ವಿಜಯಪುರ: ಬೆಂಗಳೂರು ಬಸ್ ಗಳು ಫುಲ್, ಇತರೆ ಕಡೆಗೆ ಡಲ್
Team Udayavani, May 25, 2020, 9:14 AM IST
ವಿಜಯಪುರ: ಭಾನುವಾರದ ಕರ್ಫ್ಯೂ ಬಳಿಕ ಬಂದ ರಂಜಾನ್ ಹಬ್ಬದ ದಿನವಾದ ಸೋಮವಾರ ಜನ ಸಾರಿಗೆಗೆ ಅವಕಾಶ ನೀಡಿದ್ದರೂ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕೋವಿಡ್-19 ಭಯದಿಂದಾಗಿ ಪ್ರಯಾಣಿಕರು ಬಸ್ ನಿಲ್ದಾಣದತ್ತ ಮುಖ ಮಾಡದ ಕಾರಣ ನಿಲ್ದಾಣ ಬಿಕೋ ಎನ್ನುತ್ತಿದೆ.
ಆದರೆ ಬೆಂಗಳೂರು ನಗರಕ್ಕೆ ತೆರಳುವ ಬಸ್ ಪೂರ್ಣ ಭರ್ತಿಯಾಗಿ ತನ್ನ ಸಂಚಾರ ಆರಂಭಿಸಿವೆ. ಬೆಂಗಳೂರು ಹೊರತುಪಡಿಸಿ ಇತರೆ ಕಡೆ ಪ್ರಯಾಣಕ್ಕೆ ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆಗೆ ಗ್ರಾಮೀಣ ಸಾರಿಗೆ ಆರಂಭಗೊಳ್ಳದಿರುವುದೂ ಪ್ರಮುಖ ಕಾರಣ.
ಜಿಲ್ಲಾ – ತಾಲೂಕಾ ಕೇಂದ್ರಗಳಿಗೆ ಮಾತ್ರ ಸೇವೆ ಆರಂಭಿಸಿದ್ದು, ಸರ್ಕಾರದ ಸೂಚನೆ ಬಳಿಕ ಗ್ರಾಮೀಣ ಪ್ರದೇಶಕ್ಕೆ ಬಸ್ ಸಂಚಾರ ಆರಂಭಿಸುವುದಾಗಿ ಎನ್ಇಕೆಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದೆಡೆ ಕಳೆದ ಎರಡು ತಿಂಗಳಿಂದ ಸಂಪೂರ್ಣ ಸೇವೆ ಸ್ಥಗಿತಗೊಳಿಸಿರುವ ರೈಲ್ವೇ ಇಲಾಖೆ, ಸೇವೆ ಮರು ಆರಂಭಕ್ಕೆ ಸರ್ಕಾರದ ಸೂಚನೆಗೆ ಕಾಯುತ್ತಿದೆ. ಹೀಗಾಗಿ ವಿಜಯಪುರ ರೈಲು ನಿಲ್ದಾಣ ಕೂಡ ಜನರಿಲ್ಲದೇ ಬಿಕೋ ಖಾಲಿ ಖಾಲಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್