ವಿಜಯಪುರ: ಸುಟ್ಟು ಭಸ್ಮವಾದ ಕಲ್ಲಿದ್ದಲು ಸಾಗಿಸುತ್ತಿದ್ದ ಲಾರಿ
Team Udayavani, Feb 19, 2022, 12:04 PM IST
ವಿಜಯಪುರ: ಕಲ್ಲಿದ್ದಲು ಸಾಗಿಸುತ್ತಿದ್ದ ವೇಳೆ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು, ಲಾರಿ ಸಂಪೂರ್ಣ ಸುಟ್ಟು ಘಟನೆ ನಿಡಗುಂದಿ ತಾಲೂಕಿನ ಅಬ್ಬಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.
ಬಳ್ಳಾರಿಯಿಂದ ಮಹಾರಾಷ್ಟ್ರದ ಔರಂಗಾಬಾದ್ ಗೆ ಕಲ್ಲಿದ್ದಲು ಸಾಗಿಸುತ್ತಿದ್ದ ಎಂ.ಎಚ್. 18- ಎಎ 8738 ಸಂಖ್ಯೆಯ ಲಾರಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ:ಹಿಜಾಬ್ ವಿವಾದ: ಶಿವಮೊಗ್ಗದಲ್ಲಿ 58 ವಿದ್ಯಾರ್ಥಿಗಳು ಸಸ್ಪೆಂಡ್ ಆಗಿಲ್ಲ; ಡಿಸಿ ಗರಂ
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಬರುವ ವೇಳೆಗೆ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿತ್ತು. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.