Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ


Team Udayavani, Jun 10, 2023, 7:57 PM IST

1rewe

ವಿಜಯಪುರ : ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ಶನಿವಾರ ನಡೆದ ಕಾರಹುಣ್ಣಿಮೆಯೆ ಕರಿ ಹಬ್ಬದಲ್ಲಿ ಕರಿ ಹರಿಯಲು ಓಡಿಸಿದ್ದ ಹೋರಿ ಇರಿತಕ್ಕೆ 8 ಜನರು ಗಾಯಗೊಂಡಿರುವ ಘಟನೆ ವರದಿಯಗಿದೆ.

ಕಾಖಂಡಕಿ ಗ್ರಾಮದಲ್ಲಿ ಕರಿ ಹರಿಯುವ ಹಬ್ಬ ಭಾರಿ ಖ್ಯಾತಿ ಪಡೆದಿರುವ ಕಾರಣ ರಾಜ್ಯದ ಮೂಲೆ ಮೂಲೆಗಳಿಂದ ಹತ್ತಾರು ಸಾವಿರ ಜನರು ಕರಿ ಹರಿಯುವ ಹಬ್ಬ ವೀಕ್ಷಣೆಗೆ ಬಂದಿದ್ದರು. ಶನಿವಾರ ಸಂಜೆ ಪ್ರತಿ ವರ್ಷದಂತೆ ಕರಿ ಹರಿಯಲು ಓಡಿಸುವ ಹೋರಿ-ಎತ್ತುಗಳು ಮಾರ್ಗದ ಇಕ್ಕೆಲಗಳಲ್ಲಿ ನಿಂತಿದ್ದ ಪ್ರೇಕ್ಷಕರ ಮೇಲೆ ದಾಳಿ ನಡೆಸಿವೆ.

ಘಟನೆಯಲ್ಲಿ ಸುಮಾರು 8 ಜನರು ಗಾಯಗೊಂಡಿದ್ದು, ಒಂದಿಬ್ಬರಿಗೆ ಗಂಭೀರ ಇರಿತವಾಗಿವೆ ಎಂಬ ಮಾಹಿತಿ ಇದೆ. ಗಾಯಾಳುಗಳನ್ನು ಕೂಡಲೇ ಅಂಬ್ಯುಲೆನ್ಸ್ ಮೂಲಕ ಬಬಲೇಶ್ವರ ಹಾಗೂ ವಿಜಯಪುರ ಜಿಲ್ಲಾ ಕೇಂದ್ರದ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಮಧ್ಯಾಹ್ನ 3 ಗಂಟೆಯಿಂದಲೇ ಗ್ರಾಮ ಕರಿ ಹರಿಯುವ ಓಣಿಗಳ ರಸ್ತೆಗಳಲ್ಲಿ, ಮನೆಗಳು, ವಿದ್ಯುತ್ ಕಂಬ, ಗಿಡ-ಮರಗಳನ್ನು ಏರಿ ಹತ್ತಾರು ಸಾವಿರಾರು ಸಂಖ್ಯೆಯ ಪ್ರೇಕ್ಷಕರು ನೆರೆದಿದ್ದರು. ಈ ಹಂತದಲ್ಲಿ ಕೆಲಕಾಲ ಜೋರಾದ ಮಳೆ ಸುರಿದರೂ ನೆರೆದ ಜನರು ಮಳೆ ಹನಿಗೆ ಹಿಂಜರಿಯದೇ ಕಾಖಂಡಕಿ ಕರಿ ಹರಿಯುವ ಹಬ್ಬವನ್ನು ಕಣ್ತುಂಬಿಕೊಂಡರು.

ಈ ಬಾರಿ ಸುಮಾರು 40ಕ್ಕೂ ಹೆಚ್ಚು ಹೋರಿ-ಎತ್ತುಗಳನ್ನು ಕರಿ ಹರಿಯುವ ಹಬ್ಬದಲ್ಲಿ ಓಡಿಸಲಾಗಿದೆ. ಕಾಖಂಡಕಿ ಗ್ರಾಮದ ರಾಮನಗೌಡ ಪಾಟೀಲ ಅವರ ಕೆಂಪು ಮತ್ತು ಬಿಳಿ ಎತ್ತುಗಳನ್ನು ವಾದ್ಯ ಮೇಳದೊಂದಿಗೆ ಹಿಮ್ಮುಖವಾಗಿ ಅಗಡಿ ಬಾಗಿಲಿಗೆ ಕರೆತಂದು ಓಡಿಸಲಾಗಿತ್ತು.
ಈ ಬಾರಿ ಬಿಳಿಯ ಎತ್ತು ಮುಂದೆ ಓಡಿವೆ. ಕಾರಣ ಗ್ರಾಮೀಣ ಜನರ ಪಾರಂಪರಿಕ-ಜಾನಪದ ನಂಬಿಕೆಯಂತೆ ಕೃಷಿ ಉತ್ಪನ್ನ, ಬೆಳೆ-ಇಳುವರಿಯಲ್ಲಿ ಬಿಳಿ ಪದಾರ್ಥಗಳು ಹೆಚ್ಚು ಇಳುವರಿ ನೀಡಲಿವೆ ಎಂದು ಅಚಿದಾಜಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಬಬಲೇಶ್ವರ ಪೊಲೀಸ್ ಠಾಣೆ ಎಸೈ ನೇತೃತ್ವದಲ್ಲಿ ಅಗತ್ಯ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

Wheelchair Cricket: ರಾಷ್ಟ್ರ ಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡದ ನಾಯಕನಾಗಿ ಮಹೇಶ್ ಆಯ್ಕೆ

2-vijayapura

Family Issues: ಕೌಟುಂಬಿಕ ಕಲಹ ಪತ್ನಿ, ಪತ್ನಿಯ ತಾಯಿ ಹತ್ಯೆ: ಪೊಲೀಸ್ ಠಾಣೆಗೆ ಶರಣಾದ ಆರೋಪಿ

1-sdas

Vijayapura: ಕೊಲ್ಹಾರ ಪಟ್ಟಣದ ಮಹಿಳೆ ಮೂವರು ಮಕ್ಕಳೊಂದಿಗೆ ನಾಪತ್ತೆ

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

Congress ನಾಯಕರಿಗೆ ತಾಕತ್ತಿದ್ದರೆ ಹರಿಪ್ರಸಾದ್ ವಿರುದ್ಧ ಕ್ರಮ ಕೈಗೊಳ್ಳಲಿ: ಯತ್ನಾಳ್

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-asdasd

Jog Falls ಸಮೀಪದ ದೇವಿಗುಂಡಿಯಲ್ಲಿ ಇಬ್ಬರು ನೀರುಪಾಲು

1-asad

Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.