Vijayapura: ಅತಿಥಿ ಉಪನ್ಯಾಸಕರಿಂದ ಸೇವೆ ಖಾಯಂಗೆ ರಕ್ತದಾನ ಚಳವಳಿ
34ನೇ ದಿನಕ್ಕೆ ಕಾಲಿರಿಸಿದ ಅನಿರ್ಧಿಷ್ಟಾವಧಿ ಮುಷ್ಕರ
Team Udayavani, Dec 27, 2023, 7:14 PM IST
ವಿಜಯಪುರ : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂ ಮಾಡುವಂತೆ ಆಗ್ರಹಿಸಿ ರಕ್ತದಾನ ಚಳವಳಿ ಮಾಡಿ ಗಮನ ಸೆಳೆದಿದ್ದಾರೆ. ಈ ಮಧ್ಯೆ ಅನಿರ್ಧಿಷ್ಟಾವಧಿ ಮುಷ್ಕರ ಬುಧವಾರ 34ನೇ ಕಾಲಿರಿಸಿದೆ.
ರಾಜ್ಯದ 420 ಕ್ಕೂ ಹೆಚ್ಚು ಕಾಲೇಜಿನಲ್ಲಿ ಕಳೆದ 15-20 ರ್ವಗಳಿಂದ ಸೇವೆ ಸಲ್ಲಿಸುತ್ತಿರುವ 10 ಸಾವಿರಕ್ಕೂ ಹೆಚ್ಚಿನ ಉಪನ್ಯಾಸಕರು ತಮ್ಮ ಸೇವೆ ಖಾಯಂ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಹಿಂದಿನ ಸರ್ಕಾರಗಳು ಹಾಗೂ ಹಾಲಿ ಸರ್ಕಾರ ಸೇರಿದಂತೆ ಎಲ್ಲರೂ ಅತಿಥಿ ಉಪನ್ಯಾಸಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಪ್ರತಿಭಟನಾ ನಿರತ ಉಪನ್ಯಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಕಾಲೇಜುಗಳಲ್ಲಿ ಸೇವೆ ನಮ್ಮ ಸೇವೆ ಪಡೆಯುತ್ತಿರುವ ಸರ್ಕಾರ ನಮಗೆ ಉದ್ಯೋಗ ಭಧ್ರತೆ ನೀಡಬೇಕು. ಇದಕ್ಕಾಗಿ ಕಳೆದ ಒಂದು ತಿಂಗಳಿಂದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ, ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರೂ ಸರ್ಕಾರ ಗಂಭೀರವಾಗಿಲ್ಲ ಎಂದು ಕಿಡಿ ಕಾರಿದರು.
ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷ ಡಾ.ಆನಂದ ಕುಲಕರ್ಣಿ, ರಮೇಶ ಕಡೇಮನಿ, ಡಾ.ರಾಜು ಚವ್ಹಾಣ, ಎಂ.ಬಿ.ಪಾಟೀಲ, ರಮೇಶ ತೇಲಿ, ರಮೇಶ ನಾಗರಡ್ಡಿ, ರಾಜು ದಾಯಗೊಂಡ, ರೇಣುಕಾ ಹೆಬ್ಬಾಳ, ಸುರೇಖಾ ಪಾಟೀಲ, ಭಾರತಿ ಇನಾಮದಾರ, ಭಾರತಿ ಹಿರೇಮಠ, ಶಿಲ್ಪಾ ಉಕ್ಕಲಿ, ವೀಣಾ ಕಡಕೆ, ಭಾರತಿ ಹೊನವಾಡ, ಕೆ.ಎ.ಪಾಟೀಲ, ಎಸ್.ಐ.ಯಂಭತ್ನಾಳ, ಎಲ್.ಎ.ಪಾಟೀಲ, ಎಂ.ಆರ್. ತಿಪಶೆಟ್ಟಿ, ಮಂಜುಳಾ ಭಾವಿಕಟ್ಟಿ, ಉಮೇಶ ಹಿರೇಮಠ, ಮಹಾಲಕ್ಷ್ಮೀ ಪಾಟೀಲ, ಭಾಗ್ಯಶ್ರೀ ಮೊರೆ, ಆನಂದ ಹಿರೇಮಠ, ಸುನೀಲ ಅಂಗಡಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ