Vijayapura: ಸೈಕಲ್, ಟೈರ್ ಗೋದಾಮಿಗೆ ಅಗ್ನಿ ಅವಘಡ : ಲಕ್ಷಾಂತರ ಹಾನಿ
Team Udayavani, Dec 30, 2023, 9:04 AM IST
ವಿಜಯಪುರ: ನಗರದಲ್ಲಿನ ಸೈಕಲ್, ಟೈರ್ ಗೋದಾಮಿನಲ್ಲಿ ಡಿ.30ರ ಶನಿವಾರ ಬೆಳಿಗ್ಗೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ.
ನಗರದ ಗಣಪತಿ ಚೌಕ್ ಪ್ರದೇಶದಲ್ಲಿರುವ ಎನ್.ಜೆ. ಮೆಹ್ತಾ ಸೈಕಲ್ಸ್ ಸಂಸ್ಥೆಯ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ.
ಗೋದಾಮಿಗೆ ಬೆಂಕಿ ಆವರಿಸುತ್ತಲೇ ಇಡೀ ಪ್ರದೇಶದಲ್ಲಿ ಭಾರಿ ಪ್ರಮಾಣದ ಹೊಗೆ ಆವರಿಸಿದ್ದು, ವ್ಯಾಪಾರಿ ಕೇಂದ್ರವಾಗಿರುವ ಈ ಪ್ರದೇಶದ ನಿವಾಸಿಗಳು, ಉದ್ಯಮಿಗಳು ಆತಂಕದಲ್ಲಿದ್ದರು.
ಆದರೆ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸೇವೆ ಸಿಬಿಎಸ್, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ನಷ್ಟದ ಅಂದಾಜು ಇನ್ನೂ ಸ್ಪಷ್ಟವಾಗಿಲ್ಲ.
ಸ್ಥಳಕ್ಕೆ ಧಾವಿಸಿರುವ ಎಪಿಎಂಸಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ