ಗಾಂಧಿ ಆಶಯದಂತೆ ಪೌರತ ತಿದ್ದುಪಡಿ ಕಾಯ್ದೆ ಜಾರಿ
ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಂದ ಅಪ ಪ್ರಚಾರ
Team Udayavani, Jan 13, 2020, 1:40 PM IST
ವಿಜಯಪುರ: ಧರ್ಮದ ಆಧಾರದಲ್ಲಿ ದೇಶವನ್ನು ಇಬ್ಭಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಪೌರತ್ವದ ಕುರಿತು ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಬೀದರ ಸಂಸದ ಭಗವಂತ ಕೂಬಾ ಹೇಳಿದರು.
ರವಿವಾರ ಸಂಜೆ ನಗರದ ದರಬಾರ್ ಪ್ರೌಢ ಶಾಲೆ ಮೈದಾನದಲ್ಲಿ ಆಯೋಜಿಸಿದ್ದ ಪೌರತ್ವ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲೇ ಪಾಕಿಸ್ತಾನವನ್ನು ವಿಭಜಿಸಿದ್ದರೂ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳು ಭಾರತಕ್ಕೆ ಯಾವಾಗ ಬೇಕಾದರೂ ಮರಳಬಹದು ಎಂದು ಗಾಂಧೀಜಿ ಹೇಳಿದ್ದರು.
ಇದಕ್ಕೆ ಪೂರಕವಾಗಿ ಮೋದಿ ಸರ್ಕಾರ ಜಾರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಆದರೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಧರ್ಮಾಧಾರಿತ ಪೌರತ್ವ ಕಾಯ್ದೆ ಎಂದು ಅಪಪ್ರಚಾರದಲ್ಲಿ ತೊಡಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರ್ಮದ ಹೆಸರಿನಲ್ಲೇ ಪಾಕಿಸ್ತಾನ ವಿಭಜನೆಯಾದ ಬಳಿಕ ಪಾಕಿಸ್ತಾನದಲ್ಲಿ ಉಳಿದಿರುವ ಅಲ್ಪಸಂಖ್ಯಾತ ಹಿಂದೂಗಳಿಗೆ ಭಾರತದ ಮುಸ್ಲಿಂ ಅಲ್ಪಸಂಖ್ಯಾತರಿಗೆ ಸಿಕ್ಕಂತೆ ಮೂಲಭೂತ ಸೌಲಭ್ಯಗಳು ಸಿಕ್ಕಿಲ್ಲ. ಧಾರ್ಮಿಕ ಹಕ್ಕುಗಳ ರಕ್ಷಣೆ ಇಲ್ಲವಾಗಿದೆ. ಇದನ್ನು ಅರಿಯದೇ ಪೌರತ್ವದ ವಿಷಯದಲ್ಲಿ ಪೌರತ್ವ ಕಾಯ್ದೆಯ ವಾಸ್ತವ ಅರಿಯದೇ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪೌರತ್ವ ವಿರೋಧ ಹೋರಾಟಕ್ಕೆ ಪ್ರಚೋದನೆ ನೀಡುತ್ತಿರುವುದು ಸಲ್ಲದ ಕ್ರಮ ಎಂದು ವಾಗ್ಧಾಳಿ ನಡೆಸಿದರು.
ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಭಾರತದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಕ್ಕೆ ಸದರಿ ಕಾಯ್ದೆಯ ಜಾರಿಯಿಂದ ಮುಸ್ಲಿಂ ಸಮುದಾಯಕ್ಕೆ ಯಾವುದೇ ಬಾಧಕ ಇಲ್ಲ ಎಂಬುದು ಭವಿಷ್ಯದಲ್ಲಿ ಮನವರಿಕೆ ಆಗಲಿದ್ದು, ಕಾಂಗ್ರೆಸ್ ಕುತಂತ್ರದ ಕುರಿತೂ ಅರಿವಾಗಲಿದೆ ಎಂದರು.
ಅರಣ್ಯ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ದೇಶದಲ್ಲಿ ಮೋದಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುವ ಮುನ್ನ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ವಿಪಕ್ಷಗಳು ಪೌರತ್ವ ಕಾಯ್ದೆ ಕುರಿತು ಸೂಕ್ತ ಹಾಗೂ ಸಮರ್ಥವಾಗಿ ಅರಿಯಲು ಮುಂದಾಗಲಿ ಎಂದು ಕುಟುಕಿದರು. ಆದರೆ ಕಾಯ್ದೆ ಕುರಿತು ಸೂಕ್ತ ಮಾಹಿತಿ ಇಲ್ಲದ ಕೆಲವರಿಂದ ನಡೆಸದ ಪ್ರಚೋದನೆಯಿಂದ ಮಂಗಳೂರು ನಗರದಲ್ಲಿ ವ್ಯವಸ್ಥಿತ ಗಲಭೆ ಸೃಷ್ಟಿಸುವ ಮೂಲಕ ಸಮಾಜದಲ್ಲಿ ಭಾರಿ ಪ್ರಮಾಣದಲ್ಲಿ ಹಾನಿ ಮಾಡುವ ಹುನ್ನಾರ ನಡೆದಿತ್ತು. ಆದರೆ ಸುದೈವಶಾತ್ ಅಲ್ಲಿನ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಮಟ್ಟದಲ್ಲಿ ನಡೆಯಲಿದ್ದ ಆನಾಹುತ ತಪ್ಪಿದೆ.ಹೀಗಾಗಿ ಇಂಥ ಸಂದರ್ಭದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳುವುದು ನಮ್ಮೆಲರ ಹೊಣೆ ಎಂದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆ ಇಲ್ಲ ಎಂದರು. ಇದೇ ವೇಳೆ ಜಿಲ್ಲೆಯ ಬಿಜೆಪಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಆರ್. ಎಸ್. ಪಾಟೀಲ ಕೂಚಬಾಳ ಅವರನ್ನು ಸಂಸದ ಭಗವಂತ ಖೂಬಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅಭಿನಂದಿಸಿದರೆ, ಸಂಸದ ಭಗವಂತ ಖೂಬಾ ಆವರಿಗೆ ಸಿದ್ದರಾಮೇಶ್ವರ ಶರಣರ ಭಾವಚಿತ್ರ ನೀಡಿ ಗೌರವಿಸಲಾಯಿತು.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮಾಜಿ ಸಚಿವರಾದ ಎಸ್.ಕೆ. ಬೆಳ್ಳುಬ್ಬಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಜುಗೌಡ ಪಾಟೀಲ, ಡಾ| ಗೋಪಾಲ ಕಾರಜೋಳ, ದಯಾಸಾಗರ ಪಾಟೀಲ, ಸಂಗರಾಜ ದೇಸಾಯಿ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ