೆವು ಎಂದು ಫೋಟೋ ಬಿಡುಗಡೆ ಮಾಡಿದ್ದಾಳೆ.
ಆಗ ಬಬಲೇಶ್ವರ ಠಾಣೆಗೆ ತೆರಳಿ ದೂರು ನೀಡಿದ್ದರೂ, ಪೊಲೀಸರು ಆರೋಪಿಗಳನ್ನು ಬಂಧಿಸಲಿಲ್ಲ. ಅಲ್ಲದೇ ಸದರಿ ಕೃತ್ಯಕ್ಕೆ ಸಾಕ್ಷಿಯಾಗಿದ್ದ ನನ್ನ ತಾಯಿ ನೀಲಮ್ಮ ಕಡ್ಲಿಮಟ್ಟಿ ಇವರ ಮೇಲೂ ಹಲ್ಲೆ ನಡೆಸಿದ್ದು, ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವಿವರಿಸಿದ್ದಾರೆ.
ನನ್ನ ಇಬ್ಬರು ಹೆಣ್ಣು ಮಕ್ಕಳು ಶೈಕ್ಷಣಿಕ ಭವಿಷ್ಯಕ್ಕಾಗಿ ವಿಜಯಪುರದ ಖಾಸಗಿ ಶಾಲೆಗಳಿಗೆ ಸೇರಿಸಿದ್ದು, ತೋಟದ ವಸ್ತಿಯಲ್ಲಿ ನಾನು ಹಾಗೂ ನನ್ನ ಪತಿ ಮಾತ್ರ ಇರುತ್ತೇವೆ. ಹೀಗಾಗಿ ನಿರ್ಜನ ಪ್ರದೇಶದಲ್ಲಿ ವಾಸ ಇರುವ ನಮ್ಮ ಮೇಲೆ ಹಗಲು ವೇಳೆಗಿಂತ ರಾತ್ರಿ ವೇಳೆ ಹೆಚ್ಚಾಗಿ ದೌರ್ಜನ್ಯಗಳು ನಡೆಯುತ್ತಿವೆ ಎಂದಿ ವಿವರಿಸಿದ್ದಾರೆ.
ಇದಾದ ಬಳಿಕ ನಾನು ಆಸ್ತಿ ವಿಷಯವಾಗಿ ಕಾನೂನು ಹೋರಾಟಕ್ಕಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲ ಮುಂದಾಗುತ್ತಲೇ ಮತ್ತೆ ನಮ್ಮ ಕುಟುಂಬದ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ವಿದ್ಯಾರ್ಥಿನಿಯರಾಗಿರುವ ನನ್ನ ಇಬ್ಬರು ಮಕ್ಕಳಿಗೆ ಹಾಗೂ ನಮಗೆ ರಕ್ಷಣೆ ಇಲ್ಲವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಮೇ 11 ರಂದು ಜಮೀನಿನಲ್ಲಿ ಕೆಲಸ ಮಾಡುವಾಗ ಟ್ರ್ಯಾಕ್ಟರ್ನಿಂದ ನಮ್ಮ ಭಾಗದ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು ನಾಶ ಮಾಡಿ, ನನ್ನ ಮೆಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಬಾರಿ ಪೊಲೀಸರು ನಾನು ದೂರು ಸ್ವೀಕರಿಸಿದರೂ, ಪ್ರಕರಣ ದಾಖಲಿಸದೇ ಬೆದರಿಸಿ ಕಳಿಸಿದ್ದಾರೆ ಎಂದು ಆರೋಪಿಸಿದ್ದಾಳೆ.
ಇಡೀ ಪ್ರಕರಣದಲ್ಲಿ ಪೊಲೀಸರು ಹಣ- ರಾಜಕೀಯ ಪ್ರಭಾವಕ್ಕೆ ಮಣಿದು ನಮಗೆ ರಕ್ಷಣೆ ನೀಡುತ್ತಿಲ್ಲ. ಆರ್ಥಿಕ ಶಕ್ತಿ, ರಾಜಕೀಯ ಪ್ರಭಾವ ಇಲ್ಲದ ನಮ್ಮ ಕುಟುಂಬಕ್ಕೆ ನಮ್ಮ ದಾಯಾದಿಗಳಿಂದ ಆಗುತ್ತಿರುವ ದೌರ್ಜನ್ಯ ಸಹಿಲು ಸಾಧ್ಯವಾಗುತ್ತಿಲ್ಲ. ಕಾರಣ ಪ್ರಾಥಮಿಕ-ಪೌಢ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಮಕ್ಕಳೊಂದಿಗೆ ನನಗೆ ಹಾಗೂ ನನ್ನ ಪತಿ ಸೇರಿ ಕುಟುಂಬದ ನಾಲ್ವರಿಗೆ ದಯಾ ಮರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.
ದಯಾ ಮರಣ ಕೋರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದಿರುವ ಮನವಿಯನ್ನು ರಾಜ್ಯದ ಗೃಹ ಸಚಿವರು, ಮಾನವ ಹಕ್ಕುಗಳ ಆಯೋಗ, ಪೊಲೀಸ್ ಇಲಾಖೆ ಡಿಜಿಪಿ, ಐಜಿಪಿ, ಎಸ್ಪಿ, ಡಿಎಸ್ಪಿ ಅವರಿಗೆ ಮನವಿ ಸಲ್ಲಿಸಿದ್ದಾಗಿ ಲಕ್ಷ್ಮಿಬಾಯಿ ಹೇಳಿದ್ದಾರೆ.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ](https://www.udayavani.com/wp-content/uploads/2024/07/vijaya-150x83.jpg)
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
![Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು](https://www.udayavani.com/wp-content/uploads/2024/07/hadagali-m-150x83.jpg)
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
![Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ](https://www.udayavani.com/wp-content/uploads/2024/07/basaa-150x83.jpg)
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
![6-vijayapura](https://www.udayavani.com/wp-content/uploads/2024/07/6-vijayapura-150x90.jpg)
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
![Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು](https://www.udayavani.com/wp-content/uploads/2024/07/Muddebihal-150x93.jpg)
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.