Vijayapura; ಟೈರ್ ಸ್ಪೋಟಗೊಂಡು ಹೊತ್ತಿ ಉರಿದ ಬಸ್: ಪ್ರಯಾಣಿಕರು ಪಾರು
Team Udayavani, Dec 15, 2023, 9:41 AM IST
ವಿಜಯಪುರ: ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ವಿಜಯಪುರ ನಗರಕ್ಕೆ ಬರುತ್ತಿದ್ದ ಚಲಿಸುತ್ತಿದ್ದ ಖಾಸಗಿ ಬಸ್ ಟೈರ್ ಸ್ಫೋಟಗೊಂಡು ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲ ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ವಿಜಯಪುರ ನಗರಕ್ಕೆ ಬರುತ್ತಿದ್ದ ಖಾಸಗಿ ಸಾರಿಗೆ ಸಂಸ್ಥೆಯ ಬಸ್ ನಗರದ ಹೊರ ವಲಯದಲ್ಲಿರುವ ಹಿಟ್ನಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಚಲಿಸುವಾಗ ಇದ್ದಕ್ಕಿದ್ದಂತೆ ಬಸ್ ನ ಟೈರ್ ಸ್ಫೋಟಗೊಂಡು, ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಕೂಡಲೇ ಚಾಲಕ್ ಬಸ್ ನಿಯಂತ್ರಣಕ್ಕೆ ತಂದುಕೊಂಡು ನಿಲ್ಲಿಸಿ, ಗಾಬರಿಯಾಗಿದ್ದ ಪ್ರಯಾಣಿಕರನ್ನು ಬಸ್ ನಿಂದ ಕೆಳಗೆ ಇಳಿಯಲು ಸೂಚಿಸಿದ್ದಾನೆ.
ಇದನ್ನೂ ಓದಿ:Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ
ನಸುಕಿನ ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಜೀವಭಯದಲ್ಲಿ ಹಣ, ಚಿನ್ನದಂಥ ಬೆಲೆ ಬಾಳುವ ವಸ್ತುಗಳನ್ನೆಲ್ಲ ಬಸ್ ನಲ್ಲೆ ಬಿಟ್ಟು ಕೆಳಗೆ ಇಳಿದಿದ್ದು, ಯಾರಿಗೂ ಅಪಾಯವಾಗಿಲ್ಲ.
ಪ್ರಯಾಣಿಕರು ಕೆಳಗೆ ಇಳಿದ ಕ್ಷಣ ಮಾತ್ರದಲ್ಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ದೌಡಾಯಿಸಿರುವ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ